ಶಾಲಾ ದಾಖಲೆಯಲ್ಲಿ ಜಾತಿ ತಿದ್ದುಪಡಿಗೆ ಅವಕಾಶ ಕುಂಚಿಟಿಗ ಕುಲಶಾಸ್ತ್ರ ಅಧ್ಯಯನಕಾರ:ರಂಗನಾಥ್

by | 18/05/24 | ಜನಧ್ವನಿ


ಹಿರಿಯೂರು :
ಶಾಲಾ ದಾಖಲೆಯಲ್ಲಿ ‘ಕುಂಚಿಟಿಗ’ ಜಾತಿ ಬದಲಿಗೆ ಒಕ್ಕಲಿಗ, ಲಿಂಗಾಯತ,ಅಥವಾ ನಾಮಾಧಾರಿ ಎಂದು ತಪ್ಪಾಗಿ ನಮೂದಾಗಿದ್ದಲ್ಲಿ ನಿಜವಾದ ಜಾತಿ ನಮೂದಿಸುವಂತೆ ಶಿಕ್ಷಣ ಇಲಾಖೆಗೆ ಮನವಿ ಮಾಡಿ, ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ ಎಂಬುದಾಗಿ ಕುಂಚಿಟಿಗ ಕುಲಶಾಸ್ತ್ರ ಅಧ್ಯಯನಕಾರ ಎಸ್.ವಿ.ರಂಗನಾಥ್ ತಿಳಿಸಿದ್ದಾರೆ.
ಶಾಲಾ ದಾಖಲಾತಿಯ ಜಾತಿ ಕಾಲಂನಲ್ಲಿ ಜಾತಿಯ ವಿವರ ತಪ್ಪಾಗಿ ನಮೂದಾಗಿದ್ದರೆ ಅಥವಾ ತಿಳಿಯದೇ ಬೇರೊಂದು ಜಾತಿಯನ್ನು ನೀಡಿದ್ದರೆ ಪಾಲಕರು, ವಿದ್ಯಾರ್ಥಿಗಳು ಚಿಂತಿಸುವ ಅಗತ್ಯವಿಲ್ಲ.ಶಿಕ್ಷಣ ಇಲಾಖೆ ಆಯುಕ್ತರು ಜಾತಿ ತಿದ್ದುಪಡಿ ಕುರಿತು ಆದೇಶ ಹೊರಡಿಸಿದ್ದು,ರಾಜ್ಯದ ಎಲ್ಲಾ ಡಿಡಿಪಿಐ ಕಚೇರಿಗಳಿಗೆ ಆದೇಶದ ಪ್ರತಿ ರವಾನಿಸಿದ್ದಾರೆ.
ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವಾಗ ಅನಿವಾರ್ಯ ಕಾರಣಗಳಿಂದ ಮಕ್ಕಳ ಪೋಷಕರು ಮಕ್ಕಳ ಜಾತಿಯನ್ನು ತಪ್ಪಾಗಿ ನಮೂದಿಸಿದ್ದಲ್ಲಿ ಅದನ್ನು ಸರಿಪಡಿಸುವಂತೆ ಇಲಾಖೆಗೆ ಸೂಚನೆ ನೀಡಿದ್ದಾರೆ. ಆದ್ದರಿಂದ ಪಾಲಕರು ತಮ್ಮ ತಮ್ಮ ಮೂಲ ಜಾತಿಯನ್ನು ಶಾಲಾ ದಾಖಲಾತಿಯಲ್ಲಿ ನಮೂದಿಸಬಹುದಾಗಿದೆ ಎಂಬುದಾಗಿ ಅವರು ಮಾಹಿತಿ ನೀಡಿದ್ದಾರೆ.
ತಹಶೀಲ್ದಾರ್ ಅವರು ನೀಡಿರುವ ಜಾತಿ ಪ್ರಮಾಣ ಪತ್ರದಲ್ಲಿ ಸಂಶಯಗಳಿದ್ದರೆ ಅಥವಾ ಅದರಿಂದ ಬಾಧಿತರಾದವರಿದ್ದರೆ ಮೀಸಲಾತಿ ಕಾಯ್ದೆ 1990 ಕಲಂ 4 (ಬಿ) ಕಂದಾಯ ಇಲಾಖೆಯ ಉಪವಿಭಾಗಾಧಿಕಾರಿಗೆ ಮೇಲ್ಮನವಿ ಸಲ್ಲಿಸಬಹುದು.ಶಾಲಾ ದಾಖಲೆಗಳಲ್ಲಿ ಮುಖ್ಯ ಶಿಕ್ಷಕರು ಯಾವುದೇ ವಿಚಾರಣೆ ಇಲ್ಲದೆ ಪಾಲಕರು ನೀಡಿದ ಮಾಹಿತಿ ಆಧಾರದ ಮೇಲೆ ಜಾತಿ ನಮೂದು ಮಾಡಿರುತ್ತಾರೆ.
ಆದ್ದರಿಂದ ಶಾಲಾ ದಾಖಲೆಗಳಲ್ಲಿ ನಮೂದಾದ ಜಾತಿಯೇ ನೈಜ ಜಾತಿ ಎಂದು ಪರಿಗಣಿಸಲು ಸಾಧ್ಯವಿಲ್ಲ. ಆದ ಕಾರಣ ಶಾಲಾ ದಾಖಲಾತಿಗಳಲ್ಲಿ ಜಾತಿ ತಪ್ಪಾಗಿ ನಮೂದಾಗಿದ್ದರೆ ಸಂಬಂಧಪಟ್ಟ ಅರ್ಜಿದಾರರು ಮೊದಲು ಜಾತಿ ಪ್ರಮಾಣಪತ್ರ ಪಡೆದು ಸಂಬಂಧಸಿದ ಶಾಲಾ ಮುಖ್ಯಸ್ಥರಿಗೆ ಅರ್ಜಿ ಸಲ್ಲಿಸಿ, ಶಿಕ್ಷಣ ಇಲಾಖೆಯ ಅನುಮತಿ ಪಡೆದು ತಿದ್ದುಪಡಿಮಾಡಿಕೊಳ್ಳಬಹುದಾಗಿದೆ.
ಸದರಿ ಜಾತಿ ಪ್ರಮಾಣ ಪತ್ರದ ಆಧಾರದ ಮೇಲೆ ಶಾಲಾ ದಾಖಲಾತಿಗಳಲ್ಲಿ ಜಾತಿ ತಿದ್ದುಪಡಿ ಮಾಡಲು ಮುಖ್ಯ ಶಿಕ್ಷಕರು ಸಂಬಂಧಿಸಿದ ಬಿಇಒಗಳ ಮುಖಾಂತರ ಡಿಡಿಪಿಐಗೆ ಪ್ರಸ್ತಾವನೆ ಸಲ್ಲಿಸಿದ್ದಲ್ಲಿ ಅವರು ಸರ್ಕಾರದ ಸುತ್ತೋಲೆಯಂತೆ ಪರಿಶೀಲನೆ ನಡೆಸಿ ದಾಖಲಾತಿಗಳು ಸರಿ ಇದ್ದರೆ ಜಾತಿ ತಿದ್ದುಪಡಿ ಮಾಡಲು ಆದೇಶ ನೀಡುವರು ಎಂಬುದಾಗಿ ರಂಗನಾಥ್ ತಿಳಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page