ಶೋಷಿತರ ಜಾಗೃತಿಗಾಗಿ ಜ‌.28ರಂದು ಕೋಟೆ ನಾಡಿನಲ್ಲಿ ರಾಜ್ಯ ಸಮಾವೇಶ

by | 14/01/24 | ಸುದ್ದಿ


ಚಳ್ಳಕೆರೆ ಜ.14 ರಾಜ್ಯದಲ್ಲಿ ಅಹಿಂದ ಸಮುದಾಯಗಳು ಒಗ್ಗಟ್ಟಾಗಿ ನಡೆದು ರಾಜಕೀಯ ಆರ್ಥಿಕ ಸಾಮಾಜಿಕವಾಗಿ ಬಲಾಢ್ಯವಾಗಲು ಇದು ಸಕಾಲವಾಗಿದ್ದು ಜ. 28ರಂದು ಭಾನುವಾರ ಶೋಷಿತರ ಜಾಗೃತಿಗಾಗಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ರಾಜ್ಯ ಸಮಾವೇಶ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮುದಾಯದಗಳು ಒಗ್ಗಟ್ಟು ಪ್ರದರ್ಶಿಸಬೇಕಿದೆ ಎಂದು ಚಿತ್ರದುರ್ಗ ಲೋಕಸಭೆಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಜೆಜೆ ಹಟ್ಟಿ ತಿಪ್ಪೇಸ್ವಾಮಿ ಕರೆ ನೀಡಿದರು.

ನಗರದ ಗೊಲ್ಲ ಸಮುದಾಯದ ಹಾಸ್ಟೆಲ್ ಆವರಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ತಳ ಸಮುದಾಯಗಳು ಹಿಂದಿನಿಂದಲೂ ಅತ್ಯಂತ ಶೋಚನೀಯ ಸ್ಥಿತಿಯನ್ನು ಎದುರಿಸುತ್ತಿದ್ದು ಮೇಲ್ವರ್ಗದ ಕುತಂತ್ರದಿಂದಾಗಿ ದೇಶದ ಸಂಪತ್ತು ಸಮಾನವಾಗಿ ಹಂಚಿಕೆಯಾಗದೆ ಸಾವಿರಾರು ವರ್ಷಗಳಿಂದ ಸಂಕಷ್ಟವನ್ನು ಅನುಭವಿಸಿದವು ಡಾ. ಬಿಆರ್ ಅಂಬೇಡ್ಕರ್ ರವರ ಸಂವಿಧಾನದಿಂದ ಕಳೆದ 70 ವರ್ಷಗಳಿಂದ ವಿದ್ಯೆ ಉದ್ಯೋಗ ಅಧಿಕಾರ ಅಂತಸ್ತು ಸಮಾನತೆಗಳನ್ನು ಪಡೆದು ದೇಶದ ಮೂಲ ನಿವಾಸಿಗಳು ಪ್ರಗತಿಯತ್ತ ಮುನ್ನಡೆಯುತ್ತಿದ್ದಾರೆ ಇನ್ನಾದರೂ ಅವಕಾಶ ವಂಚಿತ ಸಮುದಾಯದ ಮುಖಂಡರು ಹಾಗೂ ಜನತೆ ಎಚ್ಚೆತ್ತುಕೊಂಡು ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಬಲ ಪ್ರದರ್ಶಿಸಬೇಕಿದೆ ತಮ್ಮ ಹಕ್ಕನ್ನು ಪಡೆಯುವ ಸುಸಂದರ್ಭ ಒದಗಿ ಬಂದಿದ್ದು ಅಂದಿನ ದಿನ ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಸಮುದಾಯದ ಜನರನ್ನು ಗ್ರಾಮೀಣ ಪ್ರದೇಶಗಳಲ್ಲಿ ಪ್ರೇರೇಪಿಸಿ ಕರೆ ತರಬೇಕು ಎಂದು ತಿಳಿಸಿದರು.

ಕಾಂಗ್ರೆಸ್ ಮುಖಂಡ ಎಚ್ಎಸ್ ಸೈಯದ್ ಮಾತನಾಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರಿಂದ ಇಂದು ಮುಸ್ಲಿಂ ಸಮುದಾಯ ಉಸಿರಾಡುತ್ತಿದೆ ಇಲ್ಲದಿದ್ದರೆ ಇಂದಿಗೂ ಸಹ ಭಯಭೀತರಾಗಿ ಬದುಕಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತಿತ್ತು ದೇವರ ದಯೆಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಹಿಂದ ಸಮುದಾಯಗಳ ಏಳಿಗೆಗಾಗಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದು ಅವರ ಕೈ ಬಲ ಪಡಿಸಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಮುಸ್ಲಿಂ  ಕ್ರೈಸ್ತ ಮಡಿವಾಳ ವಿಶ್ವಕರ್ಮ ಕುರುಬ ಉಪ್ಪಾರ ಬಲಿಜ ಗೊಲ್ಲ ಸಮುದಾಯಗಳು ಸೇರಿದಂತೆ ಇನ್ನಿತರ ಎಲ್ಲಾ ಹಿಂದುಳಿದ ಸಮುದಾಯಗಳು ಸಮಾವೇಶದಲ್ಲಿ ಪಾಲ್ಗೊಳ್ಳುವ ಮೂಲಕ ಕೋಟೆ ನಾಡಿನಲ್ಲಿ ಐತಿಹಾಸಿಕ ಶೋಷಿತ ಸಮುದಾಯಗಳ ಜಾಗೃತಿಗಾಗಿ ರಾಜ್ಯ ಸಮಾವೇಶವನ್ನು ಆಯೋಜಿಸಲಾಗಿದ್ದು ಎಲ್ಲ ಸಮುದಾಯಗಳು ತಮ್ಮ ಕೆಲಸ ಕಾರ್ಯಗಳನ್ನು ಬದಿಗೊತ್ತಿ ಹಕ್ಕುಗಳನ್ನು ಪಡೆದುಕೊಳ್ಳಲು ಸಮಾವೇಶದಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ವಿಶ್ವಕರ್ಮ ಸಮಾಜದ ರಾಜ್ಯಾಧ್ಯಕ್ಷ ಆರ್ ಪ್ರಸನ್ನ ಕುಮಾರ್ ಮಾತನಾಡಿ ಅವಕಾಶ ವಂಚಿತ ಜಾತಿಗಳಿಗೆ ಮೀಸಲಾತಿ ನೀಡಿ ಸಾಮಾಜಿಕ ಸಮಾನತೆ ಸಾರಿದ ಕರ್ನಾಟಕ ಅಗ್ರಗಣ್ಯ ರಾಜ್ಯ ವಾಗಿದ್ದು ಹಲವು ಹಿಂದುಳಿದ ವರ್ಗಗಳ ಆಯೋಗಗಳು ವೈಜ್ಞಾನಿಕ ಅಧ್ಯಯನ ನಡೆಸಿ ಮೀಸಲಾತಿ ಜಾರಿಯಾಗಿದೆ ಆದರೆ ಬಲಾಡ್ಯರು ಶೋಷಿತರ ಪಾಲನ್ನು ಕಬಳಿಸುತ್ತಿರುವುದು ಶೋಚನೀಯಾವಾಗಿದೆ ಆದ್ದರಿಂದ ಹೆಚ್ ಕಾಂತರಾಜ್ ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಸ್ವೀಕರಿಸಿ ಸಾರ್ವಜನಿಕರ ಚರ್ಚೆಗೆ ಬಿಟ್ಟು ವರದಿಯನ್ನು ಅಂಗೀಕರಿಸಿ ಜಾರಿಗೊಳಿಸಬೇಕು ಕೇಂದ್ರ ಸರ್ಕಾರವು ಜಾತಿವಾರು ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆ ಮಾಡಿಸಬೇಕು ಶೇಕಡ 10ರಷ್ಟು ಮೀಸಲಾತಿ ರದ್ದು ಪಡಿಸುವಂತೆ ಒತ್ತಾಯಿಸಬೇಕು ಮಹಿಳಾ ಮೀಸಲಾತಿ ಕಾಯ್ದೆಯನ್ನು ಕೂಡಲೇ ಜಾರಿ ಮಾಡಬೇಕು ರಾಜಕೀಯ ಮೀಸಲಾತಿಯನ್ನು ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಹಿಂದುಳಿದ ಜಾತಿಗಳಿಗೆ ಮತ್ತು ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸಬೇಕು ಇಂತಹ ಹಲವು ಬೇಡಿಕೆಗಳು ತಳ ಸಮುದಾಯ ಗಳಿಗೆ ಈಡೇರಬೇಕಾಗಿರುವುದರಿಂದ ಈ ಸಮಾವೇಶದಲ್ಲಿ ಪಾಲ್ಗೊಳ್ಳುವುದು ಎಲ್ಲ ಸಮುದಾಯಗಳ ಕರ್ತವ್ಯವಾಗಿದೆ ಹೀಗಾಗಿ ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೋರಿದರು‌.

ಈ ಸಂದರ್ಭದಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂಜೆ ರಾಘವೇಂದ್ರ ಸಿ ಬಾಬು ನೇತಾಜಿ ಆರ್ ಪ್ರಸನ್ನ ಹೆಚ್ ಎಸ್ ಸೈಯದ್ ಮುಜೀಬ್ ಉಲ್ಲ ಬಿ ವಿ ಸಿರಿಯಣ್ಣ ಸೇರಿದಂತೆ ಹಲವು ಸಮುದಾಯಗಳ ಮುಖಂಡರುಗಳು ಭಾಗವಹಿಸಿದ್ದರು.

Latest News >>

ಕರ್ನಾಟಕ ಭೀಮಸೇನೆಯ ರಾಜ್ಯಾಧ್ಯಕ್ಷ ಶಂಕರ್ ರಾಮ ಲಿಂಗಯ್ಯನವರ ಆದೇಶದ ಮೇರೆಗೆ ಜಿಲ್ಲಾಪದಾಧಿಕಾರಿಗಳ ಹಾಗೂ ಕಾರ್ಯಕಾರಣಿ ಸಭೆಯ ಉದ್ಘಾಟನೆ ಕಾರ್ಯಕ್ರಮ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಕರ್ನಾಟಕ ಭೀಮ ಸೇನೆ ಸಂಘಟನೆಯನ್ನು ಬಲಪಡಿಸುವ ಮೂಲಕ ಬಡವರಿಗೆ, ನೊಂದವರಿಗೆ, ಶೋಷಿತರಿಗೆ, ಸಮಾಜದ...

ಚಿತ್ರದುರ್ಗ ನಗರದ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾ ನ್ಯಾಯಾಧೀಶರ ಅನಿರೀಕ್ಷಿತ ಭೇಟಿ ಅಂಗನವಾಡಿ ಕೇಂದ್ರದ ಕಟ್ಟಡ, ನಿರ್ವಹಣೆ ಬಗ್ಗೆ ತೀವ್ರ ಅಸಮಾಧಾನ

ಚಿತ್ರದುರ್ಗ ಜುಲೈ24: ಚಿತ್ರದುರ್ಗ ನಗರ ವ್ಯಾಪ್ತಿಯ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೊಣ...

ಕೆಎಂಆರ್‌ಸಿ ನಿಧಿಯಡಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಗಣಿ ಪ್ರದೇಶದಲ್ಲಿ ಕ್ಷಯರೋಗ ಪತ್ತೆ ಆಂದೋಲನಕ್ಕೆ ಸೂಚನೆ -ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ ಜುಲೈ23: ಕೆಎಂಇಆರ್‌ಸಿ(ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ) ನಿಧಿಯಡಿ ಜಿಲ್ಲೆಯ ಗಣಿ ಬಾಧಿತ ಪ್ರದೇಶದಲ್ಲಿನ ಆರೋಗ್ಯ...

ರೈತರು ಕೃಷಿಯನ್ನ ವ್ಯವಹಾರಿಕವಾಗಿ ಮಾಡಿ ಹೆಚ್ಚಿನ ಆದಾಯ,ಲಾಭಗಳಿಸುವ ನಿಟ್ಟಿನಲ್ಲಿ ಮುನ್ನಡೆಯಬೇಕು ಆಡಳಿತ ಮಂಡಳಿ ಸದಸ್ಯರಾದ ಡಾಪಿ.ಕೆ.ಬಸವರಾಜ್

ಹಿರಿಯೂರು: ರೈತರು ಕೃಷಿಯನ್ನು ವ್ಯವಹಾರಿಕವಾಗಿ ಮಾಡಿ ಹೆಚ್ಚಿನ ಆದಾಯ ಹಾಗೂ ಲಾಭಗಳಿಸುವ ನಿಟ್ಟಿನಲ್ಲಿ ಮುನ್ನಡೆಯಬೇಕು ಎಂಬುದಾಗಿ ಕೆಳದಿ...

ದಕ್ಷಿಣಕಾಶಿ ಖ್ಯಾತಿಯ ಹಿರಿಯೂರಿನ ಮೂಲಸೌಕರ್ಯ ಅಭಿವೃದ್ಧಿಗೆ ವೇಗವನ್ನು ನೀಡಲು ಸ್ಮಾರ್ಟ್ ಸಿಟಿ ಸ್ಪರ್ಷ ನೀಡಲಾಗುವುದು:ಉಸ್ತುವಾರಿಸಚಿವರಾದ ಡಿ.ಸುಧಾಕರ್

ಹಿರಿಯೂರು: ದಕ್ಷಿಣಕಾಶಿ ಖ್ಯಾತಿಯ ಹಿರಿಯೂರಿನ ಮೂಲ ಸೌಕರ್ಯ ಅಭಿವೃದ್ಧಿಗೆ ವೇಗವನ್ನು ನೀಡುವ ಉದ್ದೇಶದಿಂದ ಸ್ಮಾರ್ಟ್ ಸಿಟಿ ಸ್ಪರ್ಷ...

ಜಿಲ್ಲಾ ಮಟ್ಟದ ಸಮನ್ವಯ ಮತ್ತು ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ರೈತ ಉತ್ಪಾದಕ ಸಂಸ್ಥೆಗಳ ಪ್ರಮಾಣ ಹೆಚ್ಚಿಸಿ

ಚಿತ್ರದುರ್ಗ ಜುಲೈ.23: ಜಿಲ್ಲೆಯಲ್ಲಿ ರೈತ ಉತ್ಪಾದಕ ಸಂಸ್ಥೆಗಳ ಪ್ರಮಾಣ ಹೆಚ್ಚಳಕ್ಕೆ ವಿವಿಧ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು...

ಜುಲೈ 27 ಕ್ಕೆ ಬಯಲುಸೀಮೆ ಮಲೆನಾಡು ಕರಾವಳಿ ಕುಂಚಿಟಿಗರ ಏಕೀಕರಣ ಪ್ರವಾಸ

ಹಿರಿಯೂರಯ ಜು.22 ದಕ್ಷಿಣ ಭಾರತದಲ್ಲಿ ಕುಂಚಿಟಿಗರ ಏಕೀಕರಣ ಮತ್ತು ಧೃವೀಕರಣ ಹೋರಾಟದ ಮುಂದುವರಿದ ಭಾಗವಾಗಿ ಬಯಲುಸೀಮೆ ಮಲೆನಾಡು ಕರಾವಳಿ...

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ಬಾಲ ಗರ್ಭಿಣಿ ಪ್ರಕರಣ : ಎಂ.ಎಲ್.ಸಿ ಹಾಗೂ ಎಫ್.ಐ.ಆರ್ ಕೈಗೊಳ್ಳಲು ಸೂಚನೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

ಚಿತ್ರದುರ್ಗ ಜು 22: ಆಸ್ಪತ್ರೆಗಳಲ್ಲಿ ಬಾಲ ಗರ್ಭಿಣಿ ಪ್ರಕರಣ ಪತ್ರೆಯಾದ ತಕ್ಷಣವೇ ಎಂ.ಎಲ್.ಸಿ (ಮೆಡಿಕೋ ಲೀಗಲ್ ಕೇಸ್) ಮಾಡಿ ಎಫ್.ಐ.ಆರ್....

ತಾಲ್ಲೂಕಿನ ಹಾಲಮಾದೇನಹಳ್ಳಿಯಲ್ಲಿ ವಿದ್ಯುತ್ಅವಗಡ ದುರಸ್ತಿವೇಳೆ ಲೈನ್ ಮ್ಯಾನ್ ಶ್ರೀಶೈಲಾ ಸ್ಥಿತಿಗಂಭೀರ

ಹಿರಿಯೂರು: ತಾಲ್ಲೂಕಿನ ಹಾಲಮಾದೇನಹಳ್ಳಿಯಲ್ಲಿ ವಿದ್ಯುತ್ ದುರಸ್ತಿವೇಳೆ ವಿದ್ಯುತ್ ಪ್ರವಹಿಸಿ ಬೆಸ್ಕಾಂ ಇಲಾಖೆಯ ಶ್ರೀಶೈಲ ಎನ್ನುವ ಲೈನ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page