ಹಿರಿಯೂರು :
ಉತ್ತಮ ಆರೋಗ್ಯವಂತ ಸಮಾಜ ನಿರ್ಮಾಣವಾಗಬೇಕಾದರೆ ನಗರದ ಜನತೆ ಸ್ವಚ್ಛತೆಯ ಬಗ್ಗೆ ಹೆಚ್ಚು ಗಮನ ಹರಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ನಗರಸಭೆ ವತಿಯಿಂದ ಸ್ವಚ್ಛತೆ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ, ನಗರದ ಸ್ವಚ್ಛತೆಗಾಗಿ ಸಾರ್ವಜನಿಕರು ನಮ್ಮೊಂದಿಗೆ ಕೈಜೋಡಿಸಬೇಕು ಎಂಬುದಾಗಿ ನಗರಸಭೆ ಪೌರಾಯುಕ್ತರಾದ ಹೆಚ್. ಮಹಾಂತೇಶ್ ಹೇಳಿದರು.
ನಗರದ ಶ್ರೀತೇರುಮಲ್ಲೇಶ್ವರಸ್ವಾಮಿ ದೇವಸ್ಥಾನದ ಆವರಣದಲ್ಲಿ ಸ್ವಸಹಾಯಕ ಸಂಘ ಮತ್ತು ನಗರಸಭೆ ಹಾಗೂ ಪೌರಕಾರ್ಮಿಕರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಸ್ವಚ್ಛತಾ ಈ ಸೇವಾ ಕಾರ್ಯಕ್ರಮ”ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಮಾಜ ಸೇವಕಿ ಶ್ರೀಮತಿ ಶಶಿಕಲಾ ರವಿಶಂಕರ್ ಮಾತನಾಡಿ, ನಗರವನ್ನು ಸ್ವಚ್ಛ ಹಾಗೂ ಸುಂದರ ಮಾದರಿ ನಗರವಾಗಿ ರೂಪಿಸುವ ಉದ್ದೇಶದಿಂದ ನಗರಸಭೆ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರ ಆರೋಗ್ಯ ರಕ್ಷಣೆ ಹಾಗೂ ಸುರಕ್ಷತೆಗಾಗಿ ಶ್ರಮಿಸುತ್ತಿರುವ ನಗರಸಭೆಯೊಂದಿಗೆ ಎಲ್ಲರೂ ಸಹಕರಿಸಬೇಕು ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತರಾದ ಹೆಚ್. ಮಹಾಂತೇಶ್, ಸಮಾಜ ಸೇವಕರಾದ ಶಶಿಕಲಾ ರವಿಶಂಕರ್, ಮಹಿಳಾ ಸ್ವಸಹಾಯಕ ಸಂಘ ಮತ್ತು ಪೌರ ಕಾರ್ಮಿಕರು ಹಿರಿಯ ಆರೋಗ್ಯ ನಿರೀಕ್ಷಕರಾದ ಸುನಿಲ್ ಕುಮಾರ್, ಜಿ.ಮೀನಾಕ್ಷಿ, ವೈ.ಎಸ್.ಸಂಧ್ಯಾ, ಕಿರಿಯ ಆರೋಗ್ಯ ನಿರೀಕ್ಷಕರಾದ ಅಶೋಕ್ ಕುಮಾರ್, ಮಹಾಲಿಂಗರಾಜು, ಸೂಪರ್ವೈಸರ್ ಈರಖ್ಯಾತಪ್ಪ ಮತ್ತು ದುರ್ಗೇಶ್ ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments