ಶ್ರೀರಾಮಕೃಷ್ಣಾಶ್ರಮದಲ್ಲಿ ಉಚಿತ ಮೇವಿಗಾಗಿ ಸರದಿ ಸಾಲಿನಲ್ಲಿ ನಿಂತ ರೈತರು-ಪಾವಗಡ

by | 11/04/24 | ಜನಧ್ವನಿ

ಪಾವಗಡ ಏ.11 ಬರದ ತೀವ್ರತೆ ಎಷ್ಟಿದೆ ಅಂದರೆ, ರೈತಾಪಿಗಳು ದನಕರುಗಳನ್ನು ಉಳಿಸಿಕೊಳ್ಳಲು ಹರಸಹಾಸ ಪಡುವಂತಾಗಿದೆ. ಹೌದು ಇದು ಪಾವಗಡ ನಗರದ ಹೊರವಲಯದ ರಾಮಕೃಷ್ಣಾಶ್ರಮದಲ್ಲಿಜಾನುವಾರುಗಳಿಗೆ ಉಚಿತ ಮೇವಿಗಾಗಿ ಮೇವು ಬ್ಯಾಂಕ್ ಬಳಿ ರೈತರು ಮೇವು ಪಡೆಯಲು ಬಿಸಿಲು ಲೆಕ್ಕಿಸದೆ ಸರದಿ ಸಾಲಿನಲ್ಲಿ ನಿಂತು ಉಚಿತ ಮೇವು ಪಡೆಯುತ್ತಿದ್ದಾರೆ. ಮೇವು ಪಡೆಯಲು ಬಂದ ರೈತರಿಗೆ ನೆರಳು.ನೀರು. ಐಸ್ಕ್ರೀಂಗನ್ನು ಆಶ್ರಮದಿಂದ ಉಚಿತವಾಗಿ ನೀಡಲಾಗುತ್ತಿದೆ.


ಪಾವಗಡ.ಚಳ್ಳಕೆರೆ.ಮೊಳಕಾಲ್ಮೂರು ತಾಲೂಕುಗಳಲ್ಲಿ ದೇವರ ಎತ್ತುಗಳ ಸಂಖ್ಯೆ ಹೆಚ್ಚಾಗಿದ್ದು ಈ ಬಾರಿ ಹಿಂಗಾರು .ಮುಂಗಾರು ಮಳೆ ಬಾರದೆ ಅಂತರ್ಜಲ ಮಟ್ಟ ಕುಸಿದಿದ್ದು ಜನ ಜಾನುವಾರುಗಳಿಗೆ ನೀರು ಮೇವಿನ ಕೊರತೆ ಎದುರಾಗಿದ್ದುರೈತರು . ಕಿಲಾರಿಗಳು ಜಾನುವಾರುಗಳನ್ನು ಉಳಿಸಿಕೊಳ್ಳಲು ಮೇವಿಗಾಗಿ ಪರದಾಡುವಂತಾಗಿದೆ. ಇಂತಹ ಸಂದರ್ಭದಲ್ಲಿ ಶ್ರೀರಾಮಕೃಷ್ಣಾಶ್ರಮ. ಸುಧಾಮೂರ್ತಿಯವ ಸಹಯೋಗದೊಂದಿಗೆ ಜಾನುವಾರುಗಳಿಗೆ ಉಚಿತ ಮೇವು ವಿತರಣೆ ಮಾಡುವ ಮೂಲಕ ಗೋ ಸಂತತಿ ಪಾಲನೆ ಪೋಷಣೆ ಮಾಡಲು ಮುಂದಾಗಿದ್ದಾರೆ. ಇಂದು ಶ್ರೀ ರಾಮಕೃಷ್ಣ ಸೇವಾಶ್ರಮದಲ್ಲಿ ಕಳೆದ ನಾಲ್ಕು ತಿಂಗಳಿನಿಂದ ನಡೆಯುತ್ತಿರುವ ಕರ್ನಾಟಕ ರಾಜ್ಯದಲ್ಲಿಯೇ ಯಶಸ್ವಿಯಾಗಿ ನಡೆಯುತ್ತಿರುವ ಏಕೈಕ ಉಚಿತ ಮೆವು ವಿತರಣಾ ಕೇಂದ್ರದಲ್ಲಿ ಕಂಡುಬಂದ ದೃಶ್ಯ. ಭಯಂಕರ ತಾಪಮಾನದಲ್ಲಿಯೂ ತಮ್ಮ ತಮ್ಮ ಗೋವುಗಳನ್ನು ರಕ್ಷಿಸಿಕೊಳ್ಳಲು ಮೇವನ್ನು ಉಚಿತವಾಗಿ ಕೊಂಡೋಯುತ್ತಿರುವ ದೃಶ್ಯ!
ಪೂಜ್ಯ ಸ್ವಾಮಿ ಜಪಾನಂದಜಿ ರವರು ಈ ಸಂಧರ್ಭದಲ್ಲಿ ಉಚಿತ ಮಜ್ಜಿಗೆ, ಸಿಹಿ ಹಾಗೂ ಮಧ್ಯಾನ್ಹದ 40° ಉಷ್ಣ ದ ಬೇಗೆಯಲ್ಲಿ, ಉರಿಯಲ್ಲಿ ಬಸವಳಿದ ಜನರಿಗೆ ಶುದ್ಧ ಕುಡಿಯುವ ನೀರು, ಐಸ್ಕ್ರೀಂ ಮತ್ತು ಮಜ್ಜಿಗೆಯನ್ನು ಕಾಲ ಕಾಲಕ್ಕೆ ರೈತಾಪಿ ಜನರಿಗೆ ವಿತರಿಸುತ್ತಿರುವುದು ಕಂಡುಬರುತ್ತಿತ್ತು. ಈ ಸೇವಾಯಜ್ಞ ನಿಜಕ್ಕೂ ಅಸಂಖ್ಯಾತ ಜನರಿಗೆ ಸಹಕಾರವಾಯಿತು ಎನ್ನಬಹುದು.ಪ್ರತಿ ದಿನ ಬೆಳೆಗ್ಗೆಯಿಂದ ಸಂಜೆಯವರೆವಿಗೂ ಈ ಕಾರ್ಯ ನೆರವೇರುತ್ತದೆ. ಇದೇ ಅಲ್ಲವೇ ಸ್ವಾಮಿ ವಿವೇಕಾನಂದಜಿ ರವರು ಬಯಸಿದ “ನಿಷ್ಕಾಮ ಕರ್ಮ ಯೋಗ “.” ಜೀವನಲಿ ಶಿವನ ಸೇವೆ “……..ಎನ್ನುತ್ತಾರೆ ಸಂತ ಜಪಾನಂದಸ್ವಾಮೀಜಿಯವರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page