ಶಿಕ್ಷಕರ ಸಮಸ್ಯೆಗಳ ನಿವಾರಣೆಗೆ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ: ಡಿಟಿ ಶ್ರೀನಿವಾಸ್.

by | 12/12/23 | ರಾಜಕೀಯ

ಚಳ್ಳಕೆರೆ:ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನನ್ನ ಹೆಸರನ್ನು ಘೋಷಣೆ ಮಾಡಿದ್ದು ಈ ಬಾರಿ ನನ್ನ ಗೆಲುವು ನಿಶ್ಚಿತ ಎಂದು ಆತ್ಮೀಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿಟಿ ಶ್ರೀನಿವಾಸ್ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಶಾಸಕರ ಭವನದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಆಗ್ನೇಯ ಶಿಕ್ಷಕರ ಕ್ಷೇತ್ರದ ದಾವಣಗೆರೆ ಚಿತ್ರದುರ್ಗ ತುಮಕೂರು ಚಿಕ್ಕಬಳ್ಳಾಪುರ ಕೋಲಾರ ವ್ಯಾಪ್ತಿಯ ಐದು ಜಿಲ್ಲೆಗಳಲ್ಲಿ 31 ತಾಲೂಕುಗಳ ಎಲ್ಲಾ ಶಾಲಾ ಕಾಲೇಜುಗಳಿಗೆ ಈಗಾಗಲೇ ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದು ಶಿಕ್ಷಕರ ಸಮಸ್ಯೆಗಳ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದರು.

ಶಿಕ್ಷಕರು ಈ ಬಾರಿ ನನ್ನನ್ನು ಬೆಂಬಲಿಸಿದ್ದೆ ಆದಲ್ಲಿ ಹಳೆ ಪಿಂಚಣಿ ಯೋಜನೆ ವರ್ಗಾವಣೆ ಸಮಸ್ಯೆ ಅತಿಥಿ ಶಿಕ್ಷಕರ ಸಮಸ್ಯೆಯನ್ನು ಬಗೆಹರಿಸಲು ಸಿದ್ಧನಿದ್ದೇನೆ ಬಿಜೆಪಿಯ ದುರಾಡಳಿತದ ದಿಂದ ಬೇಸತ್ತು ರಾಜ್ಯದ ಜನತೆಯ ವಿಶ್ವಾಸ ಗಳಿಸಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿ ಗ್ಯಾರಂಟಿ ಯೋಜನೆಗಳ ಮೂಲಕ ನುಡಿದಂತೆ ನಡೆದ ಸರ್ಕಾರ ಎಂಬ ಖ್ಯಾತಿ ಪಡೆದಿದ್ದು ಮುಂದಿನ ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಸಹ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲು ಶಿಕ್ಷಕರು ಮನಸ್ಸು ಮಾಡಬೇಕು ಶಿಕ್ಷಕರ ಎಲ್ಲ ಸಮಸ್ಯೆಗಳನ್ನು ಸರ್ಕಾರ ಈಗಾಗಲೇ ಬಗೆಹರಿಸಲು ಚಿಂತನೆ ನಡೆಸಿದ್ದು ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.


ಕಾಂಗ್ರೆಸ್ ಮುಖಂಡ ಹೆಚ್ಎಸ್ ಸೈಯದ್ ಮಾತನಾಡಿ ಕಾಂಗ್ರೆಸ್ ಪಕ್ಷ ಎಲ್ಲ ಜಾತಿ ಜನಾಂಗದ ವಿಶ್ವಾಸ ಗಳಿಸಿದ್ದು ಗೊಲ್ಲ ಸಮುದಾಯವು ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದು ಅತ್ಯಂತ ಹಿಂದುಳಿದ ಸಮುದಾಯವಾಗಿದೆ ಈ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಸಿದ್ದರಿದ್ದು ಪೂರ್ಣಿಮ ಶ್ರೀನಿವಾಸ್ ರವರ ಕಾಂಗ್ರೆಸ್ ಪಕ್ಷದ ಸೇರ್ಪಡೆಯಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಬಲ ಹೆಚ್ಚಾಗಿದ್ದು ಪೂರ್ಣಿಮಾ ರವರ ತಂದೆ ದಿವಂಗತ ಕೃಷ್ಣಪ್ಪನವರು ಕಾಂಗ್ರೆಸ್ ಪಕ್ಷದಲ್ಲಿ ಶಾಸಕರಾಗಿ ಸಚಿವರಾಗಿ ಸೇವೆ ಸಲ್ಲಿಸಿದ್ದರು ಕಾರಣಾಂತರಗಳಿಂದ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದರು ಶಾಸಕಿಯಾಗಿ ಪೂರ್ಣಿಮಾ ರವರು ಹಿರಿಯೂರು ಕ್ಷೇತ್ರದಲ್ಲಿ ಉತ್ತಮ ಸೇವೆ ಮಾಡಿದ್ದಾರೆ ಕಾಂಗ್ರೆಸ್ ಪಕ್ಷ ಚಿತ್ರದುರ್ಗ ಜಿಲ್ಲೆಯಲ್ಲಿ ಐದು ಶಾಸಕರನ್ನು ಹೊಂದಿದ್ದು ಪ್ರಬಲವಾಗಿದೆ ಈ ಬಾರಿ ವಿಧಾನ ಪರಿಷತ್ ಸ್ಥಾನವನ್ನು ಸಹ ಗೆಲ್ಲುವ ಮೂಲಕ ಕಾಂಗ್ರೆಸ್ ಬಲವರ್ಧನೆಗೊಳ್ಳಲಿದೆ ಇದಕ್ಕಾಗಿ ಪಕ್ಷದ ಕಾರ್ಯಕರ್ತರು ಮುಖಂಡರು ಈಗಿನಿಂದಲೇ ಶ್ರಮವಹಿಸಿ ಕೆಲಸ ಮಾಡಿ ಡಿಟಿ ಶ್ರೀನಿವಾಸ ಪರ ಕೆಲಸ ಮಾಡಿ ಪಕ್ಷ ಗೆಲುವು ಸಾಧಿಸಲು ಪಣ ತೊಡಬೇಕು ಎಂದು ಕರೆ ನೀಡಿದರು.

ವಿಶ್ವಕರ್ಮ ಸಮಾಜದ ಮುಖಂಡ ಪ್ರಸನ್ನ ಕುಮಾರ್ ಮಾತನಾಡಿ ಡಿ ಟಿ ಶ್ರೀನಿವಾಸ್ ರವರು ಕಳೆದ ಬಾರಿ ಪದವೀಧರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಲ್ಪ ಮತಗಳ ಹಿನ್ನಡೆಯಿಂದ ಸೋಲು ಅನುಭವಿಸಬೇಕಾಯಿತು ಶಿಕ್ಷಕರ ಸಮಸ್ಯೆಗಳನ್ನು ಸಮರ್ಥವಾಗಿ ಕಲಾಪಗಳಲ್ಲಿ ಮಂಡನೆ ಮಾಡುವ ವ್ಯಕ್ತಿ ಬೇಕಾಗಿರುತ್ತದೆ ವಿಧಾನಪರಿಷತ್ ಈಗಾಗಲೇ ಚಿಂತಕರ ಚಾವಡಿ ಎಂದು ಹೆಸರು ಪಡೆದಿದ್ದು ಹೀಗಾಗಿ ಕಾಂಗ್ರೆಸ್ ಪಕ್ಷ ಡಿಟಿ ಶ್ರೀನಿವಾಸ್ ರಂತಹ ಶಿಕ್ಷಣ ಪ್ರೇಮಿಗೆ ಟಿಕೆಟ್ ಘೋಷಣೆ ಮಾಡಿದೆ ಈಗಾಗಲೇ ಆಗ್ನೇಯ ಶಿಕ್ಷಕ ಕ್ಷೇತ್ರಗಳ ಬಗ್ಗೆ ಸಂಪೂರ್ಣವಾದ ಮಾಹಿತಿ ಶ್ರೀನಿವಾಸ್ ರವರಿಗೆ ಇರುವುದರಿಂದ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.

ಈ ಸಂದರ್ಭದಲ್ಲಿ ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ನಗರ ಸಭೆ ಸದಸ್ಯ ರಮೇಶ್ ಗೌಡ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂಜೆ ರಾಘವೇಂದ್ರ ಅನ್ವರ್ ಮಾಸ್ಟರ್ ಸಿ ಟಿ ಶ್ರೀನಿವಾಸ್ ವೀರಭದ್ರಪ್ಪ ಸೂರಪ್ಪ ಪಿ ತಿಪ್ಪೇಸ್ವಾಮಿ ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page