ಶಾಲೆಗೆ ಹೋಗುತ್ತಾ, ಸ್ನೇಹಿತೆಯದೊಂದಿಗೆ ಆಡಿ ಬೆಳೆಯಬೇಕಾದ ವಯಸ್ಸು ಆದರೆ ಆ ಪುಟ್ಟ ಬಾಲಕಿಗೆ ವಕ್ಕರಿಸಿದ ಮಾರಣಾಂತಿಕ ಖಾಯಿಲೆಯಿಂದ ನರಳುತ್ತಿದ್ದ ಬಡ ಪೋಷಕರ ಮಗಳ ಚಿಕಿತ್ಸೆಗೆ ಮಾಜಿ ಮಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ

by | 10/04/23 | ಆರೋಗ್ಯ, ಕರ್ನಾಟಕ, ಸಾಮಾಜಿಕ



ಜನಧ್ವನಿ ವಾರ್ತೆ ಏ10
ಶಾಲೆಗೆ ಹೋಗುತ್ತಾ, ಸ್ನೇಹಿತೆಯದೊಂದಿಗೆ ಆಡಿ ಬೆಳೆಯಬೇಕಾದ ವಯಸ್ಸು ಆದರೆ ಆ ಪುಟ್ಟ ಬಾಲಕಿಗೆ ವಕ್ಕರಿಸಿದ ಮಾರಣಾಂತಿಕ ಖಾಯಿಲೆಯಿಂದ ನರಳುತ್ತಿದ್ದ ಬಡ ಪೋಷಕರ ಮಗಳ ಚಿಕಿತ್ಸೆಗೆ ಮಾಜಿ ಮಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಹೌದು ಇದು ಇದು ಚಳ್ಳಕೆರೆ ತಾಲೂಕಿನ ಸಾಣೀಕೆರೆ ಗ್ರಾಪಂ ವ್ಯಾಪ್ತಿಯ ಕಾಪರಹಳ್ಳಿ ಗ್ರಾಮದ ಬಡಕುಟುಂಬದ ಜಿ.ಟಿ.ಕುಮಾರ್.ತಿಮ್ಮಪ್ಪ ಇವರ ೭ ವರ್ಷದ ಪುತ್ರಿ ಪಲ್ಲವಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೧ ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಮಗುವಿಗಾಗಿ ಈಗಾಗಲೆ ಸಾಕಷ್ಟು ಚಿಕಿತ್ಸೆ ಹಣ ಖರ್ಚು ಮಾಡಿಕೊಂಡು ಹಣವಿಲ್ಲದೆ ಚಿಕಿತ್ಸೆಗಾಗ ಅಲೆದಾಡುತ್ತಿದ್ದರು. ಮಾರಣಾಂತಿಕ ಖಾಯಿಲೆ ಚಿಕಿತ್ಸೆಗೆ ಈಗಾಗಲೆ ಸುಮಾರು 3ರಿಂದ 5 ಲಕ್ಷ ರೂ ಖರ್ಚು ಮಾಡಿ ಚಕಿತ್ಸೆಕೊಡಿಸಿದ್ದು ಮಗಳ ಶಸ್ತçಚಿಕಿತ್ಸೆ ಮಾಡಿಸಲು ಸುಮಾರು 10 ಲಕ್ಷ ರೂಗಳ ಅವಶ್ಯಕತೆ ಇದೆ ಎಂದು ವೈದ್ಯರು ಸಲಹೆ ನೀಡಿದ್ದು. ಖಾಯಿಲೆಯಿಂದ ಪುಟ್ಟ ಮಗುವಿನ ಸುಂದರ ಬಾಲ್ಯಕ್ಕೆ ಕೊಡಲಿ ಪೆಟ್ಟು ನೀಡಿದೆ.ಭವಿಷ್ಯದ ಮೇಲೆ ಕರಿನೆರಳು ಆವರಿಸುವಂತೆ ಮಾಡಿತ್ತು.

ರಕ್ತ ಸಂಬಂಧಿ ಖಾಯಿಲೆಯಾದ ಥಲೆಸ್ಸೇಮಿಯಾದಿಂದ ರಕ್ತದ ಸಮಸ್ಯೆ, ಮೂಳೆಯ ಸಮಸ್ಯೆ ಉಂಟಾಗಿ ಮಗು ಪರದಾಡುವಂತಾಗಿದೆ. ಮೊದಲೇ ಕೂಲಿ ನಾಲಿ ಮಾಡಿಕೊಂಡು ಬದುಕುವ ಪೋಷಕರು ಇದರಿಂದ ದಿಕ್ಕೇ ತೋಚದಂತಾಗಿತ್ತು ಪ್ರತೀ ತಿಂಗಳು ಎರಡು ಬಾರಿ ರಕ್ತ ಹಾಗೂ ಬಿಳಿ ರಕ್ತ ಕಣಗಳನ್ನು ಹಾಕಿಸಬೇಕು. ಹೀಗಾಗಿ ಕೂಲಿ ನಾಲಿಯಿಂದ ಜೀವನ ಸಾಗಿಸುವ ಬಡಕುಟುಂಬಸ್ಥರಿಗೆ ದಿಕ್ಕೇ ತೋಚದಂತಾಗಿತ್ತು ಅವರ ಬಾಳಿನ ನೆರವಿಗೆ ಮಾಜಿ ಮುಖ್ಯಮಂತ್ರಿಗೆ ಎಚ್.ಡಿ.ಕುಮಾರಸ್ವಾಮಿ ಚಿಕಿತ್ಸೆಕೊಡಿಸಲು ಮುಂದಾಗಿದೆ..
ಚಳ್ಳಕೆರೆ ನಗರದ ಬಿಸಿನೀರು ಮುದ್ದಪ್ಪ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಪಂಚರತ್ನ ಯಾತ್ರೆ ಸಮಾರಂಭದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ.ರವೀಶ್‌ಕುಮಾರ್ ಪರವಾಗಿ ಕ್ಷೇತ್ರದಲ್ಲಿ ಪ್ರವಾಸಗೊಂಡು ರಾತ್ರಿ ಬಹಿರಂಗಸಭೆಯಲ್ಲಿ ಭಾಗವಹಿಸಿ ಭಾಷಣ ಮಾಡುವಾಗ ಬಾಲಕಿಯ ಕುಟುಂಬಸ್ಥರು ವೇಧಿಕೆ ಮೇಲೆ ಹೋಗಿ ಮಗಳ ಕಾಯಿಲೆ ಹಾಗೂ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿ ಅಳಲು ತೋಡಿಕೊಂಡಿದ್ದಾರೆ ತಕ್ಷಣ ಸ್ಪಂದಿಸಿದ ಕುಮಾರಸ್ವಾಮಿಸೋಮವಾರ ಬೆಳಗ್ಗೆ ಜೆಪಿ ನಗರದಲ್ಲಿರುವ ನಿವಾಸಕ್ಕೆ ಬರುವಂತೆ ತಿಳಿಸಿದ್ದಾರೆ.
ಕಾಪರಹಳ್ಳಿ ಗ್ರಾಮದ ಕುಮಾರಸ್ವಾಮಿ ದಂಪತಿಗಳಿಬ್ಬರು ಸೋಮವಾರ ಬೆಳ್ಳಂ ಬೆಳಗ್ಗೆ 6.30 ಕ್ಕೆ ಸರಿಯಾಗಿ ಎಚ್.ಡಿ.ಕೆ ಮನೆ ಬಳಿ ಹೋಗಿದ್ದಾರೆ ಹೋದ ತಕ್ಷಣ ಮಗು ಹಾಗೂ ಕುಟುಂಬಸ್ಥರನ್ನು ಕಂಡು ವೈಯುಕ್ತಿಕವಾಗಿ 50 ಸಾವಿರ ರೂ ಹಣ ನೀಡಿ ಇಂದಿರಾ ಗಾಂಧಿ ಆಸ್ಪತ್ರೆಯ ವೈದ್ಯರಾದ ಸಂಜಯ್. ಡಾ.ಪೂಜಾ ಇವರಿಗೆದೂರವಾಣಿ ಮೂಲಕ ಕರೆ ಮಾಡಿ ಇಂದಿನಿAದಲೇ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ ಮೇರೆಗೆ ಮಗುವಿಗೆ ಇಂದಿರಾ ಗಾಂಧಿ ಆಸ್ಪತ್ರೆಯಲ್ಲಿ ಮಗುವಿಗೆ ತಪಾಸಣೆ ನಡೆಸಿ ಚಿಕಿತ್ಸೆ ಪ್ರಾರಂಭಿಸಿರುವುದು ಕುಟುಂಬಸ್ಥರ ಮೊಗದಲ್ಲಿ ಮಂದಹಾಸ ಮೂಡಿಸುವಂತೆ ಮಾಡಿದೆ.;

ರಾಜ್ಯ ಸರ್ಕಾರ ಬಿಪಿಎಲ್ ಯೋಜನೆ ಅಡಿಯಲ್ಲಿ ಉಚಿತ ಶಸ್ತç ಚಿಕಿತ್ಸೆ ಬರಿಸುವ ಯೋಜನೆಯನ್ನು ಜಾರಿಗೆ ತರಲಿ ಎಂದು ಆಗ್ರಹಿಸಿರುವ ಜೆಡಿಎಸ್ ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಡ ಕುಟುಂಬದ ಎಷ್ಟೋ ಮಕ್ಕಳಿಗೆ ಚಿಕಿತ್ಸೆಗೆ ನೆರವು ನೀಡುವ ಮೂಲಕ ಸಹಾಯ ಮಾಡುತ್ತಿದ್ದಾರೆ

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page