ಚಳ್ಳಕೆರೆ ಜನಧ್ವನಿ ವಾರ್ತೆ ಏ17. ಶ್ರೀರಾಮನವಮಿ ಅಂಗವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಶ್ರೀರಾಮ ಜಪದೊಂದಿಗೆ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ವರ್ತಕರು, ಹನುಮದೇವಸ್ಥಾನ, ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಶ್ರೀರಾಮ ಹನುಮ ಭಕ್ತರು ಎಲ್ಲಡೆ ಪಾನಕ, ಮಜ್ಜಿಗೆ ಹಾಗೂ ಕೋಸಂಬರಿ ಹಂಚಿ ಸಂಭ್ರಮಿಸಿದರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಶ್ರೀರಾಮ, ಆಂಜನೇಯ ದೇವಸ್ಥಾನಗಳಲ್ಲಿ ಮುಂಜಾನೆಯಿಂದಲೇ ಅಭಿಷೇಕ, ಹೂವಿನ ಅಲಂಕಾರ, ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ತಳಿರು-ತೋರಣಗಳಿಂದ ಸಿಂಗಾರಗೊಂಡಿದ್ದ ದೇವಸ್ಥಾನಗಳಿಗೆ ಭಕ್ತರು ತೆರಳಿ ವಿಶೇಷ ಪೂಜೆ ಸಲ್ಲಿಸುವುದರ ಜತೆಗೆ, ರಾಮನಾಮ ಜಪಿಸುತ್ತಿಧಿದ್ದುಧಿದು ಕಂಡು ಬಂತು. ದೇವಾಲಯಗಳಲ್ಲಿ ಭಜನೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು
ದೇವಾಲಯಗಳ ಆವರಣಗಳಲ್ಲಿ ಹಾಗೂ ಪ್ರಮುಖ ವೃತ್ತ, ರಸ್ತೆ,ಅಂಗಡಿಗಳ ಮುಂದೆ ಭಕ್ತರನ್ನು ಕರೆದು ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸುವ ದೃಶ್ಯ ಕಂಡು ಬಂತು.
0 Comments