ಶ್ರೀಗುರು ಹಟ್ಟಿ ತಿಪ್ಪೇಶನ ಜಾತ್ರೆ ಅಂಗವಾಗಿ ರಥದ ಗಾಲಿ ಹಾಗೂ ಗುಗ್ಗರಿ ಹಬ್ಬಕ್ಕೆ ಚಾಲನೆ ನೀಡಲಾಯಿತು.

by | 27/02/23 | ಚರಿತ್ರೆ


ಚಳ್ಳಕೆರೆ ಜನಧ್ವನಿ ವಾರ್ತೆ ಫೆ.27
ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆ ಅಂಗವಾಗಿ ರಥದ ಗಾಲಿ ಪೂಜೆ ಹಾಗೂ ಗುಗ್ಗರಿ ಹಬ್ಬಕ್ಕೆ ಸೋಮವಾರ ಸಂಭದ್ರಮದಿAದ ಆರಾದ್ಯ ದೈವ ಗುರುತಿಪ್ಪೇರುದ್ರಸ್ವಾಮಿಯ ಹೊರಮಠದಲ್ಲಿ ಗುಗ್ಗರಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸುವ ಮೂಲಕ ಮಾರ್ಚ್ ೧೦ ರಂದು ಮಧ್ಯಹ್ನಾ ೩ ಗಂಟೆಗೆ ನಡೆಯಲಿರುವ ದೊಡ್ಡ ರಥೋತ್ಸವ ಅಂಗವಾಗಿ ಜಾತ್ರೆಯ ಮೊದಲು ಕಾರ್ಯಘಕ್ರಮಕೆಕ ಚಾಲನೆ ನೀಡಲಾಯಿತು.

ಮಧ್ಯ ಕರ್ನಾಟಕ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪಟ್ಟಣದ ಶ್ರೀಗುರು ತಿಪ್ಪೇಸ್ವಾಮಿ ಜಾತ್ರೆಗೆ ಲಕ್ಷಾಂತರ ಭಕ್ತರ ದೈವವಾಗಿ ಪ್ರಸಿದ್ದಿಯನ್ನು ಪಡೆದಿದ್ದಾನೆ. ಈ ಹಿನ್ನೆಲೆಯಲ್ಲಿ ಪಟ್ಟಣದ ಗುರುತಿಪ್ಪೇರುದ್ರಸ್ವಾಮಿ ಹೊರಮಠ ದೇವಾಲಯದಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳು ಪಶುಪಾಲಕ ಮತ್ತು ಬೇಸಾಯಗಾರರ ನೆಲಮೂಲ ಸಂಸ್ಕೃತಿಯ ನೆಲೆಯಲ್ಲಿ ಕಂಡು ಬರುತ್ತವೆ. ಅಂಥಹ ಆಚರಣೆಗಳಲ್ಲಿ ಪ್ರಮುಖವಾದದ್ದು ಗುಗ್ಗರಿ ಹಬ್ಬ.
ಗುಗ್ಗರಿ ಹಬ್ಬದ ವಿಶೇಷ
ವಾರ್ಷಿಕ ಜಾತ್ರೆ ಆಚರಣೆಗೆ ಸಾಕ್ಷಿಯಾಗಿ ಕಂಕಣ ಪೂಜೆಯ ಮೊದಲು ಬರುವ ಸೋಮವಾರದಂದು ಗುಗ್ಗರಿ ಹಬ್ಬವನ್ನು ಆಚರಿಸುವ ಪದ್ಧತಿ ಇದೆ. ಪಟ್ಟಣದ ಹೊರಮಠ ಮತ್ತು ಒಳಮಠದ ದೇವಾಲಯಗಳಲ್ಲಿ ವಿಶೇಷ ಪೂಜೆಯನ್ನು ಕೈಗೊಂಡು ರೈತರು ಬೆಳೆದ ಹೊಸ ಹುರುಳಿ ಧಾನ್ಯವನ್ನು ಮೊದಲು ದೇವರಿಗೆ ಅರ್ಪಿಸುವುದು ವಾಡಿಕೆ. ಜತೆಗೆ ಸಮೀಪದ ಹಳ್ಳಿಗಳಲ್ಲಿ ನೆಲೆಸಿರುವ ಮ್ಯಾಸಮಂಡಲದ ಪ್ರತೀಕವಾದ ದೇವರೆತ್ತುಗಳ ಸಗಣಿ ಬೆರಣಿ (ಕುರುಳಿ)ನಿಂದ ಹುರುಳಿ ಧಾನ್ಯವನ್ನು ಬೇಯಿಸಲಾಗುವುದು. ಹಾಗೂ ಸುಟ್ಟ ಕುರುಳಿನ ಭಷ್ಮವನ್ನು ಹೊರಮಠದಲ್ಲಿ ವಿಭೂತಿಯಾಗಿ ವರ್ಷಪೂರ್ತಿ ಬಳಸುತ್ತಾರೆ. ಮತ್ತು ಬೇಯುಸಿದ ಹುರುಳಿ ಗುಗ್ಗರಿಯನ್ನು ಸಂಜೆ ದೇವಾಲಯಕ್ಕೆ ಬರುವ ಎಲ್ಲಾ ಭಕ್ತರಿಗೆ ಪ್ರಸಾಧವಾಗಿ ಹಂಚಲಾಗುವುದು. ಆ ಮೂಲಕ ಸುಗ್ಗಿಯ ಹಬ್ಬವಾಗಿ ಬಿಂಬಿತವಾಗುವ ಗುಗ್ಗರಿ ಹಬ್ಬವು ಆಹಾರ ಪದ್ಧತಿಯಲ್ಲಿ ಸಮಾನತೆಯನ್ನು ತರುವುದಾಗಿದೆ.
ಒಳಮಠ ಹಾಗೂ ಹೊರಮಠದಲ್ಲಿ ಗುಗ್ಗರಿ ಸ್ವೀಕರಿದ ಭಕ್ತರು
ಪ್ರತಿ ಸೋಮವಾರ ಗುರುತಿಪ್ಪೇರುದ್ರಸ್ವಾಮಿ ದೇವರ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿಕೊಂಡು ಪೂಜಾ ಕೈಂಕರ್ಯ ಸೇವೆಗಾಗಿ ಹೊರಮಠಕ್ಕೆ ಕರೆತರಲಾಗುವುದು. ದೇವಾಲಯದಲ್ಲಿ ವಿಶೇ? ಪೂಜೆ ಹಾಗೂ ಮಂಗಳಾರತಿ ನಂತರ ನೆರೆದ ಭಕ್ತರಿಗೆ ಗುಗ್ಗರಿಯನ್ನು ಪ್ರಸಾಧವಾಗಿ ನೀಡುವ ಪರಿಪಾಠವಿದೆ. ಹಾಗೇ ಇಂದು ದೇವಾಲಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಭಕ್ತರು ಸರದಿ ಸಾಲಿನಲ್ಲಿ ನಿಂತು ಗುಗ್ಗರಿ ಪ್ರಸಾಧ ಪಡೆದು ಬೆಲ್ಲದ ಜತೆಗೆ ತಿನ್ನುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಪೂಜಾ ಕಾರ್ಯಕ್ರಮದಲ್ಲಿ ದೇವಾಸ್ಥನದ ಕಮಿಟಿಯವರು. ಪಟ್ಟಣಪಂಚಾಯತ್ ಸದಸ್ಯರು, ,ಅರ್ಚಕರು ಹಾಗೂ ಭಕ್ತರು ಪಾಲ್ಗೊಂಡಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page