ಶ್ರೀಗುರುತಿಪ್ಪೇರುದ್ರಸ್ವಾಮಿಯ ದೊಡ್ಡ ರಥೋತ್ಸವ ಮಾರ್ಚ್ 10 ರಂದು ಜರುಗಲಿದೆ

by | 06/11/22 | Uncategorized, ಕರ್ನಾಟಕ, ಸಂಗ್ರಹ, ಸುದ್ದಿ

ಜನಧ್ವನಿ ವಾರ್ತೆ ಚಳ್ಳಕೆರೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಪುಣ್ಯಕ್ಷೇತ್ರವು ರಾಜ್ಯಾದ್ಯಾಂತ ಮನೆ ಮಾತಾಗಿರುವ ಮಹಾಕ್ಷೇತ್ರವಾಗಿದೆ. ಚಳ್ಳಕೆರೆ ನಗರದಿಂದ ಸುಮಾರು ೧೬.ಕಿ.ಮೀ ದೂರದಲ್ಲಿರುವ ಈ ಕ್ಷೇತ್ರವು ಐತಿಹಾಸಿಕ ಹಿನ್ನೆಲೆಯೂ ಹೊಂದಿದೆ.
ನಾಯಕನಹಟ್ಟಿ ಕಂದಾಯ ಹೋಬಳಿ ಕೇಂದ್ರ ಸ್ಥಳವಾಗಿದ್ದು ಈ ಗ್ರಾಮದಲ್ಲಿ ಪ್ರತಿ ವರ್ಷ ಪಾಲ್ಗುಣ ಮಾಸ ಬಹುಳದ ಚಿತ್ರ ನಕ್ಷದಂದು ಮಾರ್ಚ್ 10 ರ ಶುಕ್ರವಾರ ಮದ್ಯಾಹ್ನ 3 ಗಂಟೆಗೆ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ದೊಡ್ಡ ರಥೋತ್ಸವವು ಕರ್ನಾಟಕ ರಾಜ್ಯದಲ್ಲಿ ನಡೆಯುವ ಅತ್ಯಂತ ದೊಡ್ಡ ಜಾತ್ರೆಗಳಲ್ಲಿ ಒಂದು. ನಾಯಕನಹಟ್ಟಿ ಜಾತ್ರೆಯು ಹಿಂದೂ- ಮುಸಲ್ಮಾನರ ಭಾವೈಕ್ಯತೆಯ ದ್ಯೋತಕವಾಗಿದೆ. ಇಲ್ಲಿನ ಕೇಂದ್ರ ಶಕ್ತಿಯಾದ ಗುರು ತಿಪ್ಪೇರುದ್ರಸ್ವಾಮಿಯನ್ನು ಶ್ರೀಗುರುತಿಪ್ಪೇರುದ್ರಸ್ವಾಮಿ, ಎಂತಲೂ ಕರೆಯುತ್ತಾರೆ. ಹಿಂದೆ ಪಂಚಗಣಾಧೀಶರರೆAದು ಹೆಳಲಾಗಿರುವ ಕೊಲುಶಾಂತೇಶ, ಕೆಂಪಯ್ಯ, ಚೆನ್ನಯ್ಯ, ಚನ್ನಬಸವೇಶ್ವರ, ಹಾಗೂ ತಿಪ್ಪೇಸ್ವಾಮಿಗಳು ವಿವಿಧ ಪ್ರದೇಶಗಳಲ್ಲಿ ಸಂಚರಿಸಿ ಜನ್ಮ ಜಾಗೃತಿಯನ್ನು ಮೂಡಿಸಿದ್ದರು ಎನ್ನಲಾಗಿದೆ. ಈ ಐವರಲ್ಲಿ ಶ್ರೀ ಗುರುತಿಪ್ಪೇರುದ್ರಸ್ವಾಮಿಯವರು ನಿಡಗಲ್ಲು- ರಾಯದುರ್ಗ, ಕಡೆಗಳಲ್ಲಿ ಸಂಚರಿಸುವ ಸಂದರ್ಭದಲ್ಲಿ ಫಣ ಯಪ್ಪ ಎಂಬ ಭಕ್ತನ ವ್ಯಕ್ತಿತ್ವಕ್ಕೆ ಮಾರುಹೋಗಿ, ಅವರನ್ನು ತನ್ನೊಂದಿಗೆ ಕರೆತರುತ್ತಾರೆ.ಅಲ್ಲಿಯ ಹಳ್ಳಿ ಜನರು ಬಡತನದ ಬಗ್ಗೆ ಅರಿತ ಸ್ವಾಮಿಗಳು ಅಲ್ಲಲ್ಲಿ ಕೆಲವು ಕೆರೆಗಳನ್ನು ನಿರ್ಮಿಸುತ್ತಾರೆ. ಕೂಲಿಕಾರರಿಗೆ ದಿನದ ಕೂಲಿಯನ್ನು ಮಾಡಿದಷ್ಟು ನೀಡು ಭಿಕ್ಷೆ ಎಂಬ ಮಂತ್ರಶಕ್ತಿಯಿಂದ ಸೃಷ್ಠಿಸುತ್ತಿದ್ದರು ಎಂಬ ದಂತಕಥೆಯು ಇದೆ.
ಪವಾಡ ಪುರುಷರಾಗಿದ್ದರೆಂದು ನಂಬಲಾದ ಶ್ರೀಗುರುತಿಪ್ಪೇರುದ್ರಸ್ವಾಮಿಯವರು ಯಾವ ಸ್ಥಳದವರು? ಯಾವ ಜಾತಿಯವರು? ಎಂಬ ಬಗ್ಗೆ ಈಗಲೂ ವಿವಾದಗಳಿವೆ.
ಇವರು ವೀರಶೈವರೆಂದು ಕೆಲವರು ನಂಬಿದ್ದಾರೆ. ಇವರು ಬೇಡ ಜನಾಂಗದವರು ಇದ್ದಿರಬಹುದೆಂದು ಕೆಲವರ ವಾದ. ಒಂದು ದಿನ ನಾಯಕನಹಟ್ಟಿಗೆ ಬಂದು ತಿಪ್ಪೇರುದ್ರಸ್ವಾಮಿಯವರು ಅದೇ ಗ್ರಾಮದಲ್ಲಿದ್ದ ಮಾರಮ್ಮನ ಗುಡಿಗೆ ಹೋಗಿ ಒಂದೆರಡು ದಿನ ತಂಗಲು ಸ್ಥಳಾವಕಾಶ ನೀಡಲು ಮಾರಮ್ಮದೇವಿಯ ಅಪ್ಪಣೆ ಪಡೆದರೆಂದೂ ಮಾರಮ್ಮ ಬದಲು ಹಳ್ಳೀಗಳಿಗೆ ತಿರುಗಾಡಿ ಬರಲು ಹೋದಾಗ ಗುಡಿಯ ತುಂಬಾ ತಿಪ್ಪೇಸ್ವಾಮಿಯವರ ಜೋಳಿಗೆ- ಬೆತ್ತಗಳು ಕಾಣ ಸಿಕೊಂಡು, ಇದನ್ನು ಕಂಡ ಮಾರಮ್ಮ ಗುಡಿಯನ್ನು ತಿಪ್ಪೇಸ್ವಾಮಿಯವರಿಗೆ ಬಿಟ್ಟು ಕೊಟ್ಟು ವಡ್ನಹಟ್ಟಿಗೆ ಹೋಗಿ ನೆಲೆಸಿದಳೆಂದು ಇಲ್ಲಿನ ಜನರ ಕಥೆ ಹೇಳುವುದಿದೆ. ಈಗ ಅದೇ ಗುಡಿಯ ಶ್ರೀಗುರು ತಿಪ್ಪೇಸ್ವಾಮಿಯ ಒಳಮಠ ಇಲ್ಲಿ ತಿಪ್ಪೇಸ್ವಾಮಿಯವರನ್ನು ಲಿಂಗರೂಪದಲ್ಲಿ ಪ್ರತಿಷ್ಟಾಪಿಸಿ ಆರಾಧಿಸಲಾಗುತ್ತಿದೆ.
ಹೊರ ಮಠ ಹಾಗೂ ಒಳ ಮಠ
ನಾಯಕನಹಟ್ಟಿಯಲ್ಲಿ ಶ್ರೀ ಗುರು ತಿಪ್ಪೇರುದ್ರಸ್ವಾಮಿಗೆ ಸಂಭAಧಿಸಿದ ಎರಡು ಆರಾಧನಾ ಸ್ಥಳಗಳಾಗಿದ್ದು ಅವುಗಳನ್ನು ಹೊರ ಮಠ ಹಾಗೂ ಒಳ ಮಠ ಎಂದು ಕರೆಯಲಾಗಿದೆ. ಶ್ರೀ ಗುರುತಿಪ್ಪೇರುದ್ರಸ್ವಾಮಿ ಜೀವಿತಾವಧಿಯಲ್ಲಿ ವಾಸವಾಗಿದ್ದ ಸ್ಥಳವು ಊರೊಳಗಿದ್ದು. ಅದನ್ನು ಒಳಮಠವೆಂದು ಕರೆಯುತ್ತಾರೆ. ಜೀವಂತ ಸಮಾಧಿ ಹೊಂದಿದ್ದ ಸ್ಥಳವು ಊರಿಂದ ಹೊಗಡೆ ಚಿಕ್ಕಕೆರೆ ಹತ್ತಿರ ಇದ್ದು ಇದಕ್ಕೆ ಹೊರಮಠ ಎನ್ನುವರು. ಒಳ ಮಠದ ಗೋಪುರವು ೫೦ ಅಡಿ ಎತ್ತರವಿದ್ದು ಅತ್ಯಾಕರ್ಷಕವಾಗಿದೆ. ಒಳಮಠದ ಮುಂದೆ ಜಾತ್ರೆ ಸಂಧರ್ಭದಲ್ಲಿ ಬೃಹತ್ತಾದ ಅಗ್ನಿಕುಂಡದಲ್ಲಿ ಒಣಗೊಬ್ಬರಿಯ ಹೋಳುಗಳ ರಾಶಿಯನ್ನು ಸುಡುವುದು ರಾಜ್ಯದಲ್ಲಿಯೇ ವಿಶೇಷ ಆಚರಣೆಯಾಗಿದೆ.
ಕೊಬ್ಬರಿ ಸುಡುವ ಪದ್ದತಿ
ಈ ಆಚರಣೆಯನ್ನು ಹಿಂದೆ ವಿಶಿಷ್ಟ ಕತೆಯೇ ಇದೆ. ತಿಪ್ಪೇಸ್ವಾಮಿಯವರು ಮೊದಲಿಗೆ ರಾಯದುರ್ಗದಿಂದ ನಾಯಕನಹಟ್ಟಿಗೆ ಬರುವಾಗ ರಾತ್ರಿ ಕತ್ತಲೆ ಆವರಿಸಿದ್ದು ಫಣ ಯಪ್ಪನನ್ನು ಒಣಗೊಬ್ಬರಿಗಳನ್ನು ಕೋಲುಗಳಿಗೆ ಸಿಕ್ಕಿಸಿ ಬೆಂಗಿಯಿಂದ ಒತ್ತಿಸಿ ಆ ಬೆಳಕಿನಲ್ಲಿ ತಿಪ್ಪೇಸ್ವಾಮಿಯವರನ್ನು ಹಟ್ಟಿಗೆ ಕರೆತಂದರAತೆ. ಆ ಕಾರಣಕ್ಕೆ ಇಂದಿಗೂ ತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ಭಕ್ತರು ಒಣ ಕೊಬ್ಬರಿ ಸುಡುವ ಸಂಪ್ರದಾಯ ರೂಡಿಯಲ್ಲಿದೆ. ಅದೇ ರೀತಿ ದುಂಡು ಮೆಣಸು, ಎರಚಲು ಸಂಪ್ರದಾಯ ಇಲ್ಲಿ ಇರುತ್ತದೆ. ಹೊರಮಠವನ್ನು ಶ್ರೀ ತಿಪ್ಪೇರುದ್ರಸ್ವಾಮಿ ಗದ್ದುಗೆ ಎಂದು ಒಳಮಠವನ್ನು ಶ್ರೀ ತಿಪ್ಪೇಸ್ವಾಮಿ ಮಠವೆಂದು ಕರೆಯುತ್ತಾರೆ. ಒಳ ಮಠಕ್ಕೆ ಶೈವರು ಪೂಜಾಧಿಕಾರವನ್ನು ಹೊಂದಿದ್ದರೆ. ಒಳ ಮಠದಲ್ಲಿ ಪ್ರತಿ ಸೋಮವಾರ ಪೂಜಾ ನಡೆಯುವುದಕ್ಕೆ ಹೊರಮಠಕ್ಕೆ ಜೀವಕಳೆ ಬರಬೇಕು ವಾಡಿಕೆಯಿಂದ ನಾಯಕನಹಟ್ಟಿ ಜಾತ್ರೆಗೆ ಕರ್ನಾಟಕ ರಾಜ್ಯದ ಅನೇಕ ಜಿಲ್ಲೆಗಳಿಂದಷ್ಟೆ ಅಲ್ಲದೆ ಆಂದ್ರ, ತಮಿಳುನಾಡು, ರಾಜ್ಯಗಳಿಂದಳೂ ಭಕ್ತರು ಸಾಗರೋಪಾದಿಯಲ್ಲಿ ಸೇರುತ್ತಾರೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *