ಶ್ರೀರಾಮಕೃಷ್ಣಾಶ್ರಮದಲ್ಲಿ ಉಚಿತ ಮೇವಿಗಾಗಿ ಸರದಿ ಸಾಲಿನಲ್ಲಿ ನಿಂತ ರೈತರು-ಪಾವಗಡ

by | 11/04/24 | ಜನಧ್ವನಿ

ಪಾವಗಡ ಏ.11 ಬರದ ತೀವ್ರತೆ ಎಷ್ಟಿದೆ ಅಂದರೆ, ರೈತಾಪಿಗಳು ದನಕರುಗಳನ್ನು ಉಳಿಸಿಕೊಳ್ಳಲು ಹರಸಹಾಸ ಪಡುವಂತಾಗಿದೆ. ಹೌದು ಇದು ಪಾವಗಡ ನಗರದ ಹೊರವಲಯದ ರಾಮಕೃಷ್ಣಾಶ್ರಮದಲ್ಲಿಜಾನುವಾರುಗಳಿಗೆ ಉಚಿತ ಮೇವಿಗಾಗಿ ಮೇವು ಬ್ಯಾಂಕ್ ಬಳಿ ರೈತರು ಮೇವು ಪಡೆಯಲು ಬಿಸಿಲು ಲೆಕ್ಕಿಸದೆ ಸರದಿ ಸಾಲಿನಲ್ಲಿ ನಿಂತು ಉಚಿತ ಮೇವು ಪಡೆಯುತ್ತಿದ್ದಾರೆ. ಮೇವು ಪಡೆಯಲು ಬಂದ ರೈತರಿಗೆ ನೆರಳು.ನೀರು. ಐಸ್ಕ್ರೀಂಗನ್ನು ಆಶ್ರಮದಿಂದ ಉಚಿತವಾಗಿ ನೀಡಲಾಗುತ್ತಿದೆ.


ಪಾವಗಡ.ಚಳ್ಳಕೆರೆ.ಮೊಳಕಾಲ್ಮೂರು ತಾಲೂಕುಗಳಲ್ಲಿ ದೇವರ ಎತ್ತುಗಳ ಸಂಖ್ಯೆ ಹೆಚ್ಚಾಗಿದ್ದು ಈ ಬಾರಿ ಹಿಂಗಾರು .ಮುಂಗಾರು ಮಳೆ ಬಾರದೆ ಅಂತರ್ಜಲ ಮಟ್ಟ ಕುಸಿದಿದ್ದು ಜನ ಜಾನುವಾರುಗಳಿಗೆ ನೀರು ಮೇವಿನ ಕೊರತೆ ಎದುರಾಗಿದ್ದುರೈತರು . ಕಿಲಾರಿಗಳು ಜಾನುವಾರುಗಳನ್ನು ಉಳಿಸಿಕೊಳ್ಳಲು ಮೇವಿಗಾಗಿ ಪರದಾಡುವಂತಾಗಿದೆ. ಇಂತಹ ಸಂದರ್ಭದಲ್ಲಿ ಶ್ರೀರಾಮಕೃಷ್ಣಾಶ್ರಮ. ಸುಧಾಮೂರ್ತಿಯವ ಸಹಯೋಗದೊಂದಿಗೆ ಜಾನುವಾರುಗಳಿಗೆ ಉಚಿತ ಮೇವು ವಿತರಣೆ ಮಾಡುವ ಮೂಲಕ ಗೋ ಸಂತತಿ ಪಾಲನೆ ಪೋಷಣೆ ಮಾಡಲು ಮುಂದಾಗಿದ್ದಾರೆ. ಇಂದು ಶ್ರೀ ರಾಮಕೃಷ್ಣ ಸೇವಾಶ್ರಮದಲ್ಲಿ ಕಳೆದ ನಾಲ್ಕು ತಿಂಗಳಿನಿಂದ ನಡೆಯುತ್ತಿರುವ ಕರ್ನಾಟಕ ರಾಜ್ಯದಲ್ಲಿಯೇ ಯಶಸ್ವಿಯಾಗಿ ನಡೆಯುತ್ತಿರುವ ಏಕೈಕ ಉಚಿತ ಮೆವು ವಿತರಣಾ ಕೇಂದ್ರದಲ್ಲಿ ಕಂಡುಬಂದ ದೃಶ್ಯ. ಭಯಂಕರ ತಾಪಮಾನದಲ್ಲಿಯೂ ತಮ್ಮ ತಮ್ಮ ಗೋವುಗಳನ್ನು ರಕ್ಷಿಸಿಕೊಳ್ಳಲು ಮೇವನ್ನು ಉಚಿತವಾಗಿ ಕೊಂಡೋಯುತ್ತಿರುವ ದೃಶ್ಯ!
ಪೂಜ್ಯ ಸ್ವಾಮಿ ಜಪಾನಂದಜಿ ರವರು ಈ ಸಂಧರ್ಭದಲ್ಲಿ ಉಚಿತ ಮಜ್ಜಿಗೆ, ಸಿಹಿ ಹಾಗೂ ಮಧ್ಯಾನ್ಹದ 40° ಉಷ್ಣ ದ ಬೇಗೆಯಲ್ಲಿ, ಉರಿಯಲ್ಲಿ ಬಸವಳಿದ ಜನರಿಗೆ ಶುದ್ಧ ಕುಡಿಯುವ ನೀರು, ಐಸ್ಕ್ರೀಂ ಮತ್ತು ಮಜ್ಜಿಗೆಯನ್ನು ಕಾಲ ಕಾಲಕ್ಕೆ ರೈತಾಪಿ ಜನರಿಗೆ ವಿತರಿಸುತ್ತಿರುವುದು ಕಂಡುಬರುತ್ತಿತ್ತು. ಈ ಸೇವಾಯಜ್ಞ ನಿಜಕ್ಕೂ ಅಸಂಖ್ಯಾತ ಜನರಿಗೆ ಸಹಕಾರವಾಯಿತು ಎನ್ನಬಹುದು.ಪ್ರತಿ ದಿನ ಬೆಳೆಗ್ಗೆಯಿಂದ ಸಂಜೆಯವರೆವಿಗೂ ಈ ಕಾರ್ಯ ನೆರವೇರುತ್ತದೆ. ಇದೇ ಅಲ್ಲವೇ ಸ್ವಾಮಿ ವಿವೇಕಾನಂದಜಿ ರವರು ಬಯಸಿದ “ನಿಷ್ಕಾಮ ಕರ್ಮ ಯೋಗ “.” ಜೀವನಲಿ ಶಿವನ ಸೇವೆ “……..ಎನ್ನುತ್ತಾರೆ ಸಂತ ಜಪಾನಂದಸ್ವಾಮೀಜಿಯವರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page