ಶಿಕ್ಷಣ ಕ್ಷೇತ್ರದಲ್ಲಿ ಕಲೆ ಕೇವಲ ಪಠ್ಯೇತರ ಚಟುವಟಿಕೆಯಲ್ಲ ಸೃಜನಶೀಲತೆಯನ್ನು ಹಾಗೂ ಬೌದ್ಧಿಕ ಬೆಳವಣಿಗೆಯನ್ನು ಅಭಿವೃದ್ಧಿಪಡಿಸುವ ಸಾಧನ:ಪ್ರಾಚಾರ್ಯ ಎಂ.ಧನಂಜಯ

by | 29/03/24 | ಶಿಕ್ಷಣ


ಹಿರಿಯೂರು :
ಶಿಕ್ಷಣ ಕ್ಷೇತ್ರದಲ್ಲಿ ಕಲೆ ಕೇವಲ ಒಂದು ಪಠ್ಯೇತರ ಚಟುವಟಿಕೆಯಲ್ಲ ಬದಲಾಗಿ ಅದು ಸೃಜನಶೀಲತೆಯನ್ನು ಮತ್ತು ಬೌದ್ಧಿಕ ಬೆಳವಣಿಗೆಯನ್ನು ಅಭಿವೃದ್ಧಿಪಡಿಸುವ ಪ್ರಬಲ ಸಾಧನವಾಗಿದೆ ಎಂಬುದಾಗಿ ಜ್ಞಾನಭಾರತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಎಂ.ಧನಂಜಯ ಹೇಳಿದರು.
ನಗರದ ಜ್ಞಾನಭಾರತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಗುರುವಾರ ಪ್ರಶಿಕ್ಷಣಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಶಿಕ್ಷಣದಲ್ಲಿ ಕಲೆಯ ಮಹತ್ವ ಎಂಬ ಒಂದು ದಿನದ ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಶಿಕ್ಷಣದಲ್ಲಿ ಕಲೆಯ ಪಾತ್ರವು ಮಹತ್ವದ್ದಾಗಿದ್ದು, ಕಲೆ ಸೃಜನಶೀಲ ಅಭಿವೃದ್ಧಿಯ ವಿವಿಧ ರೂಪಗಳನ್ನು ಒಳಗೊಂಡಿದೆ ಎಂಬುದಾಗಿ ಹೇಳಿದರಲ್ಲದೆ, ಇದು ಕಾಲ್ಪನಿಕವಾಗಿ ಯೋಚಿಸಲು ಹಾಗೂ ಮೋಟಾರು ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ವಿದ್ಯಾರ್ಥಿಗಳನ್ನು ಪ್ರೊತ್ಸಾಹಿಸುತ್ತದೆ. ಕಲಾ ಶಿಕ್ಷಣವು ಸ್ವಯಂ ಆಭಿವೃದ್ಧಿ, ಸಾಂಸ್ಕೃತಿಕ ಚಳುವಳಿ ಮತ್ತು ಸಮಸ್ಯೆ ಪರಿಹಾರಗಳನ್ನು ಉತ್ತೇಜಿಸುತ್ತದೆ.
ಇದಲ್ಲದೆ ಇದು ಕಲಾ ಜಗತ್ತಿಗೆ ಕೊಡುಗೆ ನೀಡಬಲ್ಲ ವಿದ್ಯಾರ್ಥಿಗಳನ್ನು ಪೋಷಿಸುತ್ತದೆ. ಭಾವಿ ಶಿಕ್ಷಕರಾಗುವಂತಹ ಪ್ರಶಿಕ್ಷಣಾರ್ಥಿಗಳಿಗೆ ಇಂತಹ ಕಾರ್ಯಗಾರಗಳು ಹೆಚ್ಚು ಉಪಯುಕ್ತವಾಗಿವೆ. ಯಾವುದೇ ವಿಷಯವನ್ನು ಬೋಧಿಸುವಂತಹ ಸಂಧರ್ಭದಲ್ಲಿ ಕಲೆಯನ್ನು ಬಳಸಿಕೊಂಡು ಬೋಧಿಸಿದಾಗ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಎಂಬುದಾಗಿ ತಿಳಿಸಿದರು.
ರಾಜ್ಯ ಸಂಪನ್ಮೂಲ ವ್ಯಕ್ತಿ ಎಂ.ಎನ್. ಕುಬೇರಪ್ಪರವರು ಅನುಪಯುಕ್ತವಾಗಿರುವಂತಹ ವಸ್ತುಗಳಿಂದ ಬೋಧನೆಗೆ ಬೇಕಾದಂತಹ ಬೋಧನೋಪಕರಣಗಳನ್ನು ಹಾಗೂ ಮನೆಯ ಅಲಂಕಾರಕ್ಕಾಗಿ ಬೇಕಾಗುವಂತಹ ಅಲಂಕಾರ ಸಾಮಾಗ್ರಿಗಳನ್ನು ಹೇಗೆ ತಯಾರಿಸಬೇಕು ಎನ್ನುವುದನ್ನು ಅತ್ಯತ್ತಮವಾಗಿ ತರಬೇತಿ ನೀಡಿರುವುದು ಅತ್ಯುತ್ತಮವಾಗಿದೆ ಎಂಬುದಾಗಿ ಅವರನ್ನು ಪ್ರಶಂಶಿಸಿದರು.
ಈ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ರಾಜ್ಯ ಸಂಪನ್ಮೂಲ ವ್ಯಕ್ತಿ ಎಂ.ಎನ್. ಕುಬೇರಪ್ಪ, ಜ್ಞಾನಭಾರತಿ ಶಿಕ್ಷಣ ಮಹಾವಿದ್ಯಾಲಯದ ಹಿರಿಯ ಉಪನ್ಯಾಸಕ ಎಂ.ಬಸವರಾಜ್, ವ್ಯವಸ್ಥಾಪಕರಾದ ನಾಗೇಶ್, ರವಿಕುಮಾರ್, ಅರುಣ ಕುಮಾರಿ, ಮಾರುತೇಶ್, ನಿಂಗರಾಜ್, ಜಗದೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page