ಚಳ್ಳಕೆರೆ: ನಗರದ ಸಂತೆ ಮೈದಾನದಲ್ಲಿ ನಗರಸಭೆ ವತಿಯಿಂದ ಹೈಟೆಕ್ ಸಾರ್ವಜನಿಕ ಶೌಚಾಲಯ ನಿರ್ಮಿಸಲು ಉದ್ದೇಶಿಸಿದ್ದು ಇದರಿಂದ ಬೀದಿಬದಿ ವ್ಯಾಪಾರಿಗಳಿಗೆ ತೊಂದರೆ ಉಂಟಾಗುವುದರಿಂದ ನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳು ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಎಐಟಿಯುಸಿ ಮುಖಂಡ ಹಾಗೂ ಬೀದಿಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಸಿವೈ ಶಿವರುದ್ರಪ್ಪ ಆಗ್ರಹಿಸಿದರು.
ಸಂತೆ ಮೈದಾನದಲ್ಲಿ ತರಕಾರಿ ವ್ಯಾಪಾರಸ್ಥರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ದಿನನಿತ್ಯ ಗ್ರಾಮೀಣ ಹಾಗೂ ನಗರ ಪ್ರದೇಶದ ನೂರಾರು ಸಂಖ್ಯೆಯ ವ್ಯಾಪಾರಸ್ಥರು ಈ ಪ್ರದೇಶದಲ್ಲಿ ದಿನನಿತ್ಯ ವ್ಯಾಪಾರ ವಹಿವಾಟುಗಳಲ್ಲಿ ತೊಡಗಿಕೊಂಡು ತಮ್ಮ ಜೀವನವನ್ನು ನಡೆಸುತ್ತಿದ್ದಾರೆ ಈಗ ನಗರಸಭೆ ವತಿಯಿಂದ ಹೈಟೆಕ್ ಶೌಚಾಲಯ ನಿರ್ಮಿಸಲು ಉದ್ದೇಶಿಸಿರುವುದರಿಂದ ಇಲ್ಲಿನ ವ್ಯಾಪಾರಸ್ಥರಿಗೆ ಜಾಗ ಖಾಲಿ ಮಾಡುವಂತೆ ನಗರಸಭೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಈಗಾಗಲೇ ಇಲ್ಲಿ ಪಾರ್ಕ್ ಸ್ಥಳವೆಂದು ಗುರುತಿಸಿರುವ ಸ್ಥಳವನ್ನು ಶೌಚಾಲಯ ನಿರ್ಮಾಣಕ್ಕಾಗಿ ಗುರುತಿಸಿರುವುದು ಖಂಡನೀಯ ವ್ಯಾಪಾರಸ್ಥರು ತಮ್ಮ ಜೀವನವನ್ನು ರೂಪಿಸಿಕೊಳ್ಳಲು ಕಳೆದ ಹತ್ತಾರು ವರ್ಷಗಳಿಂದ ದಿನನಿತ್ಯ ವ್ಯಾಪಾರ ನಡೆಸುವ ವರ್ತಕರಿಗೆ ಇದರಿಂದ ತಮ್ಮ ಜೀವನ ನಡೆಸಲು ಕಷ್ಟಕರವಾಗುತ್ತದೆ ಈಗಾಗಲೇ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂಜೆ ರಾಘವೇಂದ್ರ ತರಕಾರಿ ಮಾರುಕಟ್ಟೆಯ ಸ್ಥಳದಲ್ಲಿ ಶೌಚಾಲಯ ನಿರ್ಮಾಣ ಮಾಡದಂತೆ ನಗರಸಭೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ ನಗರಸಭೆ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಶೌಚಾಲಯ ನಿರ್ಮಾಣದ ಕಾಮಗಾರಿಯನ್ನು ಕೈಗೊಂಡಲ್ಲಿ ಬೀದಿ ಬದಿ ವ್ಯಾಪಾರಿಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.
![](https://janadhwani.in/wp-content/uploads/2023/12/IMG-20231216-WA0104.jpg)
ಈ ಸಂದರ್ಭದಲ್ಲಿ ಬೀದಿಬದಿ ವ್ಯಾಪಾರ ಸಂಘದ
ತಿಪ್ಪೇಸ್ವಾಮಿ, ಬಿ.ಪಟೇಲ್ ಒಬಣ್ಣ ,ಮಂಜಣ್ಣ, ಶಿವಣ್ಣ ನಾಗರಾಜ್,ನಾರಾಯಣಪ್ಪ ನಾಗರಾಜ್ ವೆಂಕಟೇಶ ರೆಹಮತ್ ಉಲ್ಲ, ಅಜ್ಜು ಹೊನ್ನೂರು, ಯಶೋದಮ್ಮ,ರುದ್ರಮ್ಮ,ನಿಲಮ್ಮ, ಸುರೇಶ ವಿರೇಶ,ತಿಪ್ಪಮ್ಮ ಸೈಯದ್ ಮೊಹಿನುದ್ದಿನ್ ಸಾಭ್ ಗೋವಿಂದರಾಜ್ ಕಣ್ಣಮಕ್ಕ ಸೇರಿದಂತೆ ಇತರರು ಉಪಸ್ಥಿತರಿದ್ದರು.
0 Comments