ಚಳ್ಳಕೆರೆ ಜನಧ್ವನಿ ವಾರ್ತೆ ಫೆ.19 ಅಭಿವೃದ್ಧಿ ಹರಿಕಾರನಿಗೆ ರಾಜ್ಯ ಅಖಂಡ ರೈತ ಸಂಘದಿಂದ ಸೋಮವಾರ ಸಾಧಕನಿಗೆ ಸನ್ಮಾನ
ಸತತ ಬರಗಾಲಕ್ಕೆ ತುತ್ತಾಗುವ ಬಯಲು ಸೀಮೆಯಲ್ಲಿ ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿಯಲ್ಲಿ ಶಾಶ್ವತವಾಗಿ ಬರಪೀಡಿತ ಪ್ರದೇಶ ಎಂಬ ಅಣೆ ಪಟ್ಟಿಯನ್ನು ಹೋಗಲಾಡಿಸಿದ ಶಾಸಕ ಟಿ. ರಘುಮೂರ್ತಿ ಅಖಂಡ ಕರ್ನಾಟಕ ರಾಜ್ಯ ಸಂಘದವತಿಯಿAದ ಸನ್ಮಾನಿಸಿ ಗೌರವಿಸಲಾಗುವುದು ಎಂದು ಅಖಂಡ ಕರ್ನಾಟಕ ರಾಜ್ಯ ಸಂಸ್ಥಾಪನಾ ಅಧ್ಯಕ್ಷ ಸೋಮಗುದ್ದು ರಂಗಸ್ವಾಮಿ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ದಾರ್ಶನಿಕರು 12ನೇ ಶತಮಾನದಲ್ಲಿ ಕೆರೆ ಕಟ್ಟೆ, ಡ್ಯಾರಂಗಳನಿರ್ಮಾಣ ಮಾಡುವ ಮೂಲಕ ಅಂತರ್ಜಲ ಹೆಚ್ಚಿಸಿ ಜನ ಜನಾನುವಾರು, ಕೃಷಿ ಹಾಗೂ ಕುಡಿಯುವ ನೀರಿಗೆ ಸಹಕಾರಿಯಂತವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತಿದ್ದರೋ ಅದೇ ರೀತಿ ಕ್ಷೇತ್ರದ ಶಾಸಕರಾಗಿ 10 ವರ್ಷಗಳ ಅವಧಿಯಲ್ಲಿ ವೇದಾವತಿ ನದಿಗೆ ಬ್ಯಾರೇಂಜ್,ಬ್ರಿಜ್ ಕಂ ಬ್ಯಾರೇಜ್, ನಿರ್ಮಿಸಿ ಮಳೆಗಾಲದಲ್ಲಿಮಾತ್ರ ವೇದಾವತಿ ನದಿಯಲ್ಲಿನೀರು ಕಾಣುವಂತಹ ಪರಿಸ್ಥಿತಿಯಲ್ಲಿ ವಾಣಿವಿಲಾಸ ಸಾಗರದಿಂದ ನೀರು ಹರಿಸುವ ಮೂಲಕ ಸದಾ ನೀರನ್ನು ನೋಡುವಂತಾಗಾಗಿ ಅಂತರ್ಜಲ ಹೆಚ್ಚಳದಿಂದ ರೈತರ ಕೊಳವೆಬಾವಿಗಳಲ್ಲಿ ನೀರು ಹೆಚ್ಚಾಗಿ ಈಗ ರೈತರು ಅಡಿಕೆ,ತೆಂಗು ಸೇರಿದಂತೆ ವಿವಿಧ ವಾಣಿಜ್ಯ ಬೆಳೆಗಳನ್ನು ಬೆಳೆಯುವಂತೆ ಮಾಡಿ ಬರಪೀಡಿತ ಪ್ರದೇಶ ಎಂಬ ಅಣೆಪಟ್ಟಿಯಿಂದ ದೂರ ಮಾಡಿದ್ದಾರೆ.
ಸರಕಾರಿ ಇಂಜಿನಿಯರಿAಗ್ ಕಾಲೇಜ್, ಜಿಟಿಟಿಸಿ ಕೇಂದ್ರ, ಸಾರಿಗೆ ಬಸ್ ನಿಲ್ದಾಣ, ಸಾರಿಗೆ ಡಿಪೋ, ನಗರ ಹಾಗೂ ಗ್ರಾಮೀಣ ಭಾಗದಲ್ಲಿ ರಸ್ತೆಗಳ ಅಭಿವೃದ್ಧಿ , ಕುಡಿಯುವ ನೀರು, ವಸತಿ, ಸ್ಮಶಾನ ಅಭಿವೃದ್ಧಿ, ಸೇರಿಂತೆ ಸಾಕಷ್ಟು ಅಭಿವೃದ್ದಿ ಮಾಡಲಾಗಿದೆ.
ಕೋವಿಡ್ ಸಂಕಷ್ಟದಲ್ಲಿಲ ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಮನೆಯಲ್ಲಿ ಕೂರದೆ ಕ್ಷೇತ್ರದಲ್ಲಿ ಓಡಾಡಿಕೊಂಡು ಜನರ ಕಷ್ಟಸುಖಗಳಿಗೆ ಸ್ಪಂದಿಸಿ ಆಹಾರ ಕಿಟ್, ವಿತರಣೆ ಸಂಕಷ್ಟಕ್ಕೆ ಒಳಗಾದವರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ. ಅಗತ್ಯ ಸೌಲಭ್ಯ ಕಲ್ಪಿಸುವ ಮೂಲಕ ನಿರ್ಗತಿಕರಿಗೆ ನೆರವಾಗಿದ್ದಾರೆ. ಹೀಗೆ ಜನರ ಕಷ್ಟ ಸುಖಗಳಿಗೆ ಮಿಡಿಯುವವರೇ ನಿಜವಾದ ಜನ ನಾಯಕ.
ಇಂತಹ ನಾಯಕ ಶಾಸಕ ಟಿ.ರಘುಮೂರ್ತಿಯವರಿಗೆ ಪಕ್ಷ ಬೇದ ಮರೆತು ಹೋಬಳಿ ಮಟ್ಟದ ಅಘಂಡ ರೈತ ಸಂಘದವತಿಯಿAದ ಸೋಮವಾರ ಪರಶುರಾಂಪುರ ಹೋಬಳಿ ಕೇಂದ್ರದಲ್ಲಿ ಸುಮಾರು 2 ಸಾವಿರ ರೈತ ಕಾರ್ಯಕರ್ತರು ಸೇರಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದಸರು.
ತಾಲೂಕು ಅಧ್ಯಕ್ಷ ಚಿಕ್ಕಣ್ಣ, ಕೃಷ್ಣಮೂರ್ತಿ, ಭಾಷಾ, ಸೇರಿತದಂತೆ ಇತರರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments