ಶಿಕ್ಷಣಕ್ಕೆ ಬಡತನ, ಸಿರಿತನ ತಾರತಮ್ಯವಿಲ್ಲ; ಪಪಂ ಸದಸ್ಯ ಜೆ.ಆರ್.ರವಿಕುಮಾರ್. ಮಾದಿಗ ಸಮುದಾಯ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅನಿಸಿಕೆ.

by | 11/06/24 | ಶಿಕ್ಷಣ

ನಾಯಕನಹಟ್ಟಿ;ಜೂ.11*
ಶೈಕ್ಷಣಿಕ ಪ್ರಗತಿಯಿಂದ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಪಟ್ಟಣ ಪಂಚಾಯತಿ ಸದಸ್ಯ ಜೆ.ಆರ್.ರವಿಕುಮಾರ್ ಹೇಳಿದರು.


ಪಟ್ಟಣದಲ್ಲಿ ಶಾಲಾ ಪರೀಕ್ಷೆ ಮೌಲ್ಯಾಂಕ ಮತ್ತು ನಿರ್ಣಯ ಮಂಡಳಿ ನಿವೃತ್ತ ಕಾರ್ಯದರ್ಶಿ ಎಂ.ರೇವಣಸಿದ್ದಪ್ಪನವರ ಅಭಿಮಾನಿ ಬಳಗದ ವತಿಯಿಂದ ಮಾದಿಗ ಸಮುದಾಯದ ಎಸ್‍ಎಸ್‍ಎಲ್‍ಸಿ, ಪಿಯುಸಿ ಯಲ್ಲಿ ಶೇ.90ಕ್ಕು ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಶಿಕ್ಷಣಕ್ಕೆ ಬಡತನ, ಸಿರಿತನದ ತಾರತಮ್ಯವಿಲ್ಲ. ಪರಿಶ್ರಮ ಮತ್ತು ಸತತ ಪ್ರಯತ್ನ ಅಗತ್ಯ. ಗ್ರಾಮೀಣ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರತಿಯೊಬ್ಬರೂ ಪ್ರೋತ್ಸಾಹ ನೀಡಬೇಕು. ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಶಿಕ್ಷಕರೊಂದಿಗೆ ಪೋಷಕರ ಸಹಕಾರ ಅಗತ್ಯವಾಗಿದೆ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ಮಕ್ಕಳ ಪೋಷಕರ ಅನಕ್ಷರತೆ, ಜೀವನ ನಡೆಸಲು ಕಷ್ಟದ ಪರಿಸ್ಥಿಯಲ್ಲಿ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಾರೆ. ಇಂತಹ ಕೆಲಸವನ್ನು ಮಾಡಬಾರದು. ಸರ್ಕಾರವು ಸಾಕಷ್ಟು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇದನ್ನು ಸಮಪರ್ಕವಾಗಿ ಬಳಕೆ ಮಾಡಿಕೊಂಡು ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡಬೇಕು ಎಂದರು.

ಮಕ್ಕಳಲ್ಲಿ ಉತ್ತಮ ಸಂಸ್ಕೃತಿ, ಸಂಸ್ಕಾರ ಬೆಳೆಸಲು ಶಿಕ್ಷಣ ಸಹಕಾರಿಯಾಗಿದೆ. ಹೀಗಾಗಿ ಎಲ್ಲ ಪೋಷಕರು, ಶಿಕ್ಷಕರು ಕಾಳಜಿ ವಹಿಸಬೇಕು. ಸೀಮಿತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಇತರೆ ಎಲ್ಲಾ ಸಮುದಾಯದ ಬಡ ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡುವ ಕೆಲಸ ಹೆಚ್ಚಾಗಬೇಕಿದೆ ಎಂದು ಸಲಹೆ ನೀಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಚನ್ನಕೇಶವ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಶಿಕ್ಷಕರೊಂದಿಗೆ ಪಾಲಕರು ಸಹಕರಿಸಬೇಕು. ಹಿಂದುಳಿದ ಮಕ್ಕಳಿಗೆ ಪ್ರೋತ್ಸಾಹ ನೀಡಿದರೆ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಹಕಾರಿಯಾಗಲಿದೆ ಎಂದರು.

ಮುಖ್ಯಶಿಕ್ಷಕರಾದ ಎನ್.ಮಹಂತೇಶ್ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಕ್ಷೇತ್ರ ಅತ್ಯಂತ ಮಹತ್ವತೆಯಿಂದ ಕೂಡಿದೆ. ಮಕ್ಕಳ ಶೈಕ್ಷಣಿಕ ಚಟುವಟಿಕೆಯಲ್ಲಿ ಪೋಷಕರ ಪಾತ್ರ ಮಹತ್ತರವಾಗಿದೆ. ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳು ಮಕ್ಕಳಲ್ಲಿ ಬೆಳೆಯಬೇಕಾದರೆ ಮನೆಯ ಪರಿಸರ ಹಾಗೂ ಶಾಲೆಯ ಪರಿಸರ ಎರಡೂ ಅತಿ ಮುಖ್ಯ. ಯಾವುದೇ ಶಾಲೆ ಅಥವಾ ಕಾಲೇಜಿನಲ್ಲಿ ಪಠ್ಯದಷ್ಟೇ ಇತರೆ ಚಟುವಟಿಕೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದಲ್ಲಿ ಮಾತ್ರ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದರು.
ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಾದ ಮಂಜುಶ್ರೀ, ವರುಣಾ ಅವರನ್ನು ಸನ್ಮಾನಿಸಲಾಯಿತು.


ಕಾರ್ಯಕ್ರಮದಲ್ಲಿ ಅಬ್ಬೇನಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಶಂಕರಸ್ವಾಮಿ, ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಆರ್.ಶ್ರೀಕಾಂತ್, ಮರಿಪಾಲಯ್ಯ, ಮುಖಂಡರಾದ ತಾರಕೇಶ್, ಮಲ್ಲಿಕಾರ್ಜುನ್, ಎಂ.ಅಜಯ್, ರಾಕೇಶ್, ಅಖಿಲೇಶ್ ಉಪಸ್ಥಿತರಿದ್ದರು.

ಪೋಟೊ ಕ್ಯಾಪ್ಷನ್- ನಾಯಕನಹಟ್ಟಿ ಪಟ್ಟಣದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಮಾದಿಗ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page