ಶೇ ನೂರು ಮತದಾನ ಗಡಿ ಮುಟ್ಟಲು ಮತದಾರರನ್ನು ಸೆಳೆಯಲು ಸಖಿ ಮತಗಟ್ಟೆಗಳ ಅಲಂಕಾರಗೊಳಿಸಲು ಸಜ್ಜು ಸ್ವೀಪ್ ಸಮಿತಿ ಅಧ್ಯಕ್ಷ ತಾಪಂ ಇಒ ಹೊನ್ನಯ್ಯ

by | 30/04/23 | ಚುನಾವಣೆ-2023


ಚಳ್ಳಕೆರೆ ಜನಧ್ವನಿ ವಾರ್ತೆ ಏ30.
ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ನೂರಕ್ಕೆ ನೂರರಷ್ಟು ಮತದಾನದ ಗುರಿಯನ್ನು ಹೊಂದಲು ಮತದಾರರನ್ನು ಸೆಳೆಯಲು ಮತಗಟ್ಟೆಗಳನ್ನು ಅಲಂಕೃತಗೊಳಿಸಲು ತಾಲೂಕು ಸ್ವೀಪ್ ಸಮಿತಿ ಸಕಲ ಸಿದ್ದತೆಯಲ್ಲಿ ತೊಡಗಿದೆ.


ಹೌದು ಚಳ್ಳಕೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಕಡಿಮೆ ಮತದಾನ ನಡೆದಿರುವ ಮತಗಟ್ಟೆ ಹಾಗೂ ಅತಿ ಹೆಚ್ಚು ಮಹಿಳಾ ಮತದಾರರು ಹೊಂದಿರುವ 5ಸಖಿ ಮತಗಟ್ಟೆಗಳನ್ನು ಗುರತಿಸಲಾಗಿದೆ, ಮತಟ್ಟೆ ಸಂಖ್ಯೆ (79).ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಟಪ್ಪನಹಟ್ಟಿ, (89). ಉದ್ರು ಹಿರಿಯ ಪ್ರಾಥಮಿಕ ಶಾಲೆ.( 174). ಸರಕಾರಿ ಹಿರಿಯ ಬಾಲಕಿಯರ ಪ್ರಾಥಮಿಕ ಶಾಲೆ ಪರಶುರಾಂಪುರ, (188).ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ದಾಪುರ, (242). ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹುಲಿಕುಂಟೆ ಈ ಮತಗಟ್ಟೆಯಲ್ಲಿ ಅತಿ ಹೆಚ್ಚು ಮಹಿಳಾ ಮತದಾರರಿದ್ದು ಈ ಮತಗಟ್ಟೆಯಲ್ಲಿ ಮಹಿಳಾ ಸಿಬ್ಬಂದಿಗಳು ಕೊಠಡಿ ಪಿಂಕ್ ಇಲ್ಲಿನ ಮಹಿಳಾ ಸಿಬ್ಬಂದಿಗಳೂ ಸಹ ಪಿಂಕ್ ಕಲರ್ ಉಡುಗೆ ತೊಟ್ಟಿರುವುದು ವಿಶೇಷವಾಗಿರುತ್ತದೆ.


ನಗರದ (97). ವಿಶ್ವಬಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಕಲಚೇತನ ಮತಗಟ್ಟೆ ಗುರುತಿಸಿದ್ದು ಇಲ್ಲಿ ವಿಕಲಚೇತನ ಮತಗಟ್ಟೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಿಲಿದ್ದಾರೆ,
ಒಂದು ಯುವ ಮತದಾರರ ಮತಟ್ಟೆ ಗುರುತಿಸಿದ್ದು ಇಲ್ಲಿನ ಮತಗಟ್ಟೆಯಲ್ಲಿ ಯುವ ನೌಕರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ, ಪರಿಸರಸ್ನೇಹಿ ಮತಗಟ್ಟೆಗಳು ಮೇ 10 ರಂದು ನಡೆಯಲಿರುವ ಮತದಾನಕೇಂದ್ರಗಳು ಭರದಿಂದ ಸಿದ್ದತೆಗೊಳ್ಳುತ್ತಿವೆ.


ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಪಂ ಇಒ ಹೊನ್ಯಯ್ಯ ಜನಧ್ವನಿ ಡಿಜಿಟಲ್ ಮಾಧ್ಯಮದೊಂದಿಗೆ ಮಾತನಾಡಿ 2023 ವಿಧಾನಸಭಾ ಮೇ 10 ರಂದು ನಡೆಯಲಿರುವ ಚುನಾವಣೆಯನ್ನು ಶಾಂತಿಯುತ-ನ್ಯಾಯಸಮ್ಮತ ಮತ್ತು ಯಶಸ್ವಿಯಾಗಿ ನಡೆಸಲು ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿಶೇಷವಾಗಿ ಮತದಾನದ ಪ್ರಮಾಣವನ್ನು ಶೇಕಡಾ ನೂರಕ್ಕೆ, ನೂರರಷ್ಟು ಹೆಚ್ಚಿಸಲು ವಿಶೇಷ ಕಾರ್ಯಕ್ರಮಗಳ ಮೂಲಕ ಮತದಾರರಲ್ಲಿ ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಜಾಗೃತಿ ಮೂಡಿಸಲಾಗಿದೆ.
ಇನ್ನೂ ಮತದಾರರನ್ನು ಮತಗಟ್ಟೆಯತ್ತ ಆಕರ್ಷಿಸಲು ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಪರಿಸರ ಸ್ನೇಹಿ ಮತಗಟ್ಟೆ, ಸಖೀ ಮತಗಟ್ಟೆ, ಯುವ ಪ್ರೇರಣಾ ಮತಗಟ್ಟೆ,ವಿಶೇಷ ಕಲ್ಪನೆ ಆಧಾರಿತ (ಸಖಿ) ಮಾದರಿ ಮತಗಟ್ಟೆಯನ್ನು ಸ್ಥಾಪಿಸಲಾಗಿದೆ.


ವಿಧಾನಸಭಾ ಕ್ಷೇತ್ರದಲ್ಲಿ ಸ್ಥಾಪಿಸಲಾಗಿದ ಮತಗಟ್ಟೆಗಳು ವರ್ಲಿ ಕಲೆ ಸೇರಿದಂತೆ ಬಗೆ, ಬಗೆಯ ಚಿತ್ರಗಳ ಜೊತೆಯಲ್ಲಿ ಮತದಾನದ ಕುರಿತು ಘೋಷ ವಾಖ್ಯೆಗಳನ್ನು ಒಳಗೊಂಡು ಎಲ್ಲರ ಗಮನ ಸೆಳೆಯುತ್ತಿವೆ. ಪಿಂಕ್ ಬಣ್ಣದಿಂದ ಅಲಂಕೃತಗೊಂಡ ಸಖಿ ಮತಗಟ್ಟೆ, ಹಸಿರು ಬಣ್ಣದಿಂದ ಶೃಂಗಾರಗೊAಡ ಪರಿಸರ ಸ್ನೇಹಿ ಮತಗಟ್ಟೆ, ಯುವ ಮತದಾರರನ್ನು, ವಿಶೇಷ ಚೇತನ ಮತದಾರರನ್ನು ಆಕರ್ಷಿಸುವ ರಂಗು, ರಂಗಿನ ಚಿತ್ತಾರದ ಚಿತ್ರಗಳು, ಗೊಡೆ ಬಹಗಳು ಎಲ್ಲರನ್ನೂ ಕೈ ಬೀಸಿ ಕರೆಯುವಂತಿವೆ. ಇನ್ನೂ ನನ್ನ ಮತ ಮಾರಾಟಕ್ಕಿಲ್ಲಾ, ನಿಮ್ಮ ಮತ ನಿಮ್ಮ ಭವಿಷ್ಯ, ಮತದಾನ ನಮ್ಮ ಹಕ್ಕು, ಕರ್ತವ್ಯ ಎಂಬ ಗೋಡೆ ಬರಹದ ಸಾಲುಗಳು ಮತದಾರರನ್ನು ಜಾಗೃತಗೊಳಿಸುವಂತೆ ಮಾಡಲಾಗಿದೆ.


ಈ ರೀತಿ ಹಲವು ವಿಧದಲ್ಲಿ ಹೆಚ್ಚಿನ ಮತದಾನವಾಗಲು ಪ್ರಯತ್ನ ನಡೆಸಲಾಗುತ್ತಿದೆ. ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಶೇ 100 ರ ಗಡಿ ಮುಟ್ಟಲು ಸರ್ವರೂ ಸಹಕರಿಸಬೇಕು ಎಂದು ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಪಂ ಇಒ ಹೊನ್ನಯ್ಯ ಮನವಿ ಮಾಡಿಕೊಂಡಿದ್ದಾರೆ.
ಪಿಡಿಒ ರಾಮಚಂದ್ರ ಮಾತನಾಡಿ ಈಗಾಗಲೆ ನಗರಂಗೆರೆ ಗ್ರಾಪಂ ವ್ಯಾಪ್ತಿಯಲ್ಲಿ ಮತದಾನ ಹೆಚ್ಚಿಸಲು ರಂಗೋಲಿ, ಬೈಕ್ ರ‍್ಯಾಲಿ, ಪ್ರಬಂಧ ಸ್ಪರ್ಧೆ, ಸೆಲ್ಫಿ ಪಾಯಿಂಟ್ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಸಿದ್ದಾಪುರ ಗ್ರಾಮದಲ್ಲಿ ಸುಮಾರು 700 ಕ್ಕೂ ಹೆಚ್ಚು ಮಹಿಳಾ ಮತದಾರರ ಸಂಖ್ಯೆ ಇರುವ ಮತಗಟ್ಟೆಯನ್ನು ಸಖಿ ಮತಗಟ್ಟೆ ಎಂದು ಗುರುತಿಸಿ ಮತದಾನ ಹೆಚ್ಚಿಸಲು ಮತದಾರರನ್ನು ಕೈ ಬೀಸಿ ಕರೆಯುವಂತೆ ಬಣ್ಣ ಬಣ್ಣ ಚಿತ್ತಾರದಿಂದ ಅಲಂಕರಿಸಲಾಗಿದೆ ಎಂದು ತಿಳಿಸಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page