ಶಿಕ್ಷಕರು ರಾಜಕಾರಣಿಗಳ ಹೊರತಾಗಿ ವಿಧಾನಪರಿಷತ್ತಿಗೆ ಅರ್ಹರನ್ನು ಆಯ್ಕೆ ಮಾಡಿದಾಗ ಮಾತ್ರ ತಮ್ಮ ಸಮಸ್ಯೆಗಳು ಬಗೆಹರಿಯಲು ಸಾಧ್ಯ; ಲೋಕೇಶ್ ತಾಳಿಕಟ್ಟೆ

by | 13/10/23 | ಶಿಕ್ಷಣ

ಚಳ್ಳಕೆರೆ ಅ 13 ಆಳುವ ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಿದಾಗ ಮಾತ್ರ ದೇಶ ಹಾಗೂ ರಾಜ್ಯಗಳು ಅಭಿವೃದ್ಧಿ ಹೊಂದಲು ಸಾಧ್ಯ ಆದರೆ ಶಿಕ್ಷಣಕ್ಕೆ ಸರ್ಕಾರಗಳು ಬಜೆಟ್ ನಲ್ಲಿ ಅತ್ಯಂತ ಕಡಿಮೆ ಮೊತ್ತದ ಅನುದಾನವನ್ನು ಮೀಸಲಿರಿಸಿ ದೇಶದ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿವೆ ಎಂದು ಅನುದಾನ ರಹಿತ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರದ ಆಕಾಂಕ್ಷಿ ಲೋಕೇಶ್ ತಾಳಿಕಟ್ಟೆ ಅಭಿಪ್ರಾಯ ಪಟ್ಟರು.

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕಳೆದ ನಾಲ್ಕೈದು ವರ್ಷಗಳಿಂದ ಸರ್ಕಾರ ಶಿಕ್ಷಣಕ್ಕೆ ಅನ್ಯಾಯವೆಸಗುತ್ತ ಬರುತ್ತಿದೆ ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳು ಎಂಬ ತಾರತಮ್ಯ ಅನುಸರಿಸಿ ಇಲ್ಲ ಸಲ್ಲದ ಕಾನೂನುಗಳನ್ನು ರೂಪಿಸಿ ಖಾಸಗಿ ಶಾಲೆಗಳನ್ನು ಸರ್ವನಾಶ ಮಾಡಲು ಹೊರಟಿದೆ ಇತ್ತ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸದೆ ಖಾಸಗಿ ಶಾಲೆಗಳನ್ನು ಬದುಕಲು ಬಿಡದೆ ಖಾಸಗಿ ಶಾಲೆಗಳ ನವೀಕರಣ ಹೊಸ ಶಾಲೆಗಳಿಗೆ ಅನುಮತಿ ಆರ್ ಟಿ ಇ ಗಳಲ್ಲಿ ಅನುದಾನವನ್ನು ಬಿಡುಗಡೆ ಮಾಡದೆ ಭ್ರಷ್ಟಾಚಾರವನ್ನು ಎಸೆಗುತ್ತಿದ್ದು ಇದರಿಂದಾಗಿ ಖಾಸಗಿ ಶಾಲೆಗಳು ನಡೆಸುವುದೇ ಕಷ್ಟಕರವಾಗಿದೆ ಸರ್ಕಾರ 2018 ರಿಂದ ಇತ್ತೀಚಿನವರೆಗೆ ಮಕ್ಕಳ ದಾಖಲಾತಿ ಕೊರತೆಯಿಂದ ಸುಮಾರು 20,000 ಸರ್ಕಾರಿ ಶಾಲೆಗಳನ್ನು ಮುಚ್ಚಿರುವುದರಿಂದ ಲಕ್ಷಾಂತರ ಮಕ್ಕಳ ಭವಿಷ್ಯ ಡೋಲಾಯಮಾನ ಸ್ಥಿತಿಯಲ್ಲಿದೆ ಇಂತಹ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಮುಂದಿನ 2024ರ ಮೇ ತಿಂಗಳಿನಲ್ಲಿ ನಡೆಯಲಿರುವ ಐದು ಜಿಲ್ಲೆಗಳ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಛೆ ಹೊಂದಿದ್ದು ಅನುದಾನ ಅನುದಾನ ರಹಿತ ಸರ್ಕಾರಿ ಶಾಲೆಗಳ ಎಲ್ಲಾ ಶಿಕ್ಷಕರು ಬೆಂಬಲ ನೀಡಿದಲ್ಲಿ ಶಿಕ್ಷಕರ ಸಮಸ್ಯೆಗಳನ್ನು ವಿಧಾನಸೌಧದಲ್ಲಿ ಧ್ವನಿ ಎತ್ತಲು ಸಹಾಯಕವಾಗುತ್ತದೆ ಶಿಕ್ಷಕರು ತಮ್ಮ ಸಮಸ್ಯೆಗಳನ್ನು ಅರಿಯದ ರಾಜಕಾರಣಿಗಳನ್ನು ಗೆಲ್ಲಿಸಿಕೊಳ್ಳುತ್ತಿರುವುದರಿಂದ ನಮ್ಮ ಸಮಸ್ಯೆಗಳು ಇಂದಿಗೂ ಬಗೆಹರಿಯದೆ ಉಳಿದಿವೆ ಇಂತಹ ಕಷ್ಟಕರ ಸಂದಿಗ್ದ ಸ್ಥಿತಿಯಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಚುನಾವಣೆಯಲ್ಲಿ ಬೆಂಬಲಿಸಿ, ವಿಧಾನಪರಿಷತ್ ಗೆ ಆಯ್ಕೆ ಮಾಡಿದರೆ ಪ್ರಾಮಾಣಿಕವಾಗಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಅನುಕೂಲಕರವಾಗುತ್ತದೆ ಎಂದು ತಿಳಿಸಿದರು.

ಅನುದಾನ ರಹಿತ ಶಾಲೆಗಳ ತಾಲೂಕು ಅಧ್ಯಕ್ಷ ಯಾದಲಗಟ್ಟೆ ಜಗನ್ನಾಥ್ ಮಾತನಾಡಿ ಲೋಕೇಶ್ ತಾಳಿಕಟ್ಟೆಯವರು ಸತತ ನಾಲ್ಕು ವರ್ಷಗಳಿಂದ ರಾಜ್ಯದ ವಿವಿಧ ಮೂಲಗಳಲ್ಲಿ ಸಂಚರಿಸಿ ಖಾಸಗಿ ಅನುದಾನ ಅನುದಾನ ರಹಿತ ಶಾಲೆಗಳ ಶಿಕ್ಷಕರ ಸಮಸ್ಯೆಗಳ ಬಗ್ಗೆ ಅರಿವು ಹೊಂದಿದ್ದಾರೆ ಕಳೆದ ಬೆಳಗಾವಿ ಅಧಿವೇಶನದಲ್ಲಿ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟಿಸಿದ್ದಾರೆ ಶಿಕ್ಷಕರ ಎಲ್ಲ ಸಮಸ್ಯೆಗಳು ಬಗೆಹರಿಯಬೇಕಾದರೆ ಶಿಕ್ಷಣದ ಬಗ್ಗೆ ಹಾಗೂ ಸಮಸ್ಯೆಗಳ ಬಗ್ಗೆ ಜ್ಞಾನ ಹೊಂದಿರುವವರನ್ನು ವಿಧಾನಪರಿಷತ್ ಗೆ ಆಯ್ಕೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಹೀಗಾಗಿ ಅವರನ್ನು ನಾವೆಲ್ಲರೂ ಬೆಂಬಲಿಸೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಂಜುನಾಥ್ ದಯಾನಂದ್ ರವಿಕುಮಾರ್ ಗೌರೀಶ್ ಸುಭಾಷ್ ಶೌಕತ್ ಅಲಿ ಚಂದ್ರಣ್ಣ ರಾಮು ರಮೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page