ಶಾರದಾಶ್ರಮದಲ್ಲಿ ಶ್ರದ್ಧಾಭಕ್ತಿಯ ಶ್ರೀ ಶಾರದಾದೇವಿ ಜಯಂತಿ

by | 25/12/23 | ಸುದ್ದಿ


ಚಳ್ಳಕೆರೆ:ಭಗವಾನ್‌ ಶ್ರೀ ರಾಮಕೃಷ್ಣಪರಮಹಂಸರ ಪತ್ನಿ ಶ್ರೀ ಶಾರದಾದೇವಿ ಅವರ ಜನ್ಮದಿನಾಚರಣೆ ನಗರದ ವಾಸವಿ ಕಾಲೋನಿಯಲ್ಲಿರುವ ಶಾರದಾಶ್ರಮದಲ್ಲಿ ಸೋಮವಾರ ಶ್ರದ್ಧಾಭಕ್ತಿಯಿಂದ ನಡೆಯಿತು.

 ಜನ್ಮದಿನದ ಅಂಗವಾಗಿ ಬೆಳಗ್ಗೆ ಶಾರದಾದೇವಿ ಅರ್ಚನೆ ಹೋಮ ಭಜನೆ ವೇದಘೋಷ, ವಿಶೇಷ ಪೂಜೆ,. ಶ್ರೀ ಶಾರದಾ ಮೂಲ ಮಂತ್ರ ಹೋಮ ಜರುಗಿತು.

ಭಕ್ತರಿಂದ ಸಾಮೂಹಿಕ ಭಜನೆ, ಸ್ತ್ರೋತ್ರ ಪಠಣ, ನಾಮ ಸಂಕೀರ್ತನೆ ನಡೆದವು. ಹೋಮದ ಪೂರ್ಣಾಹುತಿ ಮತ್ತು ಮಹಾಮಂಗಳಾರತಿ ನಂತರ ಸಾರ್ವಜನಿಕ ಅನ್ನಸಂತರ್ಪಣೆ ಜರುಗಿತು.

ಇದೇ ವೇಳೆ ನಡೆದ ಧಾರ್ಮಿಕ ಸಮಾರಂಭದ‌ ಅಧ್ಯಕ್ಷತೆ ವಹಿಸಿದ್ದ ಹಿರಿಯೂರಿನ ಶಾರದಾಶ್ರಮ ಮಠದ ಚೈತನ್ಯ ಮಯೀ ಮಾತಾಜಿ ಮಾತನಾಡಿ, ತಮ್ಮ ಸಾಧನೆ, ತ್ಯಾಗ ಮತ್ತು ಪರಿಶ್ರಮದಿಂದ ಶ್ರೀ ರಾಮಕೃಷ್ಣ ಪರಮಹಂಸರು ಹಾಗೂ ವೀರಸನ್ಯಾಸಿ ಸ್ವಾಮಿ ವಿವೇಕಾನಂದರನ್ನು ಆಧ್ಯಾತ್ಮಿಕವಾಗಿ ಬೆಳೆಸಿದ ಮಹಾನ್‌ ಶಕ್ತಿ ಶ್ರೀಶಾರದಾದೇವಿಯವರದು ಇಂದಿನ ಪೀಳಿಗೆಗೆ ಶ್ರೀಮಾತೆ ಶ್ರೀ ಶಾರದಾದೇವಿ ಯವರ ಬದುಕು, ತತ್ವ, ಸಂದೇಶ ಮತ್ತು ಆದರ್ಶಗಳು ದಾರಿ ದೀಪವಾಗಬೇಕು. ಎಲ್ಲರೂ ಅವುಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ನಗರದ ಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಶ್ರೀ ತ್ಯಾಗಮಯಿ ಮಾತಾಜಿ ಮಾತನಾಡಿ ಶಾರದಾದೇವಿಯವರ ವ್ಯಕ್ತಿತ್ವ ಗಂಗಾ ನದಿಯ ಪಾವಿತ್ರತೆಯನ್ನು ಹೊಲುತ್ತಿತ್ತು ಶಾರದಾದೇವಿಯವರ ಜೀವನ ಗಾಂಭೀರ್ಯ ಚಾರಿತ್ರ್ಯ ತೇಜಸ್ಸು ಹೊಂದಿತ್ತು ಶಾರದ ದೇವಿಯವರ ಕೀರ್ತನೆಗಳನ್ನು ಹಾಗೂ ಪುಸ್ತಕಗಳನ್ನು ಹೆಚ್ಚು ಓದಿದಷ್ಟು ಅವರ ಆದರ್ಶಗಳ ಮಹತ್ವ ತಿಳಿಯುತ್ತ ಹೋಗುತ್ತದೆ ಕೇವಲ ಓದಿದರೆ ಸಾಲದು ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ತಮ್ಮ ಜೀವನ ಉತ್ತಮ ಸ್ಥಿತಿಯಲ್ಲಿ ಸುಧಾರಿಸಲು ಸಾಧ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಶಾರದಾದೇವಿ ಜೀವನ ಗಂಗಾ ಪರೀಕ್ಷೆಯ ವಿಜೇತ ಬಹುಮಾನವನ್ನು ಸುಷ್ಮಾ, ಶುಭ ಮುಕುಂದ, ನಯನರವರಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಶಾರದಾಶ್ರಮದ ಭಕ್ತವೃಂದ ಭಾಗವಹಿಸಿತ್ತು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page