ಚಳ್ಳಕೆರೆ ಸೆ.1.ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದ ಪ್ರಯುಕ್ತ ಗುರುವಾರ ಹಾಗೂ ಶುಕ್ರವಾರ ಎರಡು ದಿನಗಳ ಕಾಲ ನಗರದ ವಿವಿಧೆಡೆ ರಾಯರ ಮಂದಿರದಲ್ಲಿ ಆರಾಧನೆ ಹಾಗೂ ವಿಶೇಷ ಪೂಜಾ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು.
ನಗರ ವಾಲ್ಮೀಕಿ ನಗರದ ಶ್ರೀಗುರುರಾಘವೇಂದ್ರಸ್ವಾಮಿಯ ರಾಯರ ಬೃಂದಾವನಕ್ಕೆ ವಿಶೇಷ ಅಭಿಷೇಕ, ಅಲಂಕಾರ, ಕನಕಾಭಿಷೇಕ ಅರ್ಚನೆ ಸೇವೆ ನಡೆಯಿತು.
ನೂರಾರು ಭಕ್ತರು ಭಾಗವಹಿಸಿ, ವಿಶೇಷ ಪೂಜೆ ಸಲ್ಲಿಸಿದರು.
ರಾಯರ ಆರಾಧನಾ ಮಹೋತ್ಸವದ ಪ್ರಯುಕ್ತ ಮಠದಲ್ಲಿ ಬೆಳಿಗ್ಗೆಯಿಂದ ವಿಶೇಷ ಪೂಜೆಗಳು ಜರುಗಿದವು. ಸೆಪ್ಟೆಂಬರ್ 1 ಮತ್ತು 2ರಂದು ಬೆಳಿಗ್ಗೆ 6.30ಕ್ಕೆ ರಾಘವೇಂದ್ರ ಅಷ್ಟೋತ್ತರ ಪಾರಾಯಣ ನಡೆಯುವುದು. ರಾಘವೇಂದ್ರ ಸ್ವಾಮಿಗಳವರ ವೃಂದಾವನದ ಪ್ರಮುಖರು ತಿಳಿಸಿದರು. ರಾಯರ ಆರಾಧನಾ ಕಾರ್ಯಕ್ರಮದಲ್ಲಿ ಶಾಸಕ ಟಿ.ರಘುಮೂರ್ತಿ ಶ್ರೀ ಗುರು ರಾಘವೇಂದ್ರ ಮಠಕ್ಕೆ ಭೇಟಿ ನೀಡಿ ಶ್ರೀ ಗುರು ರಾಘವೇಂದ್ರ ಆರಾಧನಾ ಮಹೋತ್ಸವದ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಾಜಿ ಜಿ ಪಂ ಅಧ್ಯಕ್ಷ ರವಿಕುಮಾರ್ , ನಗರಸಭೆ ಸದಸ್ಯರಾದ ಸುಮಾ ಭರಮಯ್ಯ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಭಕ್ತಾಧಿಗಳು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments