ಚಳ್ಳಕೆರೆ ಫೆ.22 ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರ ಸಭೆಯನ್ನು ಶನಿವಾರ ದಿನಾಂಕ24 ರ ಬೆಳಗ್ಗೆ10.30 ನಗರದ ಬೆಂಗಳೂರು ರಸ್ತೆಯ ದಲ್ಲಾಲರ ಸಮುದಾಯ ಭವನದಲ್ಲಿ ಆಯೋಜಿದ್ದು ಜೆಡಿಎಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಚಳ್ಳಕೆರೆ ತಾಲೂಕಿನ ಜಾತ್ಯತೀತ ಜನತಾದಳ ಪಕ್ಷದ ವತಿಯಿಂದ ಕಾರ್ಯಕರ್ತರು ಹಾಗೂ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡುವ ಮೂಲಕ ಸಭೆಯನ್ನು ಯಶಸ್ವಿಗೊಳಿಸುವಂತೆ ತಾಲೂಕು ಜೆಡಿಎಸ್ ಪಕ್ಷದ ಅಧ್ಯಕ್ಷ ಪಿ.ತಿಪ್ಪೇಸ್ಚಾಮಿ(ಪಿ.ಟಿ)ತಿಳಿಸಿದ್ದಾರೆ. ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ
ಜೆ ಡಿ ಎಸ್ ಜಿಲ್ಲಾಧ್ಯಕ್ಷ ಜಯಣ್ಣ, ಮಾಜಿ ಶಾಸಕ ತಿಮ್ಮರಾಯಪ್ಪ, ರಾಜ್ಯ ಪರಿಷತ್ ಸದಸ್ಯ ಯಶೋದರ, ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಂತರಾಜ್,ಚಳ್ಳಕೆರೆ ಜೆಡಿಎಸ್ ಪರಾಜಿತ ಅಭ್ಯರ್ಥಿ ಎಂ.ರವೀಶ್ ಕುಮಾರ್, ಹಿರಿಯೂರು ಪರಾಜಿತ ಅಭ್ಯರ್ಥಿ ರವೀಂದ್ರಪ್ಪ, ಚಳ್ಳಕೆರೆ ಜೆಡಿಎಸ್ ಕಾರ್ಯಧ್ಯಕ್ಷ ಹೆಗ್ಗೆರೆ ಆನಂದಪ್ಪ ಇತರರು ಭಾಗವಹಿಸಲಿದ್ದಾರೆ ನಿಗಧಿತ ಸಮಯಕ್ಕೆ ಸರಿಯಾಗಿ ಪೂರ್ವಭಾವಿ ಸಭೆಗೆ ಹಾಜರಿಯಾಗುವಂತೆ ಮನವಿ ಮಾಡಿಕೊಂಡಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments