ಹಿರಿಯೂರು :
ಶ್ರೀತೇರುಮಲ್ಲೇಶ್ವ:ರಸ್ವಾಮಿಯ ಜಾತ್ರಾ ಮಹೋತ್ಸವ ಯಾವುದೇ ಅಡ್ಡಿ-ಆತಂಕವಿಲ್ಲದಂತೆ ನಡೆಯಬೇಕಾದರೆ ತಾಲ್ಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಜಾತ್ರೆಗೆ ಬರುವ ಸಾರ್ವಜನಿಕರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂಬುದಾಗಿ ತಾಲ್ಲೂಕು ತಹಶೀಲ್ದಾರ್ ಹಾಗೂ ಮುಜರಾಯಿ ಅಧಿಕಾರಿಗಳಾದ ಸಿ.ರಾಜೇಶ್ ಕುಮಾರ್ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಶ್ರೀತೇರುಮಲ್ಲೇಶ್ವರಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ಕರ್ನಾಟಕ ಸರ್ಕಾರದ ಮುಜರಾಯಿ ‘ಬಿ’ ವರ್ಗದ ಶ್ರೀತೇರುಮಲ್ಲೇಶ್ವರಸ್ವಾಮಿ ದೇವರ 2024ನೇ ಸಾಲಿನ ಜಾತ್ರಾ ಮಹೋತ್ಸವ ಅಂಗವಾಗಿ ಕರೆಯಲಾಗಿದ್ದ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ, ಅವರು ಮಾತನಾಡಿದರು.
ಈ ಸಭೆಯಲ್ಲಿ ನಗರಸಭಾ ಪೌರಾಯುಕ್ತರಾದ ಮಹಂತೇಶ್, ಹಾಗೂ ನಗರಸಭೆ ಸದಸ್ಯರುಗಳು, ಪಟ್ಟಣದ ಪ್ರಮುಖರು ಹಾಗೂ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಬೆಸ್ಕಾಂ ಇಲಾಖೆ, ಪಿಡಬ್ಲ್ಯೂಡಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರ್ರಿಂಗ್ ಇಲಾಖೆ, ಅಗ್ನಿಶಾಮಕ ದಳ ಮತ್ತು ಪತ್ರಿಕಾ ಪ್ರತಿನಿಧಿಗಳು, ಸದರಿ ದೇವಸ್ಥಾನದ ಅರ್ಚಕರು, ಕೈವಾಡಸ್ಥರು, ಎಲ್ಲಾ ಆಸಕ್ತ ಭಕ್ತಾಧಿಗಳು ಮತ್ತು ಕಂಧಾಯ ಇಲಾಖೆಯ ಅಧಿಕಾರಿ – ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments