ಹಿರಿಯೂರು :
ಸಂಗೀತ ಮತ್ತು ನೃತ್ಯ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ಸಂಗೀತ ಮನಸ್ಸಿಗೆ ಅತ್ಯಂತ ಮುದವನ್ನು ನೀಡಿದರೆ, ನೃತ್ಯ ಶಾರೀರಿಕ ಮಾನಸಿಕ ದೃಢತೆಯನ್ನು ನೀಡುವುದು, ಆದ್ದರಿಂದ ಇಂದಿನ ಮಕ್ಕಳಿಗೆ ಪೋಷಕರು ಪಠ್ಯದ ಜೊತೆಗೆ ಸಂಗೀತ ಹಾಗೂ ನೃತ್ಯಗಳ ಕಲಿಕೆಗೆ ಸಹ ಪ್ರೋತ್ಸಾಹಿಸಬೇಕು ಎಂಬುದಾಗಿ ಕರ್ನಾಟಕ ಮಾಧ್ಯಂಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತರಾದ ಆಲೂರುಹನುಮಂತರಾಯಪ್ಪ ಹೇಳಿದರು.
ನಗರದ ರೋಟರಿ ಸಭಾಭವನದಲ್ಲಿ ಶ್ರೀಜ್ಯೋತಿ ಸ್ವರೂಪಿಣಿ ಮಹಿಳಾ ಲಲಿತ ಕಲಾಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಚಿತ್ರದುರ್ಗ ಇವರುಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂಗೀತ ನೃತ್ಯೋತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಂಗೀತ, ನೃತ್ಯಕಲೆ ಮುಂತಾದ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಉತ್ತಮ ಅಂಕಗಳಿಸಲು ಸಾಧ್ಯವಿಲ್ಲ ಎಂಬುದು ಅನೇಕ ಪೋಷಕರ ಭಾವನೆಯಾಗಿದ್ದು, ಆದರೆ ಸಂಗೀತ, ನೃತ್ಯಕಲೆಗಳಲ್ಲಿ ಸಾಧನೆ ಮಾಡಿರುವ ಮಕ್ಕಳು ಶಾಲೆಯಲ್ಲಿಯೂ ಸಹ ಓದುವುದರಲ್ಲಿ ಮುಂಚೂಣಿಯಲ್ಲಿದ್ದು, ಇದನ್ನು ಪೋಷಕರು ಅರ್ಥಮಾಡಿಕೊಂಡು ತಮ್ಮ ಮಕ್ಕಳಿಗೆ ನಮ್ಮ ಸಂಸ್ಕೃತಿಯನ್ನು ಬಿಂಬಿಸುವಂತಹ ಸಂಗೀತ, ನೃತ್ಯಕಲೆಗಳ ಕಲಿಕೆಗೆ ಅವಕಾಶ ನೀಡಬೇಕು ಎಂಬುದಾಗಿ ಅವರು ಹೇಳಿದರು
ಈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಗೀತ ವಿದ್ವಾನ್ ತಿಪ್ಪೇಸ್ವಾಮಿ ಮಾತನಾಡಿ, ಮನುಷ್ಯ ಕ್ರೀಯಾಶೀಲನಾಗಿರಲು ಸಂಗೀತ ಸಾಹಿತ್ಯ ಕಲೆ ಸೇರಿದಂತೆ 64 ವಿದ್ಯೆಗಳ ಅವಶ್ಯಕತೆಯಿದ್ದು, ಅದರಲ್ಲಿ ಸಂಗೀತಕ್ಕೆ ಹೆಚ್ಚಿನ ಪ್ರಾಮುಖ್ಯತೆಯಿದೆ, ಈ ಸಂಗೀತ ಮನುಷ್ಯನಲ್ಲಿ ಚಿಂತನಶೀಲತೆ ಉಂಟುಮಾಡುವುದಲ್ಲದೆ, ಏಕಾಗ್ರತೆಯನ್ನು ಹೆಚ್ಚಿಸುತ್ತದೆ ಎಂದರಲ್ಲದೆ,
ಸಂಗೀತ ಮನುಷ್ಯನಲ್ಲಿ ಒಂದು ಒಳ್ಳೆಯ ಸಂಸ್ಕೃತಿ ಸಂಪ್ರದಾಯವನ್ನು ಬೆಳೆಸುವುದರ ಜೊತೆಗೆ ಮಕ್ಕಳಿಗೆ ಒಳ್ಳೆಯ ಸಂಸ್ಕಾರವನ್ನು ಕಲಿಸುವ ಮೂಲಕ ಅವರಲ್ಲಿ ಉತ್ತಮ ಅಭಿರುಚಿ ಹಾಗೂ ಆಸಕ್ತಿಗಳನ್ನು ಬೆಳೆಸುತ್ತದೆ, ಸಂಗೀತದ ಕಲಿಕೆಯಿಂದ ಮಕ್ಕಳಲ್ಲಿ ಸ್ವಚ್ಛ ಉಚ್ಚಾರಣೆಯಿಂದಾಗಿ ಉತ್ತಮ ಸ್ವಾಸ್ತ್ಯ ಉಂಟಾಗುತ್ತದೆ, ಆದ್ದರಿಂದ ಉತ್ತಮ ಜೀವನ ಶೈಲಿಗೆ ಸಂಗೀತ ಕೂಡ ಅತ್ಯವಶ್ಯಕ ಎಂಬುದಾಗಿ ಹೇಳಿದರು
ಈ ಕಾರ್ಯಕ್ರಮದಲ್ಲಿ ಜಿಲ್ಲಾ ರೈತಸಂಘದ ಕಾರ್ಯಾಧ್ಯಕ್ಷರಾದ ಕೆ.ಸಿ.ಹೊರಕೇರಪ್ಪ, ನಗರಸಭೆ ಸದಸ್ಯರುಗಳಾದ ವಿಠ್ಠಲ್ ಪಾಂಡುರಂಗ, ಶ್ರೀಮತಿ ರತ್ನಮ್ಮತಿಪ್ಪೀರಣ್ಣ, ಶ್ರೀಮತಿ ವಿಶಾಲಾಕ್ಷಮ್ಮ, ಕಾಂಗ್ರೆಸ್ ಮುಖಂಡರು ಹಾಗೂ ಪತ್ರಕರ್ತರಾದ ಜಿ.ಎಲ್.ಮೂರ್ತಿ, ಡಾಕ್ಟರೇಟ್ ಪದವಿ ಪುರಸ್ಕೃತರಾದ ಸಂತೋಷ ಕುಮಾರ್, ಹಿರಿಯ ಪತ್ರಕರ್ತರಾದ ರವೀಂದ್ರನಾಥ್, ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನಯ್ಯ, ಚಿತ್ರದುರ್ಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯವಸ್ಥಾಪಕರಾದ ಶ್ರೀಮತಿ ಹೆಚ್.ಎನ್. ಶಾಂತಮ್ಮ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.ಆರಂಭದಲ್ಲಿ ಗಾಯಕಿ ಗೌತಮಿ ಮಧುಸೂದನ್ ಸ್ವಾಗತಿಸಿದರು. ಕೊನೆಯಲ್ಲಿ ಸಂಗೀತ ನಿರ್ದೇಶಕ ಹಾಗೂ ಗಾಯಕ ಮಧುಸೂದನ್ ವಂದಿಸಿದರು.ಶ್ರೀಯುತ ಕರುಣ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments