ಚಳ್ಳಕೆರೆ; ಮರ್ಯಾದ ಪುರುಷ ಶ್ರೀರಾಮನ ವ್ಯಕ್ತಿತ್ವವನ್ನು ಜಗತ್ತಿಗೆ ತಿಳಿಸಿದ ಮಹಾನ್ ಕವಿ ಶ್ರೀ ವಾಲ್ಮೀಕಿ ರವರ ರಾಮಾಯಣದಲ್ಲಿನ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳುವ ಮೂಲಕ ವಾಲ್ಮೀಕಿ ಹಾಗೂ ಶ್ರೀರಾಮರಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಶಾಸಕ ಟಿ ರಘುಮೂರ್ತಿ ತಿಳಿಸಿದರು
ತಾಲ್ಲೂಕಿನ ಕ್ಯಾದಿಗುಂಟೆ ಗ್ರಾಮದಲ್ಲಿ ನಡೆದ ಶ್ರೀ ಗುರು ಮಹರ್ಷಿ ವಾಲ್ಮೀಕಿ ಸ್ಥಿರಬಿಂಬ ಪ್ರತಿಷ್ಠಾಪನಾ ಸಮಾರಂಭದಲ್ಲಿ ಪಾಲ್ಗೊಂಡು ಉದ್ಘಾಟನೆ ಮಾಡಿ ಮಾತನಾಡಿ ಶ್ರೀ ಮಹರ್ಷಿ ವಾಲ್ಮೀಕಿ ಹಾಗೂ ಶ್ರೀರಾಮರು ಯಾವುದೇ ಒಂದು ಜಾತಿ ಜನಾಂಗಕ್ಕೆ ಸೀಮಿತವಾದವರಲ್ಲ ಅವರ ಆದರ್ಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿದೆ ವಾಲ್ಮೀಕಿಯವರು ಶ್ರೀರಾಮನನ್ನು ಚಿತ್ರಿಸಿದ ರೀತಿ ಹಾಗೂ ಅವರ ಗುಣ ಆದರ್ಶಗಳನ್ನು ರಾಮಾಯಣದಲ್ಲಿ ಜನತೆಗೆ ಮನಮುಟ್ಟುವಂತೆ ಪರಿಚಯಿಸಿದ್ದಾರೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಪ್ರತಿಷ್ಠಾಪಿಸಿರುವುದು ಹೆಮ್ಮೆಯ ಸಂಗತಿಯಾಗಿದೆ ಇದರಲ್ಲಿ ಯಾವುದೇ ಪಕ್ಷ ರಾಜಕೀಯ ಉದ್ದೇಶಗಳನ್ನು ಈಡೇರಿಸಿಕೊಳ್ಳುವುದು ಸರಿಯಲ್ಲ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಾಘವೇಂದ್ರ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಪುಟ್ಟೀರಮ್ಮ ವರದರಾಜು, ಉಪಾಧ್ಯಕ್ಷರಾದ ಶ್ರೀಮತಿ ಲಕ್ಷ್ಮಿ ದೇವಿ ಶಿವಣ್ಣ, ಸದಸ್ಯರುಗಳು, ಮುಖಂಡರುಗಳಾದ ಚನ್ನಕೇಶವ, ದೇವರಾಜಪ್ಪ, ಶಶಿಕುಮಾರ್, ನರಸಿಂಹಮೂರ್ತಿ, ಹನುಮಂತರಾಯ, ಹನುಮಂತರೆಡ್ಡಿ, ನಾಗರಾಜಪ್ಪ, ರುದ್ರೇಶ್, ರಂಗನಾಥ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಸಮುದಾಯದವರು, ಗ್ರಾಮಸ್ಥರು ಉಪಸ್ಥಿತರಿದ್ದರು.
0 Comments