ಸಂವಾದದಲ್ಲಿ ಪತ್ರಕರ್ತರೊಂದಿಗೆ ಮನದಾಳದ ಮಾತು ಹಂಚಿಕೊಂಡ ಜಿಪಂ ಸಿಇಓ ರಾಹುಲ್ ರತ್ನಂ ಪಾಂಡೆಯ — ಪತ್ರಕರ್ತರ ಪರಿವಾರದಿಂದ ಭಾರತೀಯ ಆಡಳಿತ ಸೇವೆಗೆ ಸೇರಿದ ಹೆಮ್ಮೆ ನನ್ನದು

by | 27/02/23 | ಸುದ್ದಿ


ಕೊಪ್ಪಳ ಫೆ.27 : ಪತ್ರಕರ್ತ ಪರಿವಾರದಿಂದ ಬಂದಿರುವ ನಾನು ಭಾರತೀಯ ಆಡಳಿತ ಸೇವೆಗೆ ಸೇರಿರುವುದು ನನಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಾಹುಲ್ ರತ್ನಂ ಪಾಂಡೆಯ ಅವರು ಹೇಳಿದರು.
ಜಿಲ್ಲಾ ಪಂಚಾಯತ್‌ನ ಜೆ ಹೆಚ್ ಪಟೇಲ್ ಸಭಾಂಗಣದಲ್ಲಿ ಫೆ.27ರಂದು ಜಿಲ್ಲೆಯ ಪತ್ರಕರ್ತರೊಂದಿಗೆ ಮೊದಲನೇ ಭಾರಿಗೆ ಸಂವಾದ ನಡೆಸಿ ಮಾತನಾಡಿದ ಅವರು, ನಮ್ಮ ತಂದೆಯವರು ಹಿಂದಿ ಭಾಷೆಯ ಪತ್ರಿಕೆಯೊಂದರಲ್ಲಿ ಹಲವಾರು ದಶಕಗಳ ಕಾಲ ಜರ್ನಲಿಸ್ಟ್ ಆಗಿ ಸೇವೆ ಸಲ್ಲಿಸಿದ್ದಾರೆ. ಆಗಿನ ಪತ್ರಿಕಾರಂಗದ ಪರಿಸ್ಥಿತಿಯಂತೆ ಅತಿ ಕಡಿಮೆ ಸಂಬಳವಿದ್ದರು ಸಹ ನಮ್ಮ ತಂದೆಯವರು ಸಾಮಾಜಿಕ ಕಾಳಜಿಯೊಂದಿಗೆ, ಬದ್ಧತೆಯೊಂದಿಗೆ ಕೆಲಸ ಮಾಡಿದರು. ಅವರ ಸಮಾಜಮುಖಿ ಗುಣಗಳು, ಅವರು ಜೀವನದಲ್ಲಿ ಅಳವಡಿಸಿಕೊಂಡಿದ್ದ ಮೌಲ್ಯಗಳು ನನಗೆ ಈಗಲೂ ದಾರಿದೀಪವಾಗಿವೆ ಎಂದರು.
ಸದಾಕಾಲ ಸುದ್ದಿ ಸಮಾಚಾರದಲ್ಲಿ ಮಗ್ನರಾಗಿರುತ್ತಿದ್ದ ನಮ್ಮ ತಂದೆಯವರ ಪಾಡನ್ನು ಮನೆಯಲ್ಲಿ ಹತ್ತಿರದಿಂದ ಕಂಡಿರುವ ನನಗೆ ಪತ್ರಕರ್ತರ ಬದುಕು-ಭಾವನೆಗಳ ಬಗ್ಗೆ ಸದಾಕಾಲ ಗೌರವ ಇದೆ, ಇರುತ್ತದೆ ಎಂದು ತಿಳಿಸಿದರು.
ವಿದ್ಯಾಭ್ಯಾಸಕ್ಕಾಗಿ ತಾವು ಡೆಹ್ರಾಡೂನದಲ್ಲಿದ್ದಾಗ 10 ಜನ ಪತ್ರಕರ್ತರೊಂದಿಗೆ ಒಡನಾಟ ಹೊಂದಿದ್ದಾಗಿ ಸಹ ತಿಳಿಸಿದರು. ಸುದ್ದಿಗಾಗಿ ಪ್ರತಿ ನಿತ್ಯ ಒಂದಿಲ್ಲೊಂದು ಒತ್ತಡದಲ್ಲಿರುವ ಪತ್ರಕರ್ತರ ದಿನಚರಿಯನ್ನು ಹತ್ತಿರದಿಂದ ನೋಡಿದ್ದಾಗಿ ಸಿಇಓ ಅವರು ಹೇಳಿದರು.
ಪ್ರತಿ ತಿಂಗಳು ಸಭೆ: ಪತ್ರಿಕಾರಂಗವು ಸಂವಿಧಾನದ ನಾಲ್ಕನೆಯ ಪ್ರಮುಖ ಅಂಗವಾಗಿದ್ದು, ಈ ಹಿನ್ನೆಲೆಯಲ್ಲಿ ಪತ್ರಕರ್ತರ ಜವಾಬ್ದಾರಿ ಹೆಚ್ಚಿದೆ. ಸದಾಕಾಲ ಜನರ ಮಧ್ಯೆನೇ ಇದ್ದು, ಕಾಣುವ ಜನರ ನೋವು ನಲಿವನ್ನು ಜಿಲ್ಲೆಯ ಪತ್ರಕರ್ತರು ತಮಗೆ ಮುಕ್ತವಾಗಿ ತಿಳಿಸಬಹುದು ಎಂದರು. ತಮ್ಮ ಮೊಬೈಲ್ ಸಂಖ್ಯೆಗೆ ಯಾವುದೇ ಸಮಯದಲ್ಲಿ ಕರೆ ಮಾಡಿ ಸಲಹೆ ಮಾಡಬಹುದಾಗಿದೆ ಎಂದರು. ಪತ್ರಕರ್ತರು ಸಹಮತ ಸೂಚಿಸಿದಲ್ಲಿ ಪ್ರತಿ ತಿಂಗಳು ಪತ್ರಕರ್ತರೊಂದಿಗೆ ಸಂವಾದ ಏರ್ಪಡಿಸುವುದಾಗಿ ಅವರು ಹೇಳಿದರು.
ಅಭಿವೃದ್ದಿಗೆ ಸಹಕಾರವಿರಲಿ: ಸಂವಾದದಲ್ಲಿ ಪತ್ರಕರ್ತರು ಜಿಲ್ಲೆಯ ಕೆಲವು ಸಮಸ್ಯೆಗಳ ಬಗ್ಗೆ ಸಿಇಓ ಅವರಿಗೆ ತಿಳಿಸಿದರು. ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಿಇಓ ಅವರು, ಜಿಲ್ಲೆಯಲ್ಲಿ ಏನೇ ಸಮಸ್ಯೆ ಇದ್ದರು ಅದನ್ನು ಸರಿಪಡಿಸಲು ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು. ಜಿಲ್ಲೆಯ ಅಭಿವೃದ್ದಿ ವಿಷಯಗಳಿಗೆ ಪತ್ರಕರ್ತರ ಸಹಕಾರವಿರಲಿ ಎಂದರು.
ನಾನಾ ಯೋಜನೆಗಳು: ಮಾರ್ಚ 8ರ ಮಹಿಳಾ ದಿನದಂದು ಜಿಪಂನಿಂದ ವಿಭಿನ್ನವಾಗಿ ಕಾರ್ಯಕ್ರಮ ಮಾಡುವ ಯೋಚನೆ ಇದೆ. ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಸ್ವೀಪ್ ಚಟುವಟಿಕೆಗಳನ್ನು ಚುರುಕುಗೊಳಿಸಲಾಗುವುದು ಎಂದು ಸಿಇಓ ಅವರು ತಿಳಿಸಿದರು. ಇಂತಹ ಇನ್ನು ಅನೇಕ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದರು. ಈ ವೇಳೆ ಜಿಪಂ ಉಪ ಕಾರ್ಯದರ್ಶಿ ಸಮೀರ್ ಮುಲ್ಲಾ, ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಇದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page