ಶಾಲಾ ದಾಖಲಾತಿಯಲ್ಲಿ ವಿದ್ಯಾರ್ಥಿ ಹೆಸರು, ಜನ್ಮದಿನಾಂಕ ಸೇರಿ ಇತರೆ ತಿದ್ದುಪಡಿ : ರಾಜ್ಯ ಸರ್ಕಾರದಿಂದ ಪರಿಷ್ಕೃತ ಸುತ್ತೋಲೆ

by | 25/02/23 | ಶಿಕ್ಷಣ

ಬೆಂಗಳೂರು : ವಿದ್ಯಾರ್ಥಿಗಳ ಶಾಲಾ ದಾಖಲಾತಿಗಳಲ್ಲಿ ವಿದ್ಯಾರ್ಥಿ ಹೆಸರು/ಪೋಷಕರ ಹೆಸರು, ಜನ್ಮದಿನಾಂಕ, ಜಾತಿ ಇತ್ಯಾದಿ ತಿದ್ದುಪಡಿ ಸಂಬಂದ ರಾಜ್ಯ ಸರ್ಕಾರ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ.ಶಾಲಾ ದಾಖಲಾತಿಗಳಲ್ಲಿ ವಿದ್ಯಾರ್ಥಿ ಹೆಸರು/ಪೋಷಕರ ಹೆಸರು, ಜಾತಿ, ಜನ್ಮ ದಿನಾಂಕ ಇತ್ಯಾದಿ ತಿದ್ದುಪಡಿ ಮಾಡುವ ಸಂಬಂಧ, ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾರ್ಗದರ್ಶನವನ್ನು ನೀಡಿ ಅಧಿಕಾರವನ್ನು ಉಲ್ಲೇಖಿತ ಸುತ್ತೋಲೆಗಳಲ್ಲಿ ಜಿಲ್ಲಾ ಉಪನಿರ್ದೇಶಕರಿಗೆಪ್ರತ್ಯಾಯೋಜಿಸಿ ಅದರಂತೆ ಕ್ರಮವಹಿಸಲಾಗುತ್ತಿದೆ.ಈ ಪ್ರಕ್ರಿಯೆಯು ವಿಳಂಬವಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ಆಕ್ಷೇಪಣೆಗಳು ಬಂದಿರುತ್ತವೆ, ಅಲ್ಲದೇ ಈ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿಧಾನ ಸಭೆ ಅರ್ಜಿ ಸಮಿತಿಯಲ್ಲಿ ಅರ್ಜಿ ದಾಖಲಾಗಿ ಸದರಿ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ:26/02/2015ರಂದು ನಡೆದ ಸಮಿತಿಯ ಸಭೆಯಲ್ಲಿ ತಿದ್ದುಪಡಿ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಲು ಪರಿಷ್ಕೃತ ಸುತ್ತೋಲೆಯನ್ನು ಹೊರಡಿಸುವಂತೆ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಅಸ್ತಿತ್ವದಲ್ಲಿರುವ ಸುತ್ತೋಲೆಗಳನ್ನು ರದ್ದುಪಡಿಸಿ ಈ ಕೆಳಕಂಡಂತೆ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ.

01 ಒಂದನೇ ತರಗತಿಯಿಂದ ಎಸ್.ಎಸ್.ಎಲ್.ಸಿ. ತರಗತಿಯವರೆಗೆ ಓದುತ್ತಿರುವ ವಿದ್ಯಾರ್ಥಿಗಳ ಜನ್ಮ ದಿನಾಂಕಗಳಲ್ಲಿ ಕ್ಯಾಲೆಂಡರ್ ತಿಂಗಳಲ್ಲಿ ಇಲ್ಲದ ದಿನಾಂಕಗಳು ಉದಾಹರಣೆಗೆ ಫೆಬ್ರವರಿ 30, ಏಪ್ರಿಲ್ 31, ಜೂನ್ 31 ಇತ್ಯಾದಿಗಳ ಬಗ್ಗೆ ತಿದ್ದುಪಡಿ ಕೋರಿ ಸಲ್ಲಿಸುವ ಅರ್ಜಿಗಳನ್ನು ಸಂಬಂಧಪಟ್ಟ ಶಾಲೆಯ ಮುಖ್ಯೋಪಾಧ್ಯಾಯರ ಹಂತದಲ್ಲಿಯೇ ಪರಿಶೀಲಿಸಿ, ತಕ್ಷಣವೇ ಸಂಬಂಧಪಟ್ಟ ಬಿ.ಇ.ಒ ರವರಿಗೆ ಪ್ರಸ್ತಾವನೆ ಸಲ್ಲಿಸಿ ಅನುಮತಿ ಪಡೆದು ನಂತರ ಸಂಬಂಧಪಟ್ಟ ಶಾಲಾ ಮುಖ್ಯಶಿಕ್ಷಕರು ತಿದ್ದುಪಡಿ ಮಾಡಲು ಕ್ರಮವಹಿಸುವುದು,

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಹೆಸರು, ಪೋಷಕರ ಹೆಸರು, ಮತ್ತು ಜನ್ಮ ದಿನಾಂಕ ಮೊದಲಾದವುಗಳನ್ನು ಓ.ಎಂ.ಆರ್ ಶೀಟ್‌ನಲ್ಲಿ (ಶಾಲಾ ದಾಖಲಾತಿ ವಹಿಯಲ್ಲಿರುವಂತೆ) ಭರ್ತಿ ಮಾಡುವಾಗ ಎಚ್ಚರಿಕೆಯಿಂದ ದೋಷಗಳಿಗೆ ಅವಕಾಶ ನೀಡದಂತೆ ಭರ್ತಿ ಮಾಡಲು ಸಂಬಂಧಪಟ್ಟ ಶಾಲೆಯ ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಲಾಗಿದೆ. ತಪ್ಪಾದಲ್ಲಿ ಆಯಾ ಶಾಲೆಯ ಮುಖ್ಯೋಪಾಧ್ಯಾಯರನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದು.
ಎಸ್.ಎಸ್.ಎಲ್.ಸಿ. ಅಂಕಪಟ್ಟಿಯಲ್ಲಿ ವಿದ್ಯಾರ್ಥಿಯ/ಪೋಷಕರ ಹೆಸರಿನಲ್ಲಿ spelling, Initial, ಹುಟ್ಟಿದ ದಿನಾಂಕ ತಿದ್ದುಪಡಿ, ಇದ್ದಲ್ಲಿ ಸಂಬಂಧಿಸಿದ ಶಾಲೆಯ ಮೂಲ ದಾಖಲಾತಿ ವಹಿ ಪರಿಶೀಲಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇರವಾಗಿ ಪ್ರಸ್ತಾವನೆಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ಕಳುಹಿಸಿ ಕ್ರಮವಹಿಸುವುದು,
ಶಾಲಾ ವಿದ್ಯಾರ್ಥಿಗಳ ಶಾಲಾ ದಾಖಲಾತಿಗಳಲ್ಲಿ ಜಾತಿಯ ಬಗ್ಗೆ ನೇರವಾಗಿ ತಿದ್ದುಪಡಿ ಮಾಡಲು ಅವಕಾಶವಿಲ್ಲ. ಜಾತಿ ತಿದ್ದುಪಡಿ ಬಗ್ಗೆ ವಿಚಾರಣೆ ನಡೆಸಿ ನೀಡಲು ಕೋರ್ಟ್‌ ಗೆ ಅವಕಾಶವಿರುವುದಿಲ್ಲವೆಂದು ಕಾನೂನು ಇಲಾಖೆಯು (ಅಭಿಪ್ರಾಯ ಸಂಖ್ಯೆ:ಲಾ 677 ಅಭಿ 2016, ದಿನಾಂಕ:07-01- 2015) .ಅಭಿಪ್ರಾಯನೀಡಿರುತ್ತದೆ. ಜಾತಿ ಘೋಷಣೆಗೆ ಸಂಬಂಧಿಸಿದ ಪ್ರಕರಣವು ಅಧೀನ ನ್ಯಾಯಾಲಯದಲ್ಲಿ agatongd, The Hon’ble Supreme Court in the case of the State of Tamilnadu V/s A. Guruswamy has held that by necessary implication stands prohibited. Further the Hon’ble Suprem Court while allowing the appeal has held that the declaration issued by the Courts below is unconstitutional and without any jurisdiction, ಎಂದು ಅಪರ ಕಾನೂನು ಕಾರ್ಯದರ್ಶಿಗಳು- 1, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ರವರು ಅಭಿಪ್ರಾಯಿಸಿರುವುದರಿಂದ ತಾಲಾ ದಾಖಲಾತಿಗಳಲ್ಲಿ ವಿದ್ಯಾರ್ಥಿ ಜಾತಿ, ತಿದ್ದುಪಡಿ ಮಾಡುವ ಪ್ರಸ್ತಾವನೆಯ ಬಗ್ಗೆ ಜಿಲ್ಲಾ ಮಟ್ಟದ ಜಾತಿ ಪರಿಶೀಲನಾ ಸಮಿತಿಯು ನೀಡುವ ಆದೇಶದಂತೆ ಶಾಲಾ ದಾಖಲೆಗಳಲ್ಲಿ ತಿದ್ದುಪಡಿ ಮಾಡಲು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿಯೇ ಪರಿಶೀಲಿಸಿ ಕಮ್ರವಹಿಸುವುದು.
05, ಒಂದನೇ ತರಗತಿಯಿಂದ ಎಸ್‌.ಎಸ್.ಎಲ್.ಸಿ ತರಗತಿಯವರೆಗೆ ಓದುತ್ತಿರುವ ವಿದ್ಯಾರ್ಥಿಗಳ ದಾಖಲೆಗಳಲ್ಲಿ ಹೆಸರಿನಲ್ಲಿರುವ ಅಕ್ಷರಗಳು ತಪ್ಪಾದಲ್ಲಿ, ಹೆಸರಿನ ಜೊತೆ ತಂದೆಯ ಹೆಸರು, ಕುಟುಂಬದ ಹೆಸರು, ಅಡ್ಡ ಹೆಸರು ಮೊದಲಾದವುಗಳನ್ನು ಸೇರಿಸಲು, ಹೆಸರನ್ನು ಬದಲಾವಣೆ ಮಾಡಲು ಜನ್ಮ ದಿನಾಂಕಕ್ಕೆ ದಾಖಲೆಗಳು ಲಭ್ಯವಿದ್ದಾಗ್ಯೂ ಶಾಲಾ ದಾಖಲೆಗಳಲ್ಲಿ ನಮೂದಿಸುವಾಗ ಆಗಿರುವ ತಪ್ಪುಗಳನ್ನು ತಿದ್ದುಪಡಿ ಮಾಡುವಾಗ ಪಡಿತರ ಚೀಟಿ, ಆಧಾರ್ ಕಾರ್ಡುಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಪೋಷಕರಿಂದ ಸೆಲ್ಫ್ ಅಫಿಡವಿಟ್ ಪಡೆಯಬೇಕು. ಈ ಸೆಲ್ಸ್ ಅಫಿಡವಿಟ್‌ನಲ್ಲಿ ನೀಡಿರುವ ಮಾಹಿತಿಗಳು ಸುಳ್ಳೆಂದು ಕಂಡು ಬಂದಲ್ಲಿ ಅಂತಹ ಕ್ರಮ ಶಿಕ್ಷಾರ್ಹವಾಗುವುದರಿಂದ ಭಾರತೀಯ ದಂಡ ಸಂಹಿತ ಪ್ರಕಾರ ಶಿಕ್ಷೆಗೆ ಒಳಪಡಿಸಬಹುದೆಂದು ಸದರಿ ಅಫಿಡವಿಟ್‌ನಲ್ಲಿ ನಮೂದಿಸಿರಬೇಕು. ಇದರ ಆಧಾರದ ಮೇಲೆ ಶಾಲಾ ದಾಖಲಾತಿ ನಿಯಮಗಳ ಉಲ್ಲಂಘನೆಯಾಗದಂತೆ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ತಿದ್ದುಪಡಿ ಮಾಡಲು ಅಯಾ ವರ್ಷದ ಜೂನ್ 01ರಂದು ಕ್ರಮ ವಹಿಸುವುದು ಈ ರೀತಿ ಕ್ರಮವಹಿಸುವಾಗ ಕರ್ನಾಟಕ ಶಿಕ್ಷಣ ಕಾಯ್ದೆ 1983ರ ನಿಯಮ (1)ರಲ್ಲಿ 05 ವರ್ಷ ತುಂಬಿದ ಯಾವುದೇ ಮಗುವಿಗೆ ಶಾಲೆಗೆ ದಾಖಲು ಮಾಡಿಕೊಳ್ಳಲು ಕನಿಷ್ಠ 05 ವರ್ಷವಾಗಿರಬೇಕಾಗಿರುತ್ತದೆ. ಆದುದರಿಂದ ವಿದ್ಯಾರ್ಥಿಗಳ ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡುವಾಗ ಈ ಅಂಶವನ್ನು ಗಮನದಲ್ಲಿಟ್ಟುಕೊಳ್ಳಬೇಕು, ಒಂದು ಪಕ್ಷ ಇದಕ್ಕಿಂತ ಕಡಿಮೆ ಜನ್ಮ ದಿನಾಂಕವನ್ನು ನಮೂದಿಸಿದ್ದಲ್ಲಿ ತಿದ್ದುಪಡಿ ಮಾಡಲು ಸಂಬಂಧಪಟ್ಟ ನ್ಯಾಯಲಯದ ಡಿಕ್ರಿ ತರುವುದು ಅವಶ್ಯಕ.

6 ಎಸ್.ಎಸ್.ಎಲ್.ಸಿ ಆದ ನಂತರದ ಅಭ್ಯರ್ಥಿಗಳ ಶಾಲಾ ದಾಖಲಾತಿ/ಅಂಕಪಟ್ಟಿಯಲ್ಲಿ ಹೆಸರು, ಅಡ್ಡ ಹೆಸರು, ಪೋಷಕರ ಹೆಸರು ಹಾಗೂ ಜನ್ಮ ದಿನಾಂಕ ಇತ್ಯಾದಿಗಳು ತಿದ್ದುಪಡಿಯಾಗಬೇಕಾಗಿದ್ದಲ್ಲಿ ನ್ಯಾಯಾಲಯದಿಂದ ಡಿಕ್ಕಿ ಪಡೆದು ಬಂದ ಪ್ರಕರಣಗಳಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಶಾಲಾದಾಖಲಾತಿ ನಿಯಮಗಳನ್ವಯ ಪರಿಶೀಲಿಸಿ ಜಿಲ್ಲಾ ಉಪನಿರ್ದೇಕರು ಪ್ರಸ್ತಾವನೆ ಸ್ವೀಕರಿಸಿದ 15 ದಿನದೊಳಗೆ ಸೂಕ್ತ ತಿದ್ದುಪಡಿ ಮಾಡಿ ಆದೇಶ ಹೊರಡಿಸುವುದು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page