ಶ್ರೀಗುರು ಹಟ್ಟಿ ತಿಪ್ಪೇಶನ ರಥಕ್ಕೆ2.5 ಕೋಟಿ ರೂ ವಿಮೆ ಅಪಾರ ಜಿಲ್ಲಾಧಿಕಾರಿ ಟಿ.ಜವರೇಗೌಡ

by | 09/03/23 | ಸುದ್ದಿ


ಚಳ್ಳಕೆರೆ ಜನಧ್ವನಿವಾರ್ತೆ ಮಾ.8
ಮಧ್ಯಕರ್ನಾಟಕದ ಇತಿಹಾಸ ಪ್ರಸಿದ್ಧ ನಾಯಕನಹಟ್ಟಿ ಗುರುತಿಪ್ಪೇರುದ್ರಸ್ವಾಮಿ ರಥಕ್ಕೆ 2.5 ಕೋಟಿ ಮೊತ್ತದ ವಿಮಾ ಸೌಲಭ್ಯ ಒದಗಿಸಲಾಗಿದೆ ಎಂದು ದೇವಾಲಯದ ಆಡಳಿತಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ವಾರ್ಷಿಕ ಜಾತ್ರೆ ನಿಮಿತ್ತ ದಿ ನ್ಯೂ ಇಂಡಿಯಾ ಅಶ್ಯುರೆನ್ಸ್ ವಿಮಾ ಕಂಪನಿಯ ಅಧಿಕಾರಿಗಳಿಂದ ವಿಮಾ ಪ್ರಮಾಣ ಪತ್ರವನ್ನು ಪಡೆದುಕೊಂಡು ಅವರು ಮಾತನಡಿದರು.
ಮಧ್ಯಕರ್ನಾಟಕದಲ್ಲಿ ಅತೀ ಎತ್ತರದ ರಥ ಎಂಬ ಹೆಗ್ಗಳಿಕೆ ಪಡೆದಿರುವ ಗುರುತಿಪ್ಪೇರುದ್ರಸ್ವಾಮಿ ರಥವನ್ನು ಬೆಲೆಬಾಳುವ ಮರದಿಂದ ನಿರ್ಮಿಸಲಾಗಿದೆ. ಹಾಗೂ ಪ್ರತಿವರ್ಷವೂ ರಥದವನ್ನು ಸಂಪೂರ್ಣವಾಗಿ ಪರಿಶೀಲಿಸಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ರಥದ ದೈಹಿಕ ಸಾಮರ್ಥ್ಯ ಪ್ರಮಾಣಪತ್ರ ನೀಡಿದ ನಂತರ ರಥೋತ್ಸವಕ್ಕೆ ಸಿದ್ಧಗೊಳಿಸಲಾಗುವುದು. ರಥೋತ್ಸವ ವೇಳೆ ಹಾಗೂ ದಿನನಿತ್ಯ ರಥಕ್ಕೆ ಸಾಕಷ್ಟು ಸುರಕ್ಷತೆ ಒದಗಿಸಲಾಗುತ್ತಿದೆ. ಹೀಗಿದ್ದರೂ ಯಾವುದಾದರೂ ನೈಸರ್ಗಿಕ ಅವಘಡಗಳ ಸಂಭವಿಸಿದರೆ ಮುನ್ನೆಚ್ಚರಿಕೆ ಕ್ರಮವಾಗಿ ವಿಮೆಯನ್ನು ಒದಗಿಸಲಾಗಿದೆ. ಜಾತ್ರೆಗೆ ಈಗಾಗಲೆ ಹಲವು ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಮಾರ್ಚ್ ೧೦ರಂದು ಮಹಾರಥೋತ್ಸವ ನಡೆಯಲಿದೆ ಎಂದರು.
ಚಿತ್ರದುರ್ಗದ ನ್ಯೂ ಇಂಡಿಯ ಅಶ್ಯುರೆನ್ಸ್ ಕಂಪನಿಯ ವ್ಯವಸ್ಥಾಪಕ ಎ.ಎಂ.ಶೇಖರಯ್ಯ ಮಾತನಾಡಿ, “ಸತತ ನಾಲ್ಕನೇ ವರ್ಷವೂ ರಥಕ್ಕೆ ವಿಮೆ ನೀಡಲಾಗುತ್ತಿದ್ದು, ಸದರಿ ವರ್ಷ ರಥಕ್ಕೆ ವರ್ಷದ ಎಲ್ಲ ದಿನಗಳಲ್ಲಿ ಮಳೆ, ಗಾಳಿ, ಬೆಂಕಿ ಸೇರಿದಂತೆ ನೈಸರ್ಗಿಕ ಹಾನಿಗಳಿಂದ ಸಂಭವಿಸಬಹುದಾದ ಅವಘಡಗಳಿಗೆ ರೂ.೨.೫ಕೋಟಿ ವಿಮೆ ನೀಡಲಾಗಿದೆ. ಜತೆಗೆ ಜಾತ್ರೆಗಾಗಿ ರಥವನ್ನು ಕಟ್ಟುವ, ಜಾತ್ರೆಯ ದಿನದಂದು ರಥವನ್ನು ಚಲಾಯಿಸುವ ಸಾಂಪ್ರದಾಯಿಕ ಕುಲಕಸುಬುಗಳ ಬಾಬುದಾರರ ಹೆಸರಿರುವ ಒಟ್ಟು ೮೫ಜನರಿಗೆ ರೂ.೨ಲಕ್ಷ, ಮತ್ತು ರಥೋತ್ಸವದಲ್ಲಿ ಭಾಗವಹಿಸುವ ೨೫ಜನ ಅನಾಮಿಕ ಭಕ್ತರಿಗೆ ತಲಾ ರೂ.೧ ಲಕ್ಷ ವಿಮೆ ಒದಗಿಸಲಾಗುವುದು. ವಿಮೆಗಾಗಿ ದೇವಾಲಯದಿಂದ ರೂ.೫೨,೩೬೪ ಮೊತ್ತವನ್ನು ವಿಮಾಕಂಪನಿಯು ಪಡೆದುಕೊಂಡು ಪ್ರಮಾಣಪತ್ರ ನೀಡಲಾಗಿದೆ” ಎಂದರು.
ಧಾರ್ಮಿಕ ದತ್ತಿ ಇಲಾಖೆ ಮುಜುರಾಯಿ ತಹಶೀಲ್ದಾರ್ ಬಿ.ಎಸ್.ವೆಂಕಟೇಶ್, ವಕೀಲ ಬಿ.ಎಂ.ಅರುಣ್‌ಕುಮಾರ್ ಇದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page