ಚಳ್ಳಕೆರೆ: ಪರಮಪೂಜ್ಯ ಕರ್ನಾಟಕ ರತ್ನ ಡಾ. ಶಿವಕುಮಾರ ಮಹಾಸ್ವಾಮಿಗಳ ಸರಳ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಡೆದು ಜೀವನ ಸಾರ್ಥಕ ಗೊಳಿಸಿಕೊಳ್ಳಬೇಕು ಎಂದು ಮಾತೃಶ್ರಿ ಮಂಜುನಾಥ್ ಅಭಿಪ್ರಾಯ ಪಟ್ಟರು
ನಗರದ ಶ್ರೀ ಪರ್ವತ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಶಿವಕುಮಾರ ಸ್ವಾಮೀಜಿಗಳ ಐದನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ ತ್ರಿವಿಧ ದಾಸೋಹಿ ಎಂದೇ ಇಡೀ ದೇಶದಲ್ಲಿ ಹೆಸರುಗಳಿಸಿದ ಮಹಾನ್ ವ್ಯಕ್ತಿ ಶಿವಕುಮಾರ ಸ್ವಾಮೀಜಿಗಳಾಗಿದ್ದಾರೆ ನಡೆದಾಡುವ ದೇವರಾಗಿ ಪ್ರಖ್ಯಾತಿ ಗಳಿಸಿ ತಮ್ಮ ಜೀವನವನ್ನು ಸಮಾಜದ ಒಳಿತಿಗಾಗಿ ಮುಡುಪಾಗಿಟ್ಟಿದ್ದರು ಇಂತಹ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಹಾಗೆಯೇ ಸುಮಾರು 5 ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಅಯೋಧ್ಯೆಯ ಶ್ರೀರಾಮಚಂದ್ರ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಸೋಮವಾರ ನೆರವೇರುತ್ತಿದ್ದು ಎಲ್ಲಾ ಭಕ್ತಾದಿಗಳಿಗೂ ಒಳ್ಳೆಯದಾಗಲಿ ಎಂದು ತಿಳಿಸಿದರು. ಕಾರ್ಯಕ್ರಮದ ಅಂಗವಾಗಿ ಶಿವಕುಮಾರ ಸ್ವಾಮೀಜಿಗಳ ಭಾವಚಿತ್ರವನ್ನು ಮೆರವಣಿಗೆ ಮೂಲಕ ವೀರಭದ್ರ ಸ್ವಾಮಿ ದೇವಸ್ಥಾನ ನೆಹರು ವೃತ್ತ, ಬಸವೇಶ್ವರ ವೃತ್ತದ ಮೂಲಕ ದೇವಸ್ಥಾನ ತಲುಪಿ ಅನ್ನ ದಾಸೋಹ ಕಾರ್ಯಕ್ರಮವನ್ನು ಏರ್ಪಡಿಸಿ ಭಕ್ತಾದಿಗಳಿಗೆ ವಿತರಿಸಲಾಯಿತು ಕಾರ್ಯಕ್ರಮದಲ್ಲಿ ಕೋಟೆ ಚಂದ್ರಶೇಖರ್ ಕೋಟೆ ಬಸವರಾಜ್ ಎಂ ವೀರೇಶ್ ಎನ್ ವಿ ತಿಪ್ಪೇಸ್ವಾಮಿ ಸಿದ್ದಾರ್ಥ ರಾಜಶೇಖರಯ್ಯ ಮಲ್ಲಿಕಾರ್ಜುನ ಲೋಕೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
![](https://janadhwani.in/wp-content/uploads/2024/01/IMG-20240121-WA0152.jpg)
0 Comments