ಸಂಕಷ್ಟಕ್ಕೆ ಒಳಗಾದವರಿಗೆ ಆತ್ಮಸ್ಥೈರ್ಯ ತುಂಬಿ ಅಗತ್ಯ ಸೌಲಭ್ಯ ಕಲ್ಪಿಸುವ ಮೂಲಕ ನಿರ್ಗತಿಕರಿಗೆ ನೆರವಾಗಿದ್ದಾರೆ. ಜನರ ಕಷ್ಟ ಸುಖಗಳಿಗೆ ಮಿಡಿಯುವವರೇ ನಿಜವಾದ ಜನ ನಾಯಕ ಸೋಮಗುದ್ದು ರಂಗಸ್ವಾಮಿ.

by | 19/02/23 | Uncategorized, ಜನಧ್ವನಿ

ಚಳ್ಳಕೆರೆ ಜನಧ್ವನಿ ವಾರ್ತೆ ಫೆ.19 ಅಭಿವೃದ್ಧಿ ಹರಿಕಾರನಿಗೆ ರಾಜ್ಯ ಅಖಂಡ ರೈತ ಸಂಘದಿಂದ ಸೋಮವಾರ ಸಾಧಕನಿಗೆ ಸನ್ಮಾನ
ಸತತ ಬರಗಾಲಕ್ಕೆ ತುತ್ತಾಗುವ ಬಯಲು ಸೀಮೆಯಲ್ಲಿ ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿಯಲ್ಲಿ ಶಾಶ್ವತವಾಗಿ ಬರಪೀಡಿತ ಪ್ರದೇಶ ಎಂಬ ಅಣೆ ಪಟ್ಟಿಯನ್ನು ಹೋಗಲಾಡಿಸಿದ ಶಾಸಕ ಟಿ. ರಘುಮೂರ್ತಿ ಅಖಂಡ ಕರ್ನಾಟಕ ರಾಜ್ಯ ಸಂಘದವತಿಯಿAದ ಸನ್ಮಾನಿಸಿ ಗೌರವಿಸಲಾಗುವುದು ಎಂದು ಅಖಂಡ ಕರ್ನಾಟಕ ರಾಜ್ಯ ಸಂಸ್ಥಾಪನಾ ಅಧ್ಯಕ್ಷ ಸೋಮಗುದ್ದು ರಂಗಸ್ವಾಮಿ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ದಾರ್ಶನಿಕರು 12ನೇ ಶತಮಾನದಲ್ಲಿ ಕೆರೆ ಕಟ್ಟೆ, ಡ್ಯಾರಂಗಳನಿರ್ಮಾಣ ಮಾಡುವ ಮೂಲಕ ಅಂತರ್ಜಲ ಹೆಚ್ಚಿಸಿ ಜನ ಜನಾನುವಾರು, ಕೃಷಿ ಹಾಗೂ ಕುಡಿಯುವ ನೀರಿಗೆ ಸಹಕಾರಿಯಂತವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತಿದ್ದರೋ ಅದೇ ರೀತಿ ಕ್ಷೇತ್ರದ ಶಾಸಕರಾಗಿ 10 ವರ್ಷಗಳ ಅವಧಿಯಲ್ಲಿ ವೇದಾವತಿ ನದಿಗೆ ಬ್ಯಾರೇಂಜ್,ಬ್ರಿಜ್ ಕಂ ಬ್ಯಾರೇಜ್, ನಿರ್ಮಿಸಿ ಮಳೆಗಾಲದಲ್ಲಿಮಾತ್ರ ವೇದಾವತಿ ನದಿಯಲ್ಲಿನೀರು ಕಾಣುವಂತಹ ಪರಿಸ್ಥಿತಿಯಲ್ಲಿ ವಾಣಿವಿಲಾಸ ಸಾಗರದಿಂದ ನೀರು ಹರಿಸುವ ಮೂಲಕ ಸದಾ ನೀರನ್ನು ನೋಡುವಂತಾಗಾಗಿ ಅಂತರ್ಜಲ ಹೆಚ್ಚಳದಿಂದ ರೈತರ ಕೊಳವೆಬಾವಿಗಳಲ್ಲಿ ನೀರು ಹೆಚ್ಚಾಗಿ ಈಗ ರೈತರು ಅಡಿಕೆ,ತೆಂಗು ಸೇರಿದಂತೆ ವಿವಿಧ ವಾಣಿಜ್ಯ ಬೆಳೆಗಳನ್ನು ಬೆಳೆಯುವಂತೆ ಮಾಡಿ ಬರಪೀಡಿತ ಪ್ರದೇಶ ಎಂಬ ಅಣೆಪಟ್ಟಿಯಿಂದ ದೂರ ಮಾಡಿದ್ದಾರೆ.
ಸರಕಾರಿ ಇಂಜಿನಿಯರಿAಗ್ ಕಾಲೇಜ್, ಜಿಟಿಟಿಸಿ ಕೇಂದ್ರ, ಸಾರಿಗೆ ಬಸ್ ನಿಲ್ದಾಣ, ಸಾರಿಗೆ ಡಿಪೋ, ನಗರ ಹಾಗೂ ಗ್ರಾಮೀಣ ಭಾಗದಲ್ಲಿ ರಸ್ತೆಗಳ ಅಭಿವೃದ್ಧಿ , ಕುಡಿಯುವ ನೀರು, ವಸತಿ, ಸ್ಮಶಾನ ಅಭಿವೃದ್ಧಿ, ಸೇರಿಂತೆ ಸಾಕಷ್ಟು ಅಭಿವೃದ್ದಿ ಮಾಡಲಾಗಿದೆ.
ಕೋವಿಡ್ ಸಂಕಷ್ಟದಲ್ಲಿಲ ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಮನೆಯಲ್ಲಿ ಕೂರದೆ ಕ್ಷೇತ್ರದಲ್ಲಿ ಓಡಾಡಿಕೊಂಡು ಜನರ ಕಷ್ಟಸುಖಗಳಿಗೆ ಸ್ಪಂದಿಸಿ ಆಹಾರ ಕಿಟ್, ವಿತರಣೆ ಸಂಕಷ್ಟಕ್ಕೆ ಒಳಗಾದವರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ. ಅಗತ್ಯ ಸೌಲಭ್ಯ ಕಲ್ಪಿಸುವ ಮೂಲಕ ನಿರ್ಗತಿಕರಿಗೆ ನೆರವಾಗಿದ್ದಾರೆ. ಹೀಗೆ ಜನರ ಕಷ್ಟ ಸುಖಗಳಿಗೆ ಮಿಡಿಯುವವರೇ ನಿಜವಾದ ಜನ ನಾಯಕ.
ಇಂತಹ ನಾಯಕ ಶಾಸಕ ಟಿ.ರಘುಮೂರ್ತಿಯವರಿಗೆ ಪಕ್ಷ ಬೇದ ಮರೆತು ಹೋಬಳಿ ಮಟ್ಟದ ಅಘಂಡ ರೈತ ಸಂಘದವತಿಯಿAದ ಸೋಮವಾರ ಪರಶುರಾಂಪುರ ಹೋಬಳಿ ಕೇಂದ್ರದಲ್ಲಿ ಸುಮಾರು 2 ಸಾವಿರ ರೈತ ಕಾರ್ಯಕರ್ತರು ಸೇರಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದಸರು.
ತಾಲೂಕು ಅಧ್ಯಕ್ಷ ಚಿಕ್ಕಣ್ಣ, ಕೃಷ್ಣಮೂರ್ತಿ, ಭಾಷಾ, ಸೇರಿತದಂತೆ ಇತರರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page