ಶಾಸಕ ಸ್ಥಾನಕ್ಕೂ ಮೊದಲು ಕ್ಷೇತ್ರದಲ್ಲಿ ಸುತ್ತಾಡಿ ಜನರ ಸಮಸ್ಯೆ ಅರಿತು ಅಭಿವೃದ್ದಿ ಕನಸ್ಸೋತ್ತು 10 ವರ್ಷಗಳ ಕಾಲ ಶಾಸಕನಾಗಿ ಪ್ರಮಾಣಿಕ ಪ್ರಯತ್ನದಿಂದ ವಿವಿಧ ಕ್ಷೇತ್ರಗಳ ಜತೆ ಸರ್ವೋತೊಮುಖ ಅಭಿವೃದ್ದಿ ಆದ್ಯತೆ ನೀಡಲಾಗಿದೆ ಶಾಸಕ ಟಿ.ರಘುಮೂರ್ತಿ

by | 20/02/23 | ರಾಜಕೀಯ, ಸಾಮಾಜಿಕ

.
ಪರಶುರಾಂಪುರ ಫೆ.20ಪರಶುರಾಮಪುರ
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಜನತೆಯ ಆದರಾಭಿಮಾನಕ್ಕೆ ನಾನು ತಲೆಬಾಗುತ್ತೇನೆ ಎಂದು ಚಳ್ಳಕೆರೆ ಶಾಸಕ ಟಿ ರಘುಮೂರ್ತಿ ಹೇಳಿದರು
ಗ್ರಾಮದ ಕಲ್ಯಾಣದುರ್ಗ ರಸ್ತೆಯ ಯರಗುಂಟೇಶ್ವರಸ್ವಾಮಿ ದೇವಸ್ಥಾನದ ಆವರಣದಲ್ಲಿ ಅಖಂಡ ಕರ್ನಾಟಕ ರಾಜ್ಯ ರೈತ ಸಂಘ (ರಿ) ಪಿಆರ್‌ಪುರ ಹೋಬಳಿ ಘಟಕದ ವತಿಯಿಂದ ಸೋಮವಾರ ರೈತರಿಗೆ ಹೊಸ ಚೈತನ್ಯ ಕೊಟ್ಟ ನೀರಿನ ಹರಿಕಾರ ಚಳ್ಳಕೆರೆ ಶಾಸಕ ಟಿ ರಘುಮೂರ್ತಿ ಅವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ರೈತ ಸಂಘಟನೆಗಳಿAದ ಗೌರವ ಸ್ವೀಕರಿಸಿ ಮಾತನಾಡಿದರು
ಚಳ್ಳಕೆರೆ ತಾಲೂಕಿನಲ್ಲಿ ಕಳೆದ ದಶಕದಿಂದ ಚಳ್ಳಕೆರೆ ನಗರವೂ ಸೇರಿದಂತೆ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಮಾನ್ಯ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಹಿಂದೆAದೂ ಕಾಣದ ಅಭಿವೃಧ್ದಿ ಕಾರ್ಯಗಳು ಜರುಗಿವೆ ಇದಕ್ಕೆ ತಾಲೂಕಿನ ರೈತರು ಹೋರಾಟಗಾರರು ಕೂಲಿ ಕಾರ್ಮಿಕರು ವಿವಿಧ ಸಮುದಾಯಗಳ ಮುಖಂಡರ ಸಹಕಾರ ಪ್ರೋತ್ಸಾಹವೇ ಮುಖ್ಯ ಕಾರಣವಾಗಿದೆ ಎಂದರು
ಕರ್ನಾಟಕ ರಾಜ್ಯ ಅಖಂಡ ಕರ್ನಾಟಕ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಸೋಮಗುದ್ದುರಂಗಸ್ವಾಮಿ ಪ್ರಾಸ್ತಾವಿಕ ಮಾತನಾಡಿ ಸಾಧಕರನ್ನ ಜಾತಿ , ಪಕ್ಷಕ್ಕೆ ಹೋಲಿಸದೇ ಗೌರವಿಸುವ ನಮ್ಮಗಳ ಗುಣ. ಶಾಸಕ ಟಿ.ರಘುಮೂರ್ತಿ ಕ್ಷೇತ್ರದ ಅಭಿವೃದ್ಧಿ ಜತೆ ರೈತರ ಜೀವಾನಾಡಿ ವೇದಾವತಿ ನದಿಗೆ ಚೆಕ್‌ಡ್ಯಾಮ್‌ಗಳನ್ನ ನಿರ್ಮಿಸಿ ಹೋಬಳಿ ರೈತರಿಗೆ ಹೊಸ ಚೈತನ್ಯ ಕೊಟ್ಟು ನೀರಾವರಿ ಕೆಲಸಗಳನ್ನೊಳಗೊಂಡು ವಿವಿಧ ಕ್ಷೇತ್ರಗಳಿಗೂ ಹೆಚ್ಚಿನ ಆದ್ಯತೆ ನೀಡಿದ್ದಾರೆ ಹೋಬಳಿ ಕೇಂದ್ರದಲ್ಲಿನ ರೈತ ಸಂಘದ ಖಾಲಿ ನಿವೇಶನದಲ್ಲಿ ಬಾಬಾಗೌಡಪಾಟೀಲರ ಹೆಸರಲ್ಲಿ ಸಭಾಭವನ ನಿರ್ಮಿಸಿಕೊಡಬೇಕು ಗ್ರಾಮದ ಬ್ಯಾರೇಜ್‌ನ ಇಕ್ಕೆಲದಲ್ಲಿನ ರೈತರ ಜಮೀನಿಗೆ ತೆರಳಲು ಅಗತ್ಯವಾಗಿ ರಸ್ತೆ ನಿರ್ಮಿಸಿಕೊಡಬೇಕು ರೈತರ ಬದುಕನ್ನು ಹಸನಾಗಿಸಲು ತಾಲೂಕಿನ ರೈತರ ಅಭಿವೃಧ್ದಿಗೆ ಯೋಜನೆ ರೂಪಿಸಿ ಎಲ್ಲಾ ವರ್ಗದ ರೈತರು ಕೃಷಿ ಚಟುವಟಿಕೆಯಲ್ಲಿ ಖುಷಿಯಿಂದ ಕೈಗೊಳ್ಳುವ ಪರಿಸರವನ್ನುಂಟುಮಾಡಬೇಕು ಎಂದು ಮನವಿ ಮಾಡಿದರು.
ಚಳ್ಳಕೆರೆ ತಾಲೂಕು ಅಖಂಡ ಕರ್ನಾಟಕ ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಚಿಕ್ಕಣ್ಣ ಮಾತನಾಡಿ ಆಳುವ ಸರ್ಕಾರಗಳು ಮೊದಲು ಮಠ ಮಾನ್ಯಗಳಿಗೆ ಹಣನೀಡುವುದನ್ನು ನಿಲ್ಲಿಸಿ ರೈತರ ಬದುಕನ್ನು ಹಸನಾಗಿಸಲು ಯೋಜನೆ ರೂಪಿಸಿ ರೈತ ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ನಿಗಧಿಗೊಳಿಸಬೇಕು ಎಂದರು
ಚಳ್ಳಕೆರೆ ತಾಲೂಕಿನ ಗಡಿಭಾಗ ಪರಶುರಾಮಪುರದ ಇಕ್ಕೆಲದಲ್ಲೇ ಹರಿದು ಹೋಗುತ್ತಿರುವ ವೇದಾವತಿ ನದಿಗೆ ಅಡ್ಡಲಾಗಿ ಬ್ಯಾರೇಜ್, ಚೆಕ್‌ಡ್ಯಾಂಗಳನ್ನು ನಿರ್ಮಿಸಿಕೊಟ್ಟ ಶಾಸಕರು ಈ ಭಾಗದ ಐವತ್ತರಿಂದ ಅರವತ್ತು ಸಾವಿರ ಖುಷ್ಕಿ ಜಮೀನು ನೀರಾವರಿ ಜಮೀನಾಗಿ ಪರಿವರ್ತನೆಯಾಗಿದೆ ಮೈಸೂರು ಅರಸರು ತಮ್ಮ ಅವಧಿಯಲ್ಲೇ ತಮ್ಮ ಮನೆಯಲ್ಲಿನ ಒಡವೆ ವಸ್ತçಗಳನ್ನು ಬೇರೆಯವರಿಗೆ ಅಡವಿಟ್ಟು ಕೆಆರ್‌ಎಸ್, ವಿವಿಸಾಗರವೂ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಕೆರೆ ಕಟ್ಟೆ ಅಣೆಕಟ್ಟುಗಳನ್ನು ನಿರ್ಮಿಸಿ ಜನರ ಬದುಕನ್ನು ಹಸನಾಗಿಸಿದ್ದಾರೆ ಎಂದು ಸ್ಮರಿಸಿದರು
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗ್ರಾಮಘಟಕದ ಗೌರವಾಧ್ಯಕ್ಷ ಕೃಷ್ಣಮೂರ್ತಿಸ್ವಾಮಿ ಮಾತನಾಡಿ ಪಿಆರ್‌ಪುರ, ಹಾಗೂ ತಾಲೂಕಿನ ರೈತರು ಸ್ವಪ್ರೇರಣೆಯಿಂದ ಒಗ್ಗೂಡಿ ಕ್ಷೇತ್ರದ ಅಭಿವೃಧ್ದಿ ಹರಿಕಾರ ಟಿ ರಘುಮೂರ್ತಿ ಅವರಿಗೆ ವೇದಾವತಿ ನದಿಯಿರುವ ಪರಶುರಾಮಪುರದಲ್ಲೇ ಗೌರವಿಸಬೇಕು ಎಂಬ ಸಂಕಲ್ಪ ಮಾಡಿ ಸನ್ಮಾನಿಸಿದ್ದಾರೆ ಎಂದು ಶ್ಲಾಘಿಸಿದರು . ಸನ್ಮಾನ ಸ್ವೀಕರಿಸಿ ಶಾಸಕ ಟಿ.ರಘುಮೂರ್ತಿ ಮಾತನಾಡಿ ,ಶಾಸಕನಾಗಿ ನಿರ್ವಹಿಸಿದ ಕೆಲಸವನ್ನ ರೈತ ಸಂಘದವರು ನೆನಸಿದ್ದಾರೆ. ಶಾಸಕ ಸ್ಥಾನಕ್ಕೂ ಮೊದಲು ಕ್ಷೇತ್ರದಲ್ಲಿ ಸುತ್ತಾಡಿ ಜನರ ಸಮಸ್ಯೆ ಅರಿತು ಅಭಿವೃದ್ದಿ ಕನಸ್ಸೋತ್ತು 10 ವರ್ಷಗಳ ಕಾಲ ಶಾಸಕನಾಗಿ ಪ್ರಮಾಣಿಕ ಪ್ರಯತ್ನದಿಂದ ವಿವಿಧ ಕ್ಷೇತ್ರಗಳ ಜತೆ ಸರ್ವೋತೊಮುಖ ಅಭಿವೃದ್ದಿ ಆದ್ಯತೆ ನೀಡಲಾಗಿದೆ. 3 ನೇ ಬಾರಿ ಶಾಸಕನಾಗಲು ಯಾವುದೇ ಆತಂಕವಿಲ್ಲ ಎಂದರು. ಅವರಿಗೆ ವಿವಿಧೆಡೆಯಿಂದ ಆಗಮಿಸಿದ್ದ ರೈತರು ಹೂಹಾರ ಹಾಕಿ ಗೌರವಿಸಿದರು ಸಂದರ್ಭದಲ್ಲಿ ಗ್ರಾಮಘಟಕದ ಗೌರವಾಧ್ಯಕ್ಷ ಕೃಷ್ಣಮೂರ್ತಿಸ್ವಾಮಿ, ಅಧ್ಯಕ್ಷ ನವೀನಗೌಡ, ತಾಲೂಕು ಪ್ರಧಾನ ಕಾರ್ಯದರ್ಶಿ ಚೌಳೂರುಪ್ರಕಾಶ, ತಾಲೂಕಾಧ್ಯಕ್ಷ ಚಿಕ್ಕಣ್ಣ, ಗ್ರಾಮ ಘಟಕದ ಉಪಾಧ್ಯಕ್ಷ ಜಂಪಣ್ಣ, ಹನುಮಂತಪ್ಪ, ವೆಂಕಟರಮಣಪ್ಪ, ಶಾಂತಣ್ಣ, ಶಿವಣ್ಣ, ಬಾಷಾ, ರಾಜಣ್ಣ, ಅಣ್ಣಪ್ಪಸ್ವಾಮಿ, ಪರಶುರಾಂ, ಶೇಷಾದ್ರಿ, ಗುರುಸ್ವಾಮಿ, ಶಿವರಂಗಪ್ಪ, ನಿಂಗಣ್ಣ, ತಿಪ್ಪೇಸ್ವಾಮಿ, ರಾಘವೇಂದ್ರ, ಚಂದ್ರಣ್ಣ, ನಾಗೇಂದ್ರ ಹೋಬಳಿ ವ್ಯಾಪ್ತಿಯ ವಿವಿಧ ಘಟಕಗಳ ಪದಾಧಿಕಾರಿಗಳು ಗ್ರಾಮಸ್ಥರು ಇದ್ದರು
.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page