ಚಳ್ಳಕೆರೆ: ರಾಜ್ಯ ಸರ್ಕಾರದ ಅವಜ್ಞಾನಿಕ ನೀತಿಗಳಿಂದಾಗಿ ಶಿಕ್ಷಣ ಇಲಾಖೆ ಸೊರಗುತ್ತಿದೆ ಶಿಕ್ಷಣ ಇಲಾಖೆಗೆ ರಾಜ್ಯ ಸರ್ಕಾರದ ಕೊಡುಗೆ ಶೂನ್ಯವಾಗಿದ್ದು ಇದರಿಂದಾಗಿ ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ಇದುವರೆಗೂ ಬಗೆಹರಿಸುವಲ್ಲಿ ವಿಫಲವಾಗಿದ್ದು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರಾಂಶುಪಾಲರ ಹಾಗೂ ಉಪನ್ಯಾಸಕರ ಹುದ್ದೆಗಳು ಖಾಲಿ ಇದ್ದರು ನೇಮಕ ಮಾಡಿಕೊಳ್ಳುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ವೈಎ ನಾರಾಯಣಸ್ವಾಮಿ ಆರೋಪಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅತಿಥಿ ಉಪನ್ಯಾಸಕರಿಗೆ ವೇತನವನ್ನು ಹೆಚ್ಚಿಸಿ ವರ್ಷದಲ್ಲಿ 10 ತಿಂಗಳ ವೇತನವನ್ನು ನೀಡಿತ್ತು ನಮ್ಮ ಅವಧಿಯಲ್ಲಿ 1242 ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಪರೀಕ್ಷೆಯನ್ನು ಸಹ ನಡೆಸಿತ್ತು ಕೆಲವು ಅಭ್ಯರ್ಥಿಗಳು ನ್ಯಾಯಾಲಯದ ಮೊರೆ ಹೋಗಿದ್ದರಿಂದ ನೇಮಕಾತಿ ಆಗಿರಲಿಲ್ಲ ಈಗ ಪ್ರಕರಣ ಇತ್ಯರ್ಥವಾಗಿದ್ದು ಕಾಂಗ್ರೆಸ್ ಸರ್ಕಾರ ನೇಮಕಾತಿ ಆದೇಶವನ್ನು ಮಾತ್ರ ನೀಡುತ್ತಿದೆ ಈ ಎಲ್ಲಾ ಕಾರ್ಯಗಳು ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿದೆ ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ಬಗೆಹರಿಸದೆ ವಿಳಂಬ ನೀತಿ ಅನುಸರಿಸಿ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಉಪನ್ಯಾಸಕರ ಸಮಸ್ಯೆಗಳನ್ನು ವಿಧಾನ ಪರಿಷತ್ ನಲ್ಲಿ ಚರ್ಚೆ ನಡೆಸಿದ್ದು ಸರ್ಕಾರದ ಧೋರಣೆಯಿಂದಾಗಿ ವಿಳಂಬವಾಗುತ್ತಿದೆ ಬಿಜೆಪಿ ಪಕ್ಷವು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸಲು ಸದನದ ಹೊರಗೆ ಹಾಗು ಒಳಗೆ ಹೋರಾಡಲು ಸದಾ ಸಿದ್ಧವಿದೆ ಎಂದು ತಿಳಿಸಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಲಿದ್ದು ಮೋದಿಯವರ ಅಭಿವೃದ್ಧಿ ವೇಗ ಈ ದೇಶದಲ್ಲಿನ ಎಲ್ಲಾ ಪ್ರತಿಪಕ್ಷಗಳನ್ನು ಗುಡಿಸಿ ಹಾಕುತ್ತದೆ 350ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜೆಡಿಎಸ್ ಪಕ್ಷವು ಎನ್ ಡಿ ಎ ಮೈತ್ರಿಕೂಟದ ಭಾಗವಾಗಲು ರಾಷ್ಟ್ರೀಯ ನಾಯಕರ ತೀರ್ಮಾನವಾಗಿದ್ದು ರಾಜ್ಯದ ಬಿಜೆಪಿ ನಾಯಕರ ಸಮ್ಮತವಿದೆ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಒಟ್ಟಾಗಿ ಎದುರಿಸಲಿದ್ದು ಕಾಂಗ್ರೆಸ್ ಪಕ್ಷ ಕೇವಲ ತನ್ನ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಹರಸಾಹಸ ಪಡುತ್ತಿದೆ ಶಾಸಕರಿಗೆ ಅನುದಾನ ನೀಡದೆ ಕ್ಷೇತ್ರಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಇಂದು ಆರೋಪಿಸಿದರು.
ಮುಂದಿನ ಜೂನ್ ತಿಂಗಳಲ್ಲಿ ವಿಧಾನಪರಿಷತ್ ಚುನಾವಣೆ ನಡೆಯಲಿದ್ದು ಪಕ್ಷ ನನಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿರುವುದರಿಂದ ಈಗಾಗಲೇ ಎರಡು ಬಾರಿ ಆಯ್ಕೆಯಾಗಿದ್ದೇನೆ ಮುಂದಿನ ಬಾರಿ ಗೆಲ್ಲುವ ವಿಶ್ವಾಸವಿದ್ದು ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಶಿಕ್ಷಕರು ಉಪನ್ಯಾಸಕರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಾ ಬಂದಿರುವುದರಿಂದ ಉತ್ತಮ ರೀತಿಯಲ್ಲಿ ಸ್ಪಂದನೆ ದೊರೆತಿದೆ ಎಂದರು.
ಇದೇ ವೇಳೆ ಸಂಸತ್ ಮೇಲಿನ ದಾಳಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಸಂಸತ್ ದಾಳಿಯನ್ನು ಯಾರು ಸಹಿಸಲು ಸಾಧ್ಯವಿಲ್ಲ ತಪ್ಪಿತಸ್ಥರ ನಿಷ್ಪಕ್ಷಪಾತ ತನಿಖೆ ನಡೆಯುತ್ತಿದ್ದು ಆರೋಪಿತರು ಯಾರೇ ಆಗಿದ್ದರು ಕೇಂದ್ರ ಸರ್ಕಾರ ಅವರನ್ನು ರಕ್ಷಿಸಲು ಸಾಧ್ಯವಿಲ್ಲ ಶಿಕ್ಷೆ ಆಗುತ್ತದೆ ಎಂದು ತಿಳಿಸಿದರು.
0 Comments