ಶೇಕಡ 60ರಷ್ಟು ಹೆಚ್ಚಿಸಿರುವ ಬಿತ್ತನೆ ಬೀಜದ ದರ ಕಡಿತಗೊಳಿಸಲು, ಹಾಗೂ ಪರಿಹಾರ ರೈತರ ಖಾತೆಗೆ ಜಮಾಕ್ಕೆ ರೈತಮುಖಂಡ ಸಿ.ಹೊರೆಕೆರಪ್ಪ ಒತ್ತಾಯ

by | 31/05/24 | ಪ್ರತಿಭಟನೆ


ಹಿರಿಯೂರು:
ಶೇಕಡ 60ರಷ್ಟು ಹೆಚ್ಚಿಸಿರುವ ಬಿತ್ತನೆ ಬೀಜದ ದರ ಕಡಿತಗೊಳಿಸಿ ಪರಿಹಾರವನ್ನು ಸಮರ್ಪಕವಾಗಿ ಜಿಲ್ಲೆಯ ಎಲ್ಲಾ ರೈತರ ಖಾತೆಗೆ ಜಮಾ ಮಾಡುವ ಬಗ್ಗೆ ಸಂಬಂಧಿಸಿದಂತೆ ಮಾನ್ಯ ಕೃಷಿ ಸಚಿವರು ಕರ್ನಾಟಕ ಸರ್ಕಾರ ವಿಕಾಸಸೌಧ ಬೆಂಗಳೂರು ಇವರಿಗೆ ಸಹಾಯಕ ಕೃಷಿ ನಿರ್ದೇಶಕರು ಹಿರಿಯೂರು ರವರ ಮುಖಾಂತರ ಮನವಿ ಸಲ್ಲಿಸಲಾಯಿತು ಎಂಬುದಾಗಿ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಕೆ. ಸಿ. ಹೊರೆಕೆರಪ್ಪ ತಿಳಿಸಿದರು.
ರಾಜ್ಯದಲ್ಲಿ ಸುಮಾರು ವರ್ಷಗಳಿಂದ ಬರಗಾಲ ಆವರಿಸಿದ್ದು ಮಧ್ಯ ಕರ್ನಾಟಕದ ಚಿತ್ರದುರ್ಗ ಜಿಲ್ಲೆ, ಬರಗಾಲಕ್ಕೆ ಒಳಪಟ್ಟಿದ್ದು ಕಳೆದ ವರ್ಷದಿಂದ ಜಿಲ್ಲೆಯಲ್ಲಿ ಮಳೆ ಬರದೆ ರೈತರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ.
ಇಂದಿನ ಸರ್ಕಾರ ಬೆಳೆ ನಷ್ಟ ಅನುಭವಿಸಿದ ಎಲ್ಲಾ ರೈತರಿಗೂ ತಾರತಮ್ಯವಿಲ್ಲದೆ, ಬರ ಪರಿಹಾರದ ಹಣವನ್ನು ರೈತರ ಖಾತೆಗೆ ಜಮೆ ಮಾಡಿದ್ದು, ತಮ್ಮ ಸರ್ಕಾರ ಕೊಳವೆಬಾವಿ ಇರುವ ರೈತರಿಗೆ ,ನೀರಾವರಿ ಪ್ರದೇಶದ ರೈತರಿಗೆ ಬೆಳೆ ನಷ್ಟ ಪರಿಹಾರ ಮೊತ್ತವನ್ನು ನೀಡದೆ ತಾರತಮ್ಯ ಮಾಡಿ ಮಾಡುತ್ತಿದೆ.
ರೈತರು ಟ್ಯಾಂಕರ್ ಮೂಲಕ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ತೋಟಗಾರಿಕೆ ಬೆಳೆಗಳಿಗೆ ನೀರು ಹಾಯಿಸಿ, ಸಂಕಷ್ಟ ಅನುಭವಿಸಿದ್ದು ಸರ್ಕಾರ ತಾರತಮ್ಯ ಮಾಡದೆ ಎಲ್ಲಾ ರೈತರಿಗೂ ಬರ ಪರಿಹಾರವನ್ನು ರೈತರ ಖಾತೆಗೆ ಜಮಾ ಮಾಡುವಂತೆ ತಾಲ್ಲೂಕು ರೈತ ಸಂಘವು ಒತ್ತಾಯಿಸುತ್ತದೆ ಎಂದರು.
ಚಿತ್ರದುರ್ಗ ಜಿಲ್ಲೆ ಸದಾ ಬರಗಾಲಕ್ಕೆ ತುತ್ತಾಗಿದ್ದು, ರೈತರು ಬಿತ್ತಿದ ಬೆಳೆ ಕೈ ಸೇರದೆ ಸಾಲಗಾರಾಗಿದ್ದು ಸರ್ಕಾರ ಬಿತ್ತನೆ ಬೀಜದ ಬೆಲೆಯನ್ನು ಶೇಕಡ 60 ರಷ್ಟು ಹೆಚ್ಚಿಸಿರುವುದು ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಇದರಿಂದ ಕೃಷಿ ಚಟುವಟಿಕೆ ಕುಂಟಿತವಾಗಿದೆ ಎಂದರಲ್ಲದೆ,
ಈ ಕೂಡಲೇ ಸರ್ಕಾರ ಬಿತ್ತನೆ ವೇಗದ ದರವನ್ನು ಪೂರ್ಣ ಕಡಿತಗೊಳಿಸುವಂತೆ ಹಾಗೂ ಇದುವರೆಗೂ ಸ್ಪಿಂಕ್ಲರ್ ಸೆಟ್ ದರ 1746ರೂ ಇದ್ದಿದ್ದನ್ನು ಏಕಾಏಕಿ 4,139 ರೂ ಕ್ಕೆ ಹೆಚ್ಚಿಸಿರುವುದು ಕೂಡ ರೈತರಿಗೆ ದುಬಾರಿ ವೆಚ್ಚವಾಗಿದ್ದು ಕೂಡಲೇ ಕಳೆದುಗೊಳಿಸುವಂತೆ ತಾಲ್ಲೂಕು ರೈತ ಸಂಘ ಒತ್ತಾಯಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಸಿ. ಹೊರೆಕೆರಪ್ಪ, ತಾಲ್ಲೂಕು ರೈತ ಸಂಘದ ಅಧ್ಯಕ್ಷ ಬಿ. ಓ. ಶಿವಕುಮಾರ್, ತಾಲ್ಲೂಕು ಯುವ ಘಟಕದ ಅಧ್ಯಕ್ಷ ಚೇತನ್ ಯಳನಾಡು, ತಾಲೂಕು ಕಾರ್ಯದರ್ಶಿ ಹೆಚ್.ದಸ್ತಗಿರಿಸಾಬ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಲಕ್ಷ್ಮಿಕಾಂತ್, ಮಲ್ಲಪ್ಪನಹಳ್ಳಿ ಟಿ. ಮುನಿಸ್ವಾಮಿ, ನಾಗರಾಜ, ಗಿರೀಶ್, ಚಿಕ್ಕತಾಯಮ್ಮ, ಮಾರುತಿ, ನಾಗರಾಜ್, ರುದ್ರಮ್ಮ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page