ಶ್ವವಿದ್ಯಾಲಯಗಳ ಗೌರವಡಾಕ್ಟರೇಟ್ ಮಾರಾಟಕ್ಕಿವೆ ಸಾಮಾಜಿಕ ಕಾರ್ಯಕರ್ತರಾದ ಕಸವನಹಳ್ಳಿ ರಮೇಶ್

by | 27/07/23 | ಜನಧ್ವನಿ

ಹಿರಿಯೂರು :
ಈ ಹಿಂದೆ ಹಾಗೂ ಈಗಲೂ ಸಹ ಕೆಲವೊಂದು ವರ್ಚುಯಲ್ ಯುನಿವರ್ಸಿಟಿಗಳು ಗೌರವ ಡಾಕ್ಟರ್ ಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ, ವ್ಯಾಪಾರಿಗಳಿಗೆ, ರಾಜಕಾರಣಿಗಳಿಗೆ, ಸ್ವಾಮೀಜಿಗಳಿಗೆ, ಪದವಿಗಳಿಗಾಗಿ ಹಂಬಲಿಸುವವರಿಗೆ ಒಂದು ಡಾಕ್ಟರೇಟ್ ಗೆ ಇಷ್ಟು ಹಣ ಎಂದು ಫಿಕ್ಸ್ ಮಾಡಿ ಹಣ ಪಡೆದು ಕೊಡುತ್ತಿದ್ದು, ಇದನ್ನು ಕೆಲವರು ಕೊಂಡುಕೊಂಡು ಹೆಸರಿನ ಮುಂದೆ ಲಗ್ಗತ್ತಿಸಿಕೊಂಡು ಸಂಭ್ರಮ ಪಡುತ್ತಿದ್ದಾರೆ ಎಂಬುದಾಗಿ ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿ ರಮೇಶ್ ಹೇಳಿದರು.
ಇದು ಇತ್ತೀಚಿಗೆ ಸರ್ಕಾರಿ ವಿಶ್ವವಿದ್ಯಾನಿಲಯಗಳಲ್ಲೂ ಸಹ ಕಾಸಿಗಾಗಿಯೂ, ಪ್ರಭಾವಕ್ಕಾಗಿಯೂ, ಮುಂದೆ ಸರ್ಕಾರದ ಉನ್ನತ ಪದವಿಗಳಿಗಾಗಿಯೂ ಕೆಲವೊಂದು ವ್ಯಾಪಾರಿ ಮನೋಭಾವದ ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ರಾಜಕಾರಣಿಗಳಿಗೆ, ಧಾರ್ಮಿಕ ನೇತಾರರಿಗೆ, ಸೇವೆಯ ಗಂಧ-ಗಾಳಿ ಗೊತ್ತಿಲ್ಲದ ಜನರನ್ನು ಹಿಂಡಿ ಹಿಪ್ಪೆ ಮಾಡುವ ಜನರಿಗೆ ಗೌರವ ಡಾಕ್ಟರೇಟ್ ಗಳನ್ನು, ರೆಡ್ ಕಾರ್ಪೆಟ್ ಹಾಸಿ ಕೊಡ ಮಾಡುತ್ತಿರುವುದು ನಮ್ಮ ಶಿಕ್ಷಣ ಸಂಸ್ಥೆಗಳ ಗೌರವ ಹಾದಿ – ಬೀದಿಯಲ್ಲಿ ಹೀಯಾಳಿಸುವ ಮಟ್ಟಕ್ಕೆ ಬಂದು ನಿಂತಿರುವುದು ಇಂದಿನ ದುರಂತವಾಗಿದೆ.
ಸರ್ಕಾರದ ಪ್ರತಿಷ್ಠಿತ ಸ್ವಯತ್ತ ವಿಶ್ವವಿದ್ಯಾನಿಲಯಗಳ ಸ್ಥಾಪನೆ ಹಿಂದೆ ಗೌರವಾನ್ವಿತ ವಿಶ್ವಮಾನ್ಯ ಸಾಹಿತಿಗಳ ಕೊಡುಗೆ ಅಪಾರವಾಗಿದೆ. ಇಂತಹ ಕರ್ನಾಟಕ ಕಂಡ ಮೇರು ಸಾಹಿತಿಗಳ ಹೆಸರಿಗೆ- ಕೆಸರು ಬಳಿಯುವ ಪ್ರತೀಕವಾಗಿ ಡಾಕ್ಟರೇಟ್ಗಳನ್ನು ಅನರ್ಹರಿಗೆ ಕೊಡುತ್ತಿರುವುದು ಎಷ್ಟು ಸರಿ.
ಈಗಾಗಲೇ ರಾಜ್ಯದ ವಿಶ್ವವಿದ್ಯಾನಿಲಯಗಳ ಮುಖ್ಯಸ್ಥರುಗಳು ಸೂಟ್ ಕೇಸ್ ಗಳನ್ನು ಹಿಡಿದುಕೊಂಡು ಸಚಿವರ ಮನೆ ಭಾಗಿಲು ಎಡ ತಾಕುತ್ತಿರುವುದು ಅಲ್ಲದೆ ಪದವಿಗೆ ಇಷ್ಟು ಮತ್ತು ಅನುದಾನಕ್ಕೆ ಇಷ್ಟು ಎಂದು ಲಂಚ – ರುಶುವತ್ತು ಕೊಡುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ.
ಇತ್ತೀಚಿನ ದಿನಗಳಲ್ಲಿ ಗೌರವ ಡಾಕ್ಟರೇಟ್ ಗಳನ್ನು ಸಹ ಕೊಟ್ಟು ಅದರಿಂದಲೂ ಹಣ ಮಾಡುವ ಹುನ್ನಾರ ಅಥವಾ ಲಾಭ ಮಾಡುವ ಕೆಲಸಗಳಿಗೆ ಈ ಪದವಿಗಳೇ ಬೇಕೆ.? ಬೇಕಾದರೆ ವೃತ್ತಿಗೆ ರಾಜೀನಾಮೆ ಕೊಟ್ಟು ಹೆಚ್ಚು ಹಣ ಮಾಡುವ ದಂದೆ ಮಾಡಲಿ ಅದು ಬಿಟ್ಟು ಉನ್ನತ ಸ್ಥಾನದಲ್ಲಿ ಕುಳಿತು ಈ ರೀತಿ ಮಾಡುವುದರಿಂದ ಸಮಾಜದಲ್ಲಿ ವಿಶ್ವವಿದ್ಯಾನಿಲಯಗಳ ಗೌರವ ಘನತೆ ಕಡಿಮೆಯಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿ ರಮೇಶ್ ಹೇಳಿದರು.
ಈ ಸಂದರ್ಭದಲ್ಲಿ ಹುಲಿರಂಗನಾಥ್, ಚಂದ್ರಗಿರಿ, ಶಶಿಕಲಾ, ಕುಬೇರಪ್ಪ, ಪೆಪ್ಸಿ ಹನುಮಂತರಾಯ, ಶಿವಮೂರ್ತಿ, ಪ್ರಕಾಶ್, ಅನೇಕರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page