ಸಂಗೀತವು ಮನಸ್ಸಿಗೆ ಅತ್ಯಂತ ಮುದವನ್ನು ನೀಡಿದರೆ, ನೃತ್ಯವುಶಾರೀರಿಕ ಮಾನಸಿಕ ದೃಢತೆಯನ್ನ ನೀಡುತ್ತದೆ ಹಿರಿಯ ಪತ್ರಕರ್ತರಾದ :ಆಲೂರು ಹನುಮಂತರಾಯಪ್ಪ

by | 02/12/23 | ಸುದ್ದಿ


ಹಿರಿಯೂರು :
ಸಂಗೀತ ಮತ್ತು ನೃತ್ಯ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ಸಂಗೀತ ಮನಸ್ಸಿಗೆ ಅತ್ಯಂತ ಮುದವನ್ನು ನೀಡಿದರೆ, ನೃತ್ಯ ಶಾರೀರಿಕ ಮಾನಸಿಕ ದೃಢತೆಯನ್ನು ನೀಡುವುದು, ಆದ್ದರಿಂದ ಇಂದಿನ ಮಕ್ಕಳಿಗೆ ಪೋಷಕರು ಪಠ್ಯದ ಜೊತೆಗೆ ಸಂಗೀತ ಹಾಗೂ ನೃತ್ಯಗಳ ಕಲಿಕೆಗೆ ಸಹ ಪ್ರೋತ್ಸಾಹಿಸಬೇಕು ಎಂಬುದಾಗಿ ಕರ್ನಾಟಕ ಮಾಧ್ಯಂಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತರಾದ ಆಲೂರುಹನುಮಂತರಾಯಪ್ಪ ಹೇಳಿದರು.
ನಗರದ ರೋಟರಿ ಸಭಾಭವನದಲ್ಲಿ ಶ್ರೀಜ್ಯೋತಿ ಸ್ವರೂಪಿಣಿ ಮಹಿಳಾ ಲಲಿತ ಕಲಾಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಚಿತ್ರದುರ್ಗ ಇವರುಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂಗೀತ ನೃತ್ಯೋತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಂಗೀತ, ನೃತ್ಯಕಲೆ ಮುಂತಾದ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಉತ್ತಮ ಅಂಕಗಳಿಸಲು ಸಾಧ್ಯವಿಲ್ಲ ಎಂಬುದು ಅನೇಕ ಪೋಷಕರ ಭಾವನೆಯಾಗಿದ್ದು, ಆದರೆ ಸಂಗೀತ, ನೃತ್ಯಕಲೆಗಳಲ್ಲಿ ಸಾಧನೆ ಮಾಡಿರುವ ಮಕ್ಕಳು ಶಾಲೆಯಲ್ಲಿಯೂ ಸಹ ಓದುವುದರಲ್ಲಿ ಮುಂಚೂಣಿಯಲ್ಲಿದ್ದು, ಇದನ್ನು ಪೋಷಕರು ಅರ್ಥಮಾಡಿಕೊಂಡು ತಮ್ಮ ಮಕ್ಕಳಿಗೆ ನಮ್ಮ ಸಂಸ್ಕೃತಿಯನ್ನು ಬಿಂಬಿಸುವಂತಹ ಸಂಗೀತ, ನೃತ್ಯಕಲೆಗಳ ಕಲಿಕೆಗೆ ಅವಕಾಶ ನೀಡಬೇಕು ಎಂಬುದಾಗಿ ಅವರು ಹೇಳಿದರು
ಈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಗೀತ ವಿದ್ವಾನ್ ತಿಪ್ಪೇಸ್ವಾಮಿ ಮಾತನಾಡಿ, ಮನುಷ್ಯ ಕ್ರೀಯಾಶೀಲನಾಗಿರಲು ಸಂಗೀತ ಸಾಹಿತ್ಯ ಕಲೆ ಸೇರಿದಂತೆ 64 ವಿದ್ಯೆಗಳ ಅವಶ್ಯಕತೆಯಿದ್ದು, ಅದರಲ್ಲಿ ಸಂಗೀತಕ್ಕೆ ಹೆಚ್ಚಿನ ಪ್ರಾಮುಖ್ಯತೆಯಿದೆ, ಈ ಸಂಗೀತ ಮನುಷ್ಯನಲ್ಲಿ ಚಿಂತನಶೀಲತೆ ಉಂಟುಮಾಡುವುದಲ್ಲದೆ, ಏಕಾಗ್ರತೆಯನ್ನು ಹೆಚ್ಚಿಸುತ್ತದೆ ಎಂದರಲ್ಲದೆ,
ಸಂಗೀತ ಮನುಷ್ಯನಲ್ಲಿ ಒಂದು ಒಳ್ಳೆಯ ಸಂಸ್ಕೃತಿ ಸಂಪ್ರದಾಯವನ್ನು ಬೆಳೆಸುವುದರ ಜೊತೆಗೆ ಮಕ್ಕಳಿಗೆ ಒಳ್ಳೆಯ ಸಂಸ್ಕಾರವನ್ನು ಕಲಿಸುವ ಮೂಲಕ ಅವರಲ್ಲಿ ಉತ್ತಮ ಅಭಿರುಚಿ ಹಾಗೂ ಆಸಕ್ತಿಗಳನ್ನು ಬೆಳೆಸುತ್ತದೆ, ಸಂಗೀತದ ಕಲಿಕೆಯಿಂದ ಮಕ್ಕಳಲ್ಲಿ ಸ್ವಚ್ಛ ಉಚ್ಚಾರಣೆಯಿಂದಾಗಿ ಉತ್ತಮ ಸ್ವಾಸ್ತ್ಯ ಉಂಟಾಗುತ್ತದೆ, ಆದ್ದರಿಂದ ಉತ್ತಮ ಜೀವನ ಶೈಲಿಗೆ ಸಂಗೀತ ಕೂಡ ಅತ್ಯವಶ್ಯಕ ಎಂಬುದಾಗಿ ಹೇಳಿದರು
ಈ ಕಾರ್ಯಕ್ರಮದಲ್ಲಿ ಜಿಲ್ಲಾ ರೈತಸಂಘದ ಕಾರ್ಯಾಧ್ಯಕ್ಷರಾದ ಕೆ.ಸಿ.ಹೊರಕೇರಪ್ಪ, ನಗರಸಭೆ ಸದಸ್ಯರುಗಳಾದ ವಿಠ್ಠಲ್ ಪಾಂಡುರಂಗ, ಶ್ರೀಮತಿ ರತ್ನಮ್ಮತಿಪ್ಪೀರಣ್ಣ, ಶ್ರೀಮತಿ ವಿಶಾಲಾಕ್ಷಮ್ಮ, ಕಾಂಗ್ರೆಸ್ ಮುಖಂಡರು ಹಾಗೂ ಪತ್ರಕರ್ತರಾದ ಜಿ.ಎಲ್.ಮೂರ್ತಿ, ಡಾಕ್ಟರೇಟ್ ಪದವಿ ಪುರಸ್ಕೃತರಾದ ಸಂತೋಷ ಕುಮಾರ್, ಹಿರಿಯ ಪತ್ರಕರ್ತರಾದ ರವೀಂದ್ರನಾಥ್, ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನಯ್ಯ, ಚಿತ್ರದುರ್ಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯವಸ್ಥಾಪಕರಾದ ಶ್ರೀಮತಿ ಹೆಚ್.ಎನ್. ಶಾಂತಮ್ಮ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.ಆರಂಭದಲ್ಲಿ ಗಾಯಕಿ ಗೌತಮಿ ಮಧುಸೂದನ್ ಸ್ವಾಗತಿಸಿದರು. ಕೊನೆಯಲ್ಲಿ ಸಂಗೀತ ನಿರ್ದೇಶಕ ಹಾಗೂ ಗಾಯಕ ಮಧುಸೂದನ್ ವಂದಿಸಿದರು.ಶ್ರೀಯುತ ಕರುಣ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page