ಶಿವಯೋಗಿಸಿದ್ದರಾಮೇಶ್ವರರು ಕಾಯಕವೇಕೈಲಾಸವೆಂದು ಭಾವಿಸಿದ್ದ ಮಹಾನ್ ಚೇತನ : ಶಿರಸ್ತೇದಾರ್ ತಿಪ್ಪೇಸ್ವಾಮಿ

by | 16/01/24 | ಸುದ್ದಿ


ಹಿರಿಯೂರು:
ಬಸವಣ್ಣನವರ ತತ್ವ ಸಿದ್ದಾಂತಗಳನ್ನು ಜೀವನದಲ್ಲಿ ಮೈಗೂಡಿಸಿಕೊಂಡು ಶಿವಯೋಗಿ ಸಿದ್ದರಾಮೇಶ್ವರರು ಕಾಯಕವೇ ಕೈಲಾಸವೆಂದು ಭಾವಿಸಿದ್ದ ಮಹಾನ್ ಚೇತನ, ಇವರು ಕೆಳವರ್ಗದವರಲ್ಲಿ ಕಾಯಕದ ಬಗ್ಗೆ ಅರಿವು ಮೂಡಿಸುವಲ್ಲಿ ಶ್ರಮಿಸಿದರು ಎಂಬುದಾಗಿ ತಾಲ್ಲೂಕು ಶಿರಸ್ತೇದಾರರಾದ ತಿಪ್ಪೇಸ್ವಾಮಿ ಹೇಳಿದರು.
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಭೋವಿ ಸಮಾಜದ ಗೌರವಾಧ್ಯಕ್ಷ ಸೂರಗೊಂಡನಹಳ್ಳಿ ಕೃಷ್ಣಮೂರ್ತಿ ಮಾತನಾಡಿ, ಭೋವಿ ಸಮಾಜವು ಹಿಂದುಳಿದ ವರ್ಗಕ್ಕೆ ಸೇರಿದ್ದು, ಈ ಭೋವಿ ಸಮಾಜದ ಮಕ್ಕಳನ್ನು ಹೆಚ್ಚು ಹೆಚ್ಚು ವಿದ್ಯಾವಂತರನ್ನಾಗಿ ಮಾಡುವ ಮೂಲಕ ಸಮಾಜದ ಮುಖ್ಯಿವಾಹಿನಿಗೆ ತರಬೇಕು ಎಂದರಲ್ಲದೆ,
ಭೋವಿ ಸಮಾಜದ ಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ, ನಗರದ ಹರಿಶ್ಚಂದ್ರಘಾಟ್ ಬಳಿಯಿರುವ ಭೋವಿ ಸಮಾಜದ ಹಾಸ್ಟೆಲ್ ಜಾಗದಲ್ಲಿ ಡಿಪ್ಲೋಮೋ ಹಾಗೂ ಜಾಬ್ ಕೋರ್ಸ್ ಗಳಂತಹ ಕಾಲೇಜು ತೆರೆಯಬೇಕಿದ್ದು, ಈ ಮೂಲಕ ಉದ್ಯೋಗಸಿಗುವಂತಹ ಕೋರ್ಸ್ ಗಳ ಸೌಲಭ್ಯ ಸಮಾಜದ ಮಕ್ಕಳಿಗೆ ಒದಗಿಸಿಕೊಡಬೇಕಿದೆ ಎಂಬುದಾಗಿ ಅವರು ಹೇಳಿದರು.
ಭಾರತೀಯ ದಲಿತ ಸಂಘರ್ಷ ಸಮಿತಿ ರಾಜ್ಯ ಕಾರ್ಯಾಧ್ಯಕ್ಷ ತಿಮ್ಮರಾಜು ಮಾತನಾಡಿ, ಕಾಯಕಯೋಗಿ ಸಿದ್ದರಾಮೇಶ್ವರರು ಭೋವಿ ಸಮುದಾಯಕ್ಕೆ ಮಾತ್ರವಲ್ಲದೆ ಇತರೆ ಎಲ್ಲಾ ಸಮುದಾಯದ ಅಭಿವೃದ್ಧಿಗೆ ಅಪಾರವಾದ ಕೊಡುಗೆಯನ್ನು ನೀಡಿದ್ದು, ಸಿದ್ದರಾಮೇಶ್ವರ ಜಯಂತಿಯನ್ನು ಸಾವಿರಾರು ಜನ ಸೇರಿ ಎಲ್ಲಾ ಜಾತಿಯ ಜನಾಂಗದವರನ್ನು ಕರೆದು ಆಚರಿಸಲು ತಾಲೂಕು ಆಡಳಿತ ಕ್ರಮಕೈಗೊಳ್ಳಬೇಕು ಎಂದರು.
ಭೋವಿ ಸಮಾಜದ ಉಪಾಧ್ಯಕ್ಷ ವೆಂಕಟೇಶ್ ಮಾತನಾಡಿ, ಸಿದ್ದರಾಮೇಶ್ವರರು ಸಾಕಷ್ಟು ಕಷ್ಟಗಳನ್ನು ಅನುಭವಿಸಿದ ಮೇಲೂ ಸಮಾಜಕ್ಕೆ ಮಾಡಿದಂತಹ ಉಪಯೋಗಗಳು ಸ್ಮರಣಾರ್ಹ, ಇವರ ತತ್ವ ಹಾಗೂ ಆದರ್ಶಗಳನ್ನು ಇಂದಿನ ಯುವಜನಾಂಗ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಮನೋಹರ್, ತಾಲೂಕು ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್, ತಾಲೂಕು ಕಚೇರಿಯ ಶ್ರೀನಿವಾಸ ರೆಡ್ಡಿ ಭೋವಿ ಸಮಾಜದ ಮುಖಂಡ ಸೂರಗೊಂಡನಹಳ್ಳಿಕೃಷ್ಣಮೂರ್ತಿ, ತಾಲೂಕು ಭೋವಿ ಸಮಾಜದ ಅಧ್ಯಕ್ಷ ಟಿ.ಚಂದ್ರಶೇಖರ್, ಉಪಾಧ್ಯಕ್ಷರಾದ ವೆಂಕಟೇಶ್, ಭೋವಿ ಹಾಸ್ಟೆಲ್ ಕಾರ್ಯದರ್ಶಿ ಭೂತಾಭೋವಿ, ತಾ.ಪಂ.ಮಾಜಿ ಅಧ್ಯಕ್ಷ ಟಿ.ಆರ್.ಗೋಪಾಲ್, ನಗರಸಭೆ ಸದಸ್ಯ ಮಹೇಶ್ ಪಲ್ಲವ, ಸಮುದ್ರದಳ್ಳಿ ರಾಜು, ಈಶ್ವರಪ್ಪ, ಎಂ.ಜಿ.ಗೋಪಾಲಪ್ಪ, ಶಿಕ್ಷಕ ರಮೇಶ್, ಬಳಗಟ್ಟಮೂರ್ತಿ, ನಾರಾಯಣ, ತಿಪ್ಪೇಸ್ವಾಮಿ, ಹನುಮಂತಪ್ಪ, ರಂಗಸ್ವಾಮಿ, ದಾಸಭೋವಿ, ಅಂಜನಮೂರ್ತಿ, ಬಾಲರಾಜು, ಗೋವಿಂದಪ್ಪ, ಕರವೇ ತಿಮ್ಮರಾಜು, ರಮೇಶ್ ಸೇರಿದಂತೆ ಸಮಾಜದ ಮುಖಂಡರು ಹಾಜರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page