ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ರವರನ್ನು ಸಚಿವ ಸಂಪುಟದಿಂದ ವಜಾಮಾಡಲು ಹೊರಕೇರಪ್ಪ ಒತ್ತಾಯ.

by | 25/12/23 | ಸುದ್ದಿ


ಹಿರಿಯೂರು :
ರೈತರು ಸಾಲ ಮನ್ನಾ ಆಸೆಗಾಗಿ ಬರಗಾಲ ಬರಲಿ ಅಂತ ಕಾಯ್ತಾರೆ ಎಂಬ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಹೇಳಿಕೆ ಖಂಡನೀಯವಾಗಿದ್ದು, ರಾಜ್ಯ ಸರ್ಕಾರ ಈ ಕೂಡಲೇ ದುರಹಂಕಾರಿ ಸಚಿವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂಬುದಾಗಿ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷರಾದ ಕೆ.ಸಿ.ಹೊರಕೇರಪ್ಪ ಒತ್ತಾಯಿಸಿದ್ದಾರೆ.
ಅನ್ನದಾತರ ಬಗ್ಗೆ ಕಾಳಜಿ ಇಲ್ಲದ ರಾಜ್ಯ ಸರ್ಕಾರದ ಸಕ್ಕರೆ ಸಚಿವ ಶ್ರೀ ಶಿವಾನಂದ ಪಾಟೀಲ್ ರವರು ರೈತರ ಬಗ್ಗೆ ಎಳ್ಳಷ್ಟು ಕಾಳಜಿ ಇಲ್ಲದ ಹಾಗೆ ಸಾಲ ಮನ್ನಾ ಆಸೆಗಾಗಿ ರೈತರು ಬರಗಾಲ ಬರಲಿ ಅಂತ ಕಾಯ್ತಾರೆ ಎಂಬ ಹೇಳಿಕೆ ನೀಡಿರುವುದು, ನಿಜಕ್ಕೂ ರೈತ ವಿರೋಧಿ ನೀತಿಯಾಗಿದೆ ಎಂಬುದಾಗಿ ಆಗ್ರಹಿಸಿದ್ದಾರೆ.
ಯಾವುದೇ ರೈತರು ಸಾಲಮನ್ನಾಕ್ಕಾಗಿ ಬರಗಾಲ ಆಹ್ವಾನಿಸುವುದಿಲ್ಲ, ಯಾವುದೇ ರಾಜ್ಯ ಸರ್ಕಾರ ರೈತರಿಗೆ ಉಚಿತವಾಗಿ ಬಿತ್ತನೆ ಬೀಜ ಗೊಬ್ಬರ ಯಾವುದನ್ನು ಇದುವರೆಗೂ ನೀಡಿರುವುದಿಲ್ಲ, ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಂಬಲ ಬೆಲೆ ನೀಡಿರುವುದಿಲ್ಲ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕನಿಷ್ಠ ಬೆಂಬಲ ಬೆಲೆಗೆ ಕಾಯ್ದೆ ರೂಪಿಸಿರುವುದಿಲ್ಲ ಎಂದರಲ್ಲದೆ,
ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ರೈತರು ಪ್ರತಿಸಾರಿಯು ನಷ್ಟ ಅನುಭವಿಸುತ್ತಿರುತ್ತಾರೆ, ಮಾರುಕಟ್ಟೆಯಲ್ಲಿ ಬೇರೆ ಸಿಗದಿದ್ದಂತ ಪಕ್ಷದಲ್ಲಿ ತಾನು ಬೆಳೆದ ಹಣ್ಣು, ತರಕಾರಿ, ಇತರೆ ತೋಟದ ಬೆಳೆಗಳನ್ನು ತಿಪ್ಪೆಗೆ ಸುರಿದು, ರಸ್ತೆಗೆ ಸುರಿದು, ಸರ್ಕಾರದ ಬಳಿ ರೈತರು ನೋವನ್ನು ತೋಡಿಕೊಂಡ ಅನೇಕ ಸಾವಿರಾರು ಉದಾಹರಣೆಗಳು ಕಣ್ಮುಂದಿವೆ ಎಂದರಲ್ಲದೆ,
ಇಂತಹ ಸಂದರ್ಭದಲ್ಲಿ ಸಚಿವರು ಅಸಂವಿಧಾನಿಕವಾಗಿ ಪದಬಳಕೆ ಮಾಡಿರುವುದು ನಾಡಿನ ಅನ್ನದಾತರಿಗೆ ಮಾಡಿರುವಂತಹ ಅಪಮಾನ, ಕಳೆದ ಮುಂಗಾರಿನಲ್ಲಿ ತೀವ್ರ ಬರಗಾಲ ಆವರಿಸಿ ರಾಜ್ಯದ ಸುಮಾರು 212 ತಾಲೂಕುಗಳನ್ನು ರಾಜ್ಯ ಸರ್ಕಾರ ಬರಪೀಡಿತ ಪ್ರದೇಶ ಎಂದು ಘೋಷಿಸಿದೆ ,
ರೈತರು ನಷ್ಟ ಅನುಭವಿಸಿರುವ 33,700 ಕೋಟಿ ರೂ ನಷ್ಟವನ್ನು ರಾಜ್ಯದ ಮುಖ್ಯಮಂತ್ರಿಗಳು, ಮತ್ತು ಕಂದಾಯ ಸಚಿವರು ಪ್ರಧಾನಿ ಭೇಟಿಯಾಗಿ 17,900 ಕೋಟಿ ರೂಪಾಯಿ ಬೆಳೆ ನಷ್ಟ ಪರಿಹಾರ ನೀಡುವಂತೆ ಮನವಿ ಮಾಡಿದ ಇಂತಹ ಸಂದರ್ಭದಲ್ಲಿ ಈ ದುರಹಂಕಾರಿ ರೈತ ವಿರೋಧಿ, ರಾಜ್ಯ ಸರ್ಕಾರದ ಸಕ್ಕರೆ ಸಚಿವ ಶಿವಾನಂದಪಾಟೀಲ್ ರವರನ್ನು ಮಾನ್ಯಮುಖ್ಯಮಂತ್ರಿಗಳು ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದ್ದಾರಲ್ಲದೆ,
ಈ ಕೂಡಲೇ ಮಾನ್ಯಮುಖ್ಯಮಂತ್ರಿಗಳು ಈ ಬಗ್ಗೆ ಕ್ರಮಕೈಗೊಳ್ಳದೆ, ವಿಳಂಬ ಧೋರಣೆಯನ್ನು ಕೈಗೊಂಡಲ್ಲಿ ಜಿಲ್ಲೆಯಾದ್ಯಂತ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಉಗ್ರ ಹೋರಾಟವನ್ನು ಕೈಗೊಳ್ಳಲಾಗುವುದು ಎಂಬುದಾಗಿ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷರಾದ ಕೆ.ಸಿ.ಹೊರಕೇರಪ್ಪ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page