ಚಳ್ಳಕೆರೆ: ತಾಲೂಕಿನ ಹೊಟ್ಟಪ್ಪನಹಳ್ಳಿ ಗ್ರಾಮದ ಗೋಮಾಳದಲ್ಲಿ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವರ ಪಾದಕೆಗಳು ಕಾಣಿಸಿಕೊಂಡಿರುವ ಸ್ಥಳವನ್ನು ಭಕ್ತರು ಪೂಜನೀಯ ಭಾವದಿಂದ ಕಾಣುತ್ತಿದ್ದು ಪ್ರತಿದಿನ ಭಕ್ತರಿಂದ ಪೂಜಾ ಕಾರ್ಯಕ್ರಮಗಳು ನಡೆಯುತ್ತಿವೆ ಹೀಗಾಗಿ ದೇವಾಲಯ ಕಟ್ಟಿಕೊಳ್ಳಲು ಭೂಮಿ ಮಂಜೂರು ಮಾಡಬೇಕೆಂದು ತಹಶೀಲ್ದಾರ್ ರೆಹಾನ್ ಪಾಷಾ ರವರಿಗೆ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ದೇವಸ್ಥಾನದ ಸಮಿತಿ ಅಧ್ಯಕ್ಷ ಉಜಿನಪ್ಪ ಹೊಟ್ಟಪ್ಪನಹಳ್ಳಿ ಗ್ರಾಮದಲ್ಲಿ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ಅನುಗ್ರಹಿತ ಪಾದುಕೆಗಳು ಭಕ್ತರಿಗೆ ದರ್ಶನವಾಗಿದ್ದು ಪಾದುಕೆಗಳಿಗೆ ಪೂಜಾ ಕಾರ್ಯ ನೆರವೇರಿಸುವಂತೆ ಭಕ್ತರಿಗೆ ಸ್ವಾಮಿಯ ಅಪ್ಪಣೆಯಾಗಿದ್ದು ಎಲ್ಲಾ ಕೆಲಸ ಕಾರ್ಯಗಳು ಭಕ್ತಾದಿಗಳಿಗೆ ನೆರವೇರಃತ್ತಿವೆ ಸುತ್ತಮುತ್ತಲ ಗ್ರಾಮಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ ಈಗಾಗಲೇ ಹೋಮ ಪಾದಭಿಷೇಕ ಪೂಜಾ ಕಾರ್ಯಕ್ರಮಗಳು ಪ್ರಾಣ ಪ್ರತಿಷ್ಠಾಪನೆ ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವರ ಪುಣ್ಯ ನೆಲೆಯಾಗಿ ಪೂಜ್ಯನೀಯ ಭಕ್ತರ ಪುಣ್ಯಕ್ಷೇತ್ರವಾಗಿದೆ ಪ್ರತಿದಿನ ತಾಲೂಕಿನ ವಿವಿಧ ಗ್ರಾಮಗಳು ಸೇರಿದಂತೆ ಬೇರೆ ಜಿಲ್ಲೆಗಳಿಂದಲೂ ಪೂಜಾ ಕಾರ್ಯಕ್ರಮದಲ್ಲಿ ಬರುವ ಭಕ್ತರಿಗೆ ಮತ್ತು ಪೂಜಾ ವಿಧಿ ವಿಧಾನ ಕಾರ್ಯಗಳಿಗೆ ಯಾವುದೇ ಮೂಲಭೂತ ಸೌಕರ್ಯಗಳು ಇಲ್ಲದಿರುವುದರಿಂದ ದೇವರ ಪೂಜಾ ಕಾರ್ಯಕ್ರಮಗಳ ಅನುಕೂಲಕ್ಕಾಗಿ ತಾಲೂಕು ಆಡಳಿತ ವತಿಯಿಂದ ಮೂರು ಎಕರೆ ಭೂಮಿಯನ್ನು ಮಂಜೂರು ಮಾಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿಯ ಕಾರ್ಯಧ್ಯಕ್ಷ ರವಿಕುಮಾರ್ ಉಪಾಧ್ಯಕ್ಷ ತಿಪ್ಪೆಸ್ವಾಮಿ ದೇವೇಂದ್ರ ಪ್ರಸನ್ನ ದ್ಯಾಮಣ್ಣ ಬಸವರಾಜ್ ಕನ್ನಡ ರಕ್ಷಣಾ ಮತ್ತು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಕೊರ್ಲಕುಂಟೆ ತಿಪ್ಪೇಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
0 Comments