ಸಚಿವ ಡಿ ಸುಧಾಕರ್ ವಿರುದ್ಧ ಕೇಳಿ ಬಂದಿರುವ ಆರೋಪಗಳು ಸತ್ಯಕ್ಕೆ ದೂರವಾದುದು ಸಚಿವರ ಏಳಿಗೆ ಸಹಿಸದೆ ರಾಜಕೀಯ ಷಡ್ಯಂತ್ರ ರೂಪಿಸಲಾಗಿದೆ:ಟಿಜೆ ವೆಂಕಟೇಶ್

by | 14/09/23 | ಜನಧ್ವನಿ


ಚಳ್ಳಕೆರೆ:ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ರವರ ಏಳಿಗೆಯನ್ನು ಸಹಿಸದ ವ್ಯಕ್ತಿಗಳಿಂದ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಅವರ ಮೇಲೆ ಬಂದಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದಿಗೂ ಸಹ ಸಚಿವರು ಜಾತಿ ಹೆಸರಿನಲ್ಲಿ ರಾಜಕಾರಣ ಮಾಡಿಕೊಂಡು ಬಂದಿಲ್ಲ ಅವರ ಹೆಸರಿಗೆ ಮಸಿ ಬಳಿಯುವ ಯತ್ನ ನಡೆಯುತ್ತಿದೆ ಎಂದು ಪುರಸಭೆ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಟಿಜೆ ವೆಂಕಟೇಶ್ ಸಚಿವ ಡಿ ಸುಧಾಕರ್ ರವರನ್ನು ಸಮರ್ಥಿಸಿಕೊಂಡರು.

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಸಚಿವ ಸುಧಾಕರ್ ರವರು 10 ವರ್ಷಗಳ ಹಿಂದೆ ಸೆವೆನ್ ಹಿಲ್ಸ್ ಎಂಬ ಕಂಪನಿಯ ಮೂಲಕ ಜಮೀನು ಖರೀದಿ ಮಾಡಿದ್ದಾರೆ ಈಗ ಇದನ್ನು ಕೆಲವರು ವಿವಾದ ಸೃಷ್ಟಿಸಿದ್ದಾರೆ ಹಾಗೂ ಹಳೆಯ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಸಚಿವರ ತೇಜೋವದೆ ಮಾಡಲಾಗುತ್ತಿದೆ.

 ವಿರೋಧ ಪಕ್ಷಗಳು ರಾಜೀನಾಮೆ ಕೇಳುತ್ತಿರುವುದು ಸರಿಯಲ್ಲ ಈಗಾಗಲೇ ಪೊಲೀಸರು ತನಿಖೆ ಕೈಗೊಂಡಿದ್ದು ಪ್ರಕರಣದ ಸತ್ಯ ಸತ್ಯತೆ ಹೊರಬಂದು ತಪ್ಪಿಸ್ತಸ್ಥರಿಗೆ ಶಿಕ್ಷೆ ಆಗಲಿದೆ ಸಚಿವ ಸುಧಾಕರ್ ರವರು ರಾಜೀನಾಮೆ ನೀಡುವ ಪ್ರಶ್ನೆ ಬರುವುದಿಲ್ಲ ಇವರು ರಾಜಕೀಯೇತರವಾಗಿ ವ್ಯವಹಾರಗಳನ್ನು ಮಾಡುತ್ತಾ ಬಂದಿದ್ದಾರೆ ಭೂಮಿ ಖರೀದಿಗೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ ಸಚಿವರ ಪರವಾಗಿ ಎಂದಿಗೂ ನಾವು ಅವರ ಬೆನ್ನ ಹಿಂದೆ ಇರುತ್ತೇವೆ ಎಂದರು.

ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮೋಹನ್ ಮಾತನಾಡಿ ಡಿ ಸುಧಾಕರ್ ರವರು ಕಳೆದ 20 ವರ್ಷಗಳಿಂದ ಶಾಸಕರಾಗಿ ಸಚಿವರಾಗಿ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ ಎಂದಿಗೂ ಜಾತಿ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಾ ಬಂದಿಲ್ಲ ಎಲ್ಲಾ ವರ್ಗದ ಜನರನ್ನು ತಮ್ಮ ಬಂಧು ಬಳಗವೆಂದು ಕಾಣುವ ಮನೋಭಾವವನ್ನು ಹೊಂದಿದ್ದಾರೆ ದಲಿತ ನಾಯಕರನ್ನು ರಾಜಕೀಯವಾಗಿ ಬೆಳೆಸಿದ ಅನೇಕ ಉದಾಹರಣೆಗಳಿವೆ ಸುಧಾಕರ್ ವಿರುದ್ಧ ರಾಜಕೀಯ ಲಾಭಕ್ಕಾಗಿ ಮಾದಿಗ ಸಮುದಾಯವನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯವಾದದ್ದು ಜೈನ ಸಮುದಾಯದಂತ ಚಿಕ್ಕ ಸಮುದಾಯಕ್ಕೆ ಸೇರಿದ್ದರು ಸಹ  ಸಚಿವರು ಎಂದಿಗೂ ಯಾವುದೇ ಜಾತಿ ವರ್ಗವನ್ನು ಕೀಳಾಗಿ ಕಾಣದೆ ರಾಜಕೀಯವಾಗಿ ಸಾಮಾಜಿಕವಾಗಿ ಸಮಾನ ದೃಷ್ಟಿಕೋನದಿಂದ ಕಂಡಿದ್ದಾರೆ ಗೃಹ ಸಚಿವ ಜಿ ಪರಮೇಶ್ವರ್ ರವರು ಈ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ತಪ್ಪಿತಸ್ಥ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ಚೆನ್ನಮ್ಮ ನಾಗತಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆನಂದ್ ಕುಮಾರ್ ಮಾತನಾಡಿ ಸಚಿವ ಡಿ ಸುಧಾಕರ್ ರವರ ವಿರುದ್ಧ ಆರೋಪ ಮಾಡುವವರು ದಾಖಲೆಗಳನ್ನು ತಂದು ರಾಜ್ಯದ ಜನತೆಯ ಮುಂದೆ ಇಟ್ಟು ಕಾನೂನು ರೀತಿಯ ಹೋರಾಟ ನಡೆಸಲಿ ಕೇವಲ ಪ್ರಚಾರಕ್ಕಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡುವುದು ಸರಿಯಲ್ಲ ಎಲ್ಲಾ ವರ್ಗದ ಜನರನ್ನು ತಮ್ಮವರಂತೆ ಕಾಣುವ ಸಚಿವ ಡಿ ಸುಧಾಕರ್ ತಮ್ಮ ಶಾಸಕ ಸಚಿವರ ಅವಧಿಯಲ್ಲಿ ದೀನ ದಲಿತರ ಪರವಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿ ನ್ಯಾಯವನ್ನು ಒದಗಿಸಿದ್ದಾರೆ ವಿರೋಧ ಪಕ್ಷಗಳು ಪ್ರಕರಣದ ನೈಜ ಸ್ಥಿತಿ ತಿಳಿಯದೆ ಆರೋಪ ಮಾಡುವುದು ಸರಿಯಲ್ಲ ಸಚಿವರ ವಿರುದ್ಧ ಇಂತಹ ಕುತಂತ್ರ ರಾಜಕಾರಣ ಮಾಡುವ ಬದಲು ರಾಜ್ಯದ ಸಮಸ್ಯೆಗಳ ಬಗ್ಗೆ ವಿರೋಧ ಪಕ್ಷಗಳು ಗಮನ ಹರಿಸಲಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಚೇತನ್ ಕುಮಾರ್ ತಳುಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಓಬಳೇಶ್ ಚೌಳೂರು ಪ್ರಕಾಶ್ ತಿಪ್ಪೇಸ್ವಾಮಿ ಅಬುಬಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page