ಹಿರಿಯೂರು :
ರೈತರು ಸಾಲ ಮನ್ನಾ ಆಸೆಗಾಗಿ ಬರಗಾಲ ಬರಲಿ ಅಂತ ಕಾಯ್ತಾರೆ ಎಂಬ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಹೇಳಿಕೆ ಖಂಡನೀಯವಾಗಿದ್ದು, ರಾಜ್ಯ ಸರ್ಕಾರ ಈ ಕೂಡಲೇ ದುರಹಂಕಾರಿ ಸಚಿವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂಬುದಾಗಿ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷರಾದ ಕೆ.ಸಿ.ಹೊರಕೇರಪ್ಪ ಒತ್ತಾಯಿಸಿದ್ದಾರೆ.
ಅನ್ನದಾತರ ಬಗ್ಗೆ ಕಾಳಜಿ ಇಲ್ಲದ ರಾಜ್ಯ ಸರ್ಕಾರದ ಸಕ್ಕರೆ ಸಚಿವ ಶ್ರೀ ಶಿವಾನಂದ ಪಾಟೀಲ್ ರವರು ರೈತರ ಬಗ್ಗೆ ಎಳ್ಳಷ್ಟು ಕಾಳಜಿ ಇಲ್ಲದ ಹಾಗೆ ಸಾಲ ಮನ್ನಾ ಆಸೆಗಾಗಿ ರೈತರು ಬರಗಾಲ ಬರಲಿ ಅಂತ ಕಾಯ್ತಾರೆ ಎಂಬ ಹೇಳಿಕೆ ನೀಡಿರುವುದು, ನಿಜಕ್ಕೂ ರೈತ ವಿರೋಧಿ ನೀತಿಯಾಗಿದೆ ಎಂಬುದಾಗಿ ಆಗ್ರಹಿಸಿದ್ದಾರೆ.
ಯಾವುದೇ ರೈತರು ಸಾಲಮನ್ನಾಕ್ಕಾಗಿ ಬರಗಾಲ ಆಹ್ವಾನಿಸುವುದಿಲ್ಲ, ಯಾವುದೇ ರಾಜ್ಯ ಸರ್ಕಾರ ರೈತರಿಗೆ ಉಚಿತವಾಗಿ ಬಿತ್ತನೆ ಬೀಜ ಗೊಬ್ಬರ ಯಾವುದನ್ನು ಇದುವರೆಗೂ ನೀಡಿರುವುದಿಲ್ಲ, ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಂಬಲ ಬೆಲೆ ನೀಡಿರುವುದಿಲ್ಲ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕನಿಷ್ಠ ಬೆಂಬಲ ಬೆಲೆಗೆ ಕಾಯ್ದೆ ರೂಪಿಸಿರುವುದಿಲ್ಲ ಎಂದರಲ್ಲದೆ,
ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ರೈತರು ಪ್ರತಿಸಾರಿಯು ನಷ್ಟ ಅನುಭವಿಸುತ್ತಿರುತ್ತಾರೆ, ಮಾರುಕಟ್ಟೆಯಲ್ಲಿ ಬೇರೆ ಸಿಗದಿದ್ದಂತ ಪಕ್ಷದಲ್ಲಿ ತಾನು ಬೆಳೆದ ಹಣ್ಣು, ತರಕಾರಿ, ಇತರೆ ತೋಟದ ಬೆಳೆಗಳನ್ನು ತಿಪ್ಪೆಗೆ ಸುರಿದು, ರಸ್ತೆಗೆ ಸುರಿದು, ಸರ್ಕಾರದ ಬಳಿ ರೈತರು ನೋವನ್ನು ತೋಡಿಕೊಂಡ ಅನೇಕ ಸಾವಿರಾರು ಉದಾಹರಣೆಗಳು ಕಣ್ಮುಂದಿವೆ ಎಂದರಲ್ಲದೆ,
ಇಂತಹ ಸಂದರ್ಭದಲ್ಲಿ ಸಚಿವರು ಅಸಂವಿಧಾನಿಕವಾಗಿ ಪದಬಳಕೆ ಮಾಡಿರುವುದು ನಾಡಿನ ಅನ್ನದಾತರಿಗೆ ಮಾಡಿರುವಂತಹ ಅಪಮಾನ, ಕಳೆದ ಮುಂಗಾರಿನಲ್ಲಿ ತೀವ್ರ ಬರಗಾಲ ಆವರಿಸಿ ರಾಜ್ಯದ ಸುಮಾರು 212 ತಾಲೂಕುಗಳನ್ನು ರಾಜ್ಯ ಸರ್ಕಾರ ಬರಪೀಡಿತ ಪ್ರದೇಶ ಎಂದು ಘೋಷಿಸಿದೆ ,
ರೈತರು ನಷ್ಟ ಅನುಭವಿಸಿರುವ 33,700 ಕೋಟಿ ರೂ ನಷ್ಟವನ್ನು ರಾಜ್ಯದ ಮುಖ್ಯಮಂತ್ರಿಗಳು, ಮತ್ತು ಕಂದಾಯ ಸಚಿವರು ಪ್ರಧಾನಿ ಭೇಟಿಯಾಗಿ 17,900 ಕೋಟಿ ರೂಪಾಯಿ ಬೆಳೆ ನಷ್ಟ ಪರಿಹಾರ ನೀಡುವಂತೆ ಮನವಿ ಮಾಡಿದ ಇಂತಹ ಸಂದರ್ಭದಲ್ಲಿ ಈ ದುರಹಂಕಾರಿ ರೈತ ವಿರೋಧಿ, ರಾಜ್ಯ ಸರ್ಕಾರದ ಸಕ್ಕರೆ ಸಚಿವ ಶಿವಾನಂದಪಾಟೀಲ್ ರವರನ್ನು ಮಾನ್ಯಮುಖ್ಯಮಂತ್ರಿಗಳು ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದ್ದಾರಲ್ಲದೆ,
ಈ ಕೂಡಲೇ ಮಾನ್ಯಮುಖ್ಯಮಂತ್ರಿಗಳು ಈ ಬಗ್ಗೆ ಕ್ರಮಕೈಗೊಳ್ಳದೆ, ವಿಳಂಬ ಧೋರಣೆಯನ್ನು ಕೈಗೊಂಡಲ್ಲಿ ಜಿಲ್ಲೆಯಾದ್ಯಂತ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಉಗ್ರ ಹೋರಾಟವನ್ನು ಕೈಗೊಳ್ಳಲಾಗುವುದು ಎಂಬುದಾಗಿ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷರಾದ ಕೆ.ಸಿ.ಹೊರಕೇರಪ್ಪ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments