ಶಾಲೆಯ ಹಾಜರಾತಿ ಪುಸ್ತಕ್ಕೆ ಸಹಿ- ಮೆಟ್ರೋ ಪೋರ್ಟ್ ಸೂಪರ್ ಮಾರ್ಕೇಟ್ ನಲ್ಲಿ ವ್ಯಾಪಾರ ಮಾಡುವ ಶಿಕ್ಷಕ- ಶಿಕ್ಷಣ ಇಲಾಖೆ ಮೌನ…?.

by | 01/04/24 | ತನಿಖಾ ವರದಿ

ಚಳ್ಳಕೆರೆ ಜನಧ್ವನಿ ವಾರ್ತೆ ಏ.1 ಶಾಲೆಗೆ ಕರ್ತವ್ಯಕ್ಕೆ ಹಾಜರಾಗದೇ ಹಾಜರಿ ಪುಸ್ತಕದಲ್ಲಿ ಸಹಿ ಹಾಕಿ ಸಂಬಳ ಪಡೆಯುತ್ತಿದ್ದ ಶಿಕ್ಷಕನ ಕಳ್ಳಾಟವನ್ನು ಜನಧ್ವನಿ ನ್ಯೂಸ್ ಬಟಾಬಯಲು ಮಾಡಿದೆ.
ಹೌದು ಇದು ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಗ್ರಾಪಂ ವ್ಯಾಪ್ತಿಯ ವೀರದಿಮ್ಮನಹಳ್ಳಿ ಸಮೀಪದ ಬೋರಪ್ಪನಹಳ್ಳಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿ ಶಾಲೆಯ ಶಾಲೆಯಲ್ಲಿ 1ರಿಂದ 4 ನೇತರಗತಿಯಲ್ಲಿ ಒಟ್ಟು 21 ವಿದ್ಯಾರ್ಥಿಗಳಿದ್ದು ಮುಖ್ಯ ಶಿಕ್ಷಕ ಸೇರಿ ಇಬ್ಬರು ಶಿಕ್ಷರಿದ್ದು ಶಿಕ್ಕಕರೊಬ್ಬರು ಹಾಜರಾತಿಗೆ ಸಹಿ ಹಾಕಿ ಚಕ್ಕರ್ ಹೊಡೆಯುವುದು ಹಾಗೂ ಶಾಲೆಗೆ ಯಾವಾಗಲೋ ಬಂದು ಹೋಗುವುದು ಮಾಡುತ್ತಿದ್ದಾರೆ ಎಂಬ ಸಾರ್ವಜನಿಕರ ಆರೋಪದ ಮೇರೆಗೆ ಜನಧ್ವನಿ ನ್ಯೂಸ್ ಸೋಮವಾರ ಬೆಳಗ್ಗೆ ಸುಮಾರು 12 ಗಂಟೆ ಸಮಯದಲ್ಲಿ ಶಾಲೆಗೆ ಭೇಟಿ ನೀಡಿದಾಗ ಮುಖ್ಯ ಶಿಕ್ಷರೊಬ್ಬರು ಕರ್ತವ್ಯವದಲ್ಲಿರುವುದು ಕಂಡು ವಿಚಾರಿಸಿದಾಗ ಉತ್ತರ ನೀಡಲು ತಡವರಿಸಿದ್ದಾರೆ.
ಸಹ ಶಿಕ್ಷಕ ಮಹೇಶ್ ಶಾಲೆಗೆ 11 ಗಂಟೆಯಾದರೂ ಬಾರದೆ ಇರುವುದನ್ನು ಪ್ರಶ್ನೆ ಮಾಡಿದಾಗ ಮುಖ್ಯ ಶಿಕ್ಷಕ ಬರುತ್ತಾರೆ ತಡವಾಗಿ ಬರುತ್ತಾರೆ ಈ ಬಗ್ಗೆ ಇಲಾಖೆಗೆ ಸಾಕಷ್ಟು ಬಾರಿ ಮಾಹಿತಿ ನೀಡಲಾಹಿದೆ ಶಿಕ್ಷಕ ಮಹೇಶ್ ಈ ಶಾಲೆಗೆ 26-5-22 21 ಕರ್ತವ್ಯಕ್ಕೆ ಹಾಜರಿಯಾಗಿರುತ್ತಾರೆ ಎಂದು ಮಾಹಿತಿ ನೀಡಿದರು.
ಒಬ್ಬ ವಿದ್ಯಾರ್ಥಿಯನ್ನು ಕೇಳಿದಾಗ ಬರುತ್ತಾರೆ ಬಂದು ಹಾಜರಾತಿಗೆ ಸಹಿ ಹಾಕಿ ಹೋಗುತ್ತಾರೆ ಎಂಬ ಉತ್ತರ ನೀಡುತ್ತಾರೆ.
ಬೋರಪ್ಪನಹಟ್ಟಿ ಗ್ರಾಮದಲ್ಲಿ ಬುಡಕಟ್ಟು ಸಂಸ್ಕೃತಿಯ ಹಿಂದುಳಿದ ಎಸ್ಟಿ ಸಮುದಾಯದವರಾಗಿದ್ದು ಕೂಲಿ ನಾಲಿ ಮಾಡಿ ವ್ಯಾಸಂಗ ಮಾಡಲು ಮಕ್ಕಳನ್ನು ಕಳಿಸುತ್ತಾರೆ ಅಕ್ಷರ ಜ್ಞಾನ ಕಲಿಸ ಬೇಕದಾ ಶಿಕ್ಷಕ ಮಹೇಶ್ ಚಕ್ಕರ್ ಹೊಡೆದು ಹಾಜರಾತಿಗೆ ಸಹಿಹಾಕಿ ನಗರದ ಮೆಟ್ರೋ ಫೊರ್ಟ್ ಸೂಪರ್ ಮಾರ್ಕೆಟ್ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಾರೆ ಎಂದು ಸಾರ್ಜನಿಕರು ದೂರಿದ್ದಾರೆ.
ರಿಯಾಲಿಟ್ ಚೆಕ್ ಮಾಡಲು ನಗರದ ಎಸ್ ಬಿ ಎಂ ಬ್ಯಾಂಕ್ ಶಾಖೆಯ ಮೇಲಿರುವ ಮೆಟ್ರೋ ಪೋರ್ಟ್ ಸೂಪರ್ ಮಾರ್ಕೇಟ್ ಅಂಗಡಿಗೆ ಭೇಟಿ ನೀಡಿದಾಗ ವ್ಯಾಪಾರ ಮಾಡುತ್ತಿರುವುದು ಕಂಡು ಬಂದಿದೆ.


ಶಿಕ್ಷಕ ಮಹೇಶನ ಪತ್ನಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಸದಸ್ಯೆ ಅಧ್ಯಕ್ಷೆಯಾಗಿ ಹತ್ತು ವರ್ಷ ಅವಧಿಯಲ್ಲಿ ಸಿ.ಆರ್.ಪಿ ಯಾಗಿ ಹಾಗೂ ವಿವಿಧ ಶಾಲೆಯಲ್ಲಿ ಶಿಕ್ಷಕನಾಗಿ ಸೇವೆ ಸಲ್ಲಿಸುವಾಗಲೂ ಸಹ ಪಾಠ ಮಾಡದೆ ರಾಜಕೀಯ ಪ್ರಭಾವದಿಂದ ಶಾಲೆಗೆ ಚಕ್ಕರ್ ಹೊಡೆದು ಹಾಜರಾತಿಗೆ ಸಹಿ ಹಾಕಿ ವೇತನ ಪಡೆಯುತ್ತಿರುವುದನ್ನೇ ಈಗಲೂ ಸಹ ಮುಂದುವರೆಸಿಕೊಂಡು ಬರುತ್ತಿದ್ದು ಹಾಜರಾತಿಗೆ ಸಹಿ ಹಾಕಿ ಚಕ್ಕರ್ ಹೊಡೆದು ವ್ಯಾಪಾರ ಮಾಡುತ್ತಿರುವುದು ಎಲ್ಲರಿಗೂ ಗೊತ್ತಿದ್ದರೂ ಸಹ ಶಿಕ್ಷಣ ಇಲಾಖೆ ಅಧಿಕಾರಿಗಳು ಮಾತ್ರ ಯಾವುದೋ ಒತ್ತಡಕ್ಕೆ ಮಣಿದು ಮೌನಕ್ಕೆ ಜಾರಿರುವುದು ಅನುಮಾನಕ್ಕೆ ಎಡೆಮಾಡಿದೆ.

ಶಿಕ್ಷಣ ಕ್ಷೇತ್ರಕ್ಕೆ ಒತ್ತು. ಕ್ಷೇತ್ರದ ಶಾಸಕ ಟಿ.ರಘುಮೂರ್ತಿಯವರು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿ ಇಂಜಿನಿಯರಿಂಗ್ ಕಾಲೇಜು. ಸರಕಾರಿ ಉಪಕರಣಗಳ ತರಬೇತಿ ಕೇಂದ್ರ. ಶಾಲಾ ಕಾಲೇಜುಗಳ ಹೈಟೆಕ್ ಸುಸಜ್ಜಿತ ಕಟ್ಟಡಗಳು ಸುಸಜ್ಜಿತ ವಸತಿ ಶಾಲಾ ಕಟ್ಟಡಗಳು.ವಸತಿ ನಿಲಯ ಕಟ್ಟಡಗಳನ್ನು ನಿರ್ಮಿಸಿ ಬಡ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ದೊರೆಯಲಿ ಎಂದು ಹಣದ ಹೊಳೆ ಹರಿಸಿದ್ದಾರೆ ಆದರೆ ಕೆಲ ಶಿಕ್ಷಕರು ಮಾತ್ರ ಮಕ್ಕಳಿಗೆ ಅಕ್ಷರ ಜ್ಞಾನ ಹೇಳಿಕೊಡುವ ಬದಲು ಹಾಜರಾತಿ ಹಾಕಿ ಚಕ್ಕರ್ ಹೊಡೆದು ವ್ಯಾಪಾರ ಮಾಡಿತ್ತಿರುವುದು ಶಿಕ್ಷಣ ಇಲಾಖೆಗೆ ಕಪ್ಪು ಚುಕ್ಕಿಯಾಗಿದೆ.

ಕೆ ,ಸಿ ಎಸ್ ಆರ್ ನಿಯಮ ಉಲ್ಲಂಘನೆ,
KCSR ನಿಯಮಗಳನ್ವಯ ಯಾವೊಬ್ಬ ಸರಕಾರಿ ವೇತನ ಪಡೆಯುವ ನೌಕರನೇ ಆಗಲಿ ಖಾಸಗಿ ವ್ಯವಹಾರ ಮಾಡುವಂತಿಲ್ಲ ಆದರೆ ಚಳ್ಳಕೆರೆ ತಾಲೂಕಿನ ಶಿಕ್ಷಣ ಇಲಾಖೆಯ ಆಡಳಿತದ ವೈಪಲ್ಯದಿಂದ ತರಗತಿಕೊಣೆಗಳಲ್ಲಿ ಇರಬೇಕಾದ ಶಿಕ್ಷಕರು ಸೇವಾ ನಿಯಮಗಳನ್ನು ಗಾಳಿಗೆ ತೂರಿ ರಾಜರೋಷವಾಗಿ ಕರ್ತವ್ಯದ ಅವಧಿಯಲ್ಲಿ ಇತರೆ ವ್ಯವಹಾರಗಳಲ್ಲಿ ತೊಡಗಿದ್ದಾರೆ ಇದಕ್ಕೆ ತಾಜಾ ಉದಾಹರಣೆಯಾಗಿದೆ.
ಈಗಾಲಾದರೂ ಶಿಕ್ಷಣ ಇಲಾಖೆ ಅಧಿಕಾರಿಗಳು ಕತ್ಯವ್ಯ ಲೋಪ ಎಸಗುವ ಶಿಕ್ಷಕರಿಗೆ ಶ್ರೀ ರಕ್ಷೆಯಾಗುವ ಬದಲು ತನಿಖೆ ನಡೆಸಿ ಸೂಕ್ತ ಕ್ರಮ ಜರುಗಿಸುವರೇ ಕಾದು ನೋಡ ಬೇಕಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page