ಚಳ್ಳಕೆರೆ ಜನಧ್ವನಿವಾರ್ತೆ ಫೆ.15
ಸಂತ ಸೇವಾಲಾಲ್ ಅವರ ವಿಚಾರಧಾರೆಗಳು ಹಾಗೂ ಹಿತವಾಣಿಗಳನ್ನು ಸಮಾಜಕ್ಕೆ ತಿಳಿಸುವುದರೊಂದಿಗೆ ಅವರ ಮಾರ್ಗಗಳನ್ನು ಅನುಸರಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಕಿವಿಮಾತು ಹೇಳಿದರು.
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟಿçÃಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಬಂಜಾರ ಸಮುದಾಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸಂತಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ದಾರ್ಶನಿಕರ ಕಡಿಮೆ ಅವಧಿಯ ಜೀವಿತ ಅವಧಿಯಲ್ಲಿ ಎಲ್ಲಾ ಸಮುದಾಯಗಳಿಗೆ ನೀಡಿದ ಮಾರ್ಗದರ್ಶನ ಹಾಗೂ ಕೊಡೆಗುಗೆಗಳು ಭೂಮಿ, ಚಂದ್ರ , ಸೂರ್ಯ ಇರುವ ತನಕ ಶಾಸ್ವತವಾಗಿ ಇರುವಂತ ಕೊಡುಗೆಗಳನ್ನು ನೀಡಿದ್ದಾರೆ.
ಅದೇ ರೀತಿ ಬಂಜಾರ ಸಮುದಾಯವನ್ನು ಉತ್ತಮ ಮಟ್ಟಕ್ಕೆ ತರುವಲ್ಲಿ ಸಂತ ಸೇವಾಲಾಲ್ ಅವರ ಪರಿಶ್ರಮ ಅಪಾರವಾದದ್ದು. ಅವರ ಅಮೂಲ್ಯ ಸಂದೇಶಗಳು ಮತ್ತು ಹಿತವಾಣಿಗಳನ್ನು ಸಮಾಜಕ್ಕೆ ತಲುಪಿಸುವ ಕಾರ್ಯಗಳು ನಡೆಯಬೇಕು ಎಂದರು.
ಬAಜಾರ ಸಮುದಾಯದ ವೇಷ, ಭೂಷಣ ಹಾಗೂ ಆಚರಣೆಗಳು ಬಹಳ ವಿಭಿನ್ನವಾಗಿವೆ. ಆದರೆ ಕೆಲವು ಕಡೆಗಳಲ್ಲಿ ಈ ಜನಾಂಗದ ವೇಷ, ಭೂಷಣ ಹಾಗೂ ಆಚರಣೆಗಳು ಕಡಿಮೆಯಾಗುತ್ತಿದ್ದು, ಇಂತಹ ವಿಶೇಷ ಸಂಸ್ಕೃತಿಯನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬರ ಜವಬ್ದಾರಿಯಾಗಿದೆ ಎಂದರು.
ಸೇವಾಲಾಲ್ ಅವರು ಸಮಾಜದ ಸುಧಾರಣೆಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಅವರ ಪ್ರಾಮಾಣಿಕತೆ, ನಿಸ್ವಾರ್ಥ ಮನೋಭಾವ ಹಾಗೂ ಸಂಘಟನಾ ಚತುರತೆಯನ್ನು ಹೊಂದಿದ್ದರು ಜೊತೆಗೆ ಮಾನವತಾವಾಧಿಯಾಗಿದ್ದರು ಎಂದರು.
ತಹಶೀಲ್ದಾರ್ ರೇಹಾನ್ ಪಾಷಾ ಮಾತನಾಡಿ ನಾವು ಈಗ ಜಲ, ಪರಿಸರ ರಕ್ಷಣೆಗೆ ಅರಿವು ಮೂಡಿಸುವ ಕಾರ್ಯಕ್ರಗಮಗಳನ್ನು ಮಾಡುತ್ತೇವೆ ಸಂತಸೇವಾಲಾಸ್ ರವರು ಅಂದಿನ ಕಾಲದಲ್ಲೇ ಜಲ ಸಂರಕ್ಷಣೆ, ತಂದೆ ತಾಯಿ, ಹಿರಿಯರಿಗೆ ಗೌರವ , ಹಸಿದವರಿಗೆ ಅನ್ನ, ಬಾಯಾರಿದವರಿಗೆ ನೀರು ಕೊಡುವಂತ ಸುಸಂಸ್ಕೃತಿಯನ್ನು ವಚನಗಳ ಮೂಲಕ ಸಾಮಾಜಕ್ಕೆ ಕೊಡುವೆ ನೀಡಿದ್ದಾರೆ ಇವರ ಆದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಮಹಾನಿಯರ ಜಯಂತಿಗಳಿಗೆ ಅರ್ಥ ಬರುತ್ತದೆ ಎಂದು ತಿಳಿಸಿದರು.
ಸಮಾಜದ ಮುಖಂಡರಾದ ಡಾ.ಚಂದ್ರನಾಯ್ಕ, ಗೀತಾಬಾಯಿ, ಪುರುಶೋತ್ತಮನಾಯ್ಕ, ಕೆ.ಪಿ.ಭೂತಯ್ಯ ಮಾತನಾಡಿದರು. ನಗರಸಭೆ ಅಧ್ಯಕ್ಷೆ ಸುಮಕ್ಕ, ಉಪಾಧ್ಯಕ್ಷೆ ಮಂಜುಳಾ ಹಾಗೂ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.
0 Comments