ಶೋಷಿತ ಸಮಾಜಕ್ಕೆ ಗಟ್ಟಿ ಧ್ವನಿಯಾಗಿ ನಿಂತವರು ಡಾ ಬಿ ಆರ್ ಅಂಬೇಡ್ಕರ್ ರವರು ಶ್ರೀಧರಕಲಿವೀರ್.

by | 17/12/23 | ಸುದ್ದಿ


ಚಳ್ಳಕೆರೆ:: ಬಾಲ್ಯ ದಿಂದಲೇ ಅವಮಾನ ಕೀಳಿರಿಮಯಿಂದ ಶೋಷಿತ ಸಮಾಜಕ್ಕೆ ಗಟ್ಟಿಯಾಗಿ ನಿಂತವರು ಡಾ ಬಿ ಆರ್ ಅಂಬೇಡ್ಕರ್ ಅವರು ಎಂದು ಹಿರಿಯ ಹೋರಾಟಗಾರ ಶ್ರೀಧರ್ ಕಲಿವೀರ್ ಹೇಳಿದ್ದಾರೆ.

ನಗರದ ಬಿಇಓ ಕಚೇರಿ ಆವರಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪರಿವರ್ತನವಾದ) ಚಿತ್ರದುರ್ಗ ಮತ್ತು ತಾಲೂಕು ಸಮಿತಿ ಹಮ್ಮಿಕೊಂಡಿದ್ದ ಬಾಬಾ ಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ಪರಿನಿಬ್ಬಾಣ ಅಂಗವಾಗಿ ಸಂವಿಧಾನ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದಾರೆ. ಡಾ. ಬಿ ಆರ್ ಅಂಬೇಡ್ಕರ್ ಅವರು ಹಾಕಿ ಕೊಟ್ಟಂತಹ ಸಂವಿಧಾನ ಮತ್ತು ತತ್ವ ಸಿದ್ಧಾಂತಗಳು ಕೇವಲ ಒಂದು ದೇಶಕ್ಕೆ ಸೀಮಿತವಾಗದೆ ಇಡೀ ವಿಶ್ವಕ್ಕೆ ಮಾದರಿಯಾಗಿವೆ. ಡಾಕ್ಟರ್ ಬಿ ಅಂಬೇಡ್ಕರ್ ನಮ್ಮ ದೇಶ ಕಂಡ ಮಹಾನ್ ಸಾಮಾಜಿಕ ಪರಿವರ್ತಕ ಆರ್ಥಿಕ ಶಾಸ್ತ್ರಜ್ಞರಾಗಿದ್ದು ಅವರು ರಚಿಸಿದಂತಹ ಸಂವಿಧಾನದಿಂದ ರಾಜಕೀಯ ಸಾಮಾಜಿಕ ಸ್ವಾತಂತ್ರ್ಯ ಹೊಂದಲು ಸಾಧ್ಯವಾಗಿದೆ ಎಂದರು,

ಇದೆ ವೇಳೆ ಜಿಲ್ಲಾ ಪ್ರಧಾನ ಸಂಚಾಲಕ ಹೆಗ್ಗೆರೆ ಮಂಜುನಾಥ್ ಮಾತನಾಡಿ ಅಜ್ಞಾನದ ಕತ್ತಲೆ ತುಂಬಿದ ಜಗತ್ತಿಗೆ ಬೆಳಕು ಚೆಲ್ಲಿದ ಮಹಾ ಚಿಂತಕ ಬಾಬಾ ಸಾಹೇಬ್ ಡಾ. ಬಿ .ಆರ್. ಅಂಬೇಡ್ಕರ್ ಅವರ ವಿಚಾರಧಾರೆಯನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಅವಶ್ಯಕತೆ ಇದೆ ಎಂದರು.


ಇನ್ನೂಜಿಲ್ಲಾ ಕಲಾಮಂಡಳಿಯ ಸಂಚಾಲಕ ನಲಗೇತನಹಟ್ಟಿ ಕೆ ಟಿ ಮುತ್ತುರಾಜ್ ಮಾತನಾಡಿ ಭವಿಷ್ಯದ ಬದುಕಿಗೆ ಪವಿತ್ರ ಗ್ರಂಥವಾದ ಸಂವಿಧಾನ ಸಾರವನ್ನು ತಿಳಿಯಬೇಕಾದರೆ ಮೊದಲು ಅಂಬೇಡ್ಕರ್ ಅವರನ್ನು ಬೆಳಕಿಗೆ ತರಬೇಕಿದೆ ಪ್ರತಿಯೊಂದು ಮನೆಯಲ್ಲಿ ಪ್ರಜ್ವಲಿಸಬೇಕಿದ್ದ ಅಂಬೇಡ್ಕರ್ ಅವರನ್ನು ಜಾತಿ ಸಂಕೋಲೆಯಲ್ಲಿ ಬಂಧಿಸುವುದು ಸಮಾಜಸವಲ್ಲ ಜಾತ್ಯತೀತ ಮನಸ್ಸಿನಿಂದ ಅವರನ್ನು ಗೌರವಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ಸರ್ವಧರ್ಮ ಶಾಂತಿ ಪೀಠದ ಶ್ರೀ ರಾಮಮೂರ್ತಿ ಸ್ವಾಮೀಜಿ, ಜಿಲ್ಲಾ ಪ್ರಧಾನ ಸಂಚಾಲಕ ಹೆಗ್ಗೆರೆ ಮಂಜುನಾಥ್, ರಾಜ್ಯ ಪ್ರಧಾನ ಸಂಚಾಲಕ ಎಂ ಗೋವಿಂದರಾಜು, ಜಿಲ್ಲಾ ಕಲಾ ಮಂಡಳಿ ಸಂಚಾಲಕ ನಲಗೇತನಹಟ್ಟಿ ಗಾಯಕ ಕೆ ಟಿ ಮುತ್ತುರಾಜ್, ಚಳ್ಳಕೆರೆ ಶಿವಮೂರ್ತಿ, ಪೆನ್ನೇಶ್, ಶಾಂತಮ್ಮ, ಪ್ರಧಾನ ಸಂಚಾಲಕ ಟಿ ಗೋವಿಂದಪ್ಪ, ಪ್ರದೀಪ್, ಇಂದಿರಮ್ಮ, ಜೆ ಮಂಜುನಾಥ್, ಓ ಬಸವರಾಜ್, ಡಿ. ರುದ್ರಮುನಿ ,ಸಂಘಟನಾ ಸಂಚಾಲಕ ದ್ಯಾವರನಹಳ್ಳಿ ಸುರೇಶ್, ಜೋಗಿ ತಿಪ್ಪೇಸ್ವಾಮಿ, ಕಲಾವಿದ ರಾಜಣ್ಣ, ತಾಲೂಕು ಸಂಚಾಲಕ ನಲಗೇತನಹಟ್ಟಿ ಕೆ ಟಿ ಚನ್ನಯ್ಯ, ಕೆ ಎಂ ಅಭಿನವ, ಸೇರಿದಂತೆ ಇನ್ನೂ ಮುಂತಾದವರು ಇದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page