ಹಿರಿಯೂರು :
ಪ್ರತಿನಿತ್ಯವೂ ನಗರದ ಸ್ವಚ್ಛತೆ ಕಾಪಾಡುವ ಮೂಲಕ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಸಹಕಾರಿಯಾಗಿರುವ ಪೌರಕಾರ್ಮಿಕರ ಸೇವೆ ಅಪಾರವಾದದ್ದು ಎಂಬುದಾಗಿ ಪ್ರಧಾನ ಸಿವಿಲ್ ನ್ಯಾಯಾಧೀಶೆ ಶಿಲ್ಪಾ ತಿಮ್ಮಾಪುರ ಹೇಳಿದರು.
ನಗರದ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ವಿಶ್ವ ಕಾರ್ಮಿಕರ ದಿನಾಚರಣೆ ಪ್ರಯುಕ್ತ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಅಭಿಯೋಜನಾ ಇಲಾಖೆ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಂಡು ಉತ್ತಮ ಜೀವನ ನಡೆಸಬೇಕು, ಕಾರ್ಮಿಕರು ಕಾನೂನುಗಳ ಬಗ್ಗೆ ತಿಳಿದುಕೊಳ್ಳಬೇಕು ನೀವು ಮಾಡುವ ಕೆಲಸದ ಬಗ್ಗೆ ಮನಸ್ಸಿಗೆ ತೃಪ್ತಿಯಿದೆ, ಮಾಡಿದ ಕೆಲಸಕ್ಕೆ ದೇವರು ಫಲ ಕೊಡುತ್ತಾನೆ, ಸಮಾಜದಲ್ಲಿ ಕಾರ್ಮಿಕರಿಗೆ ಇನ್ನೂ ಹೆಚ್ಚಿನ ಮಾನ್ಯತೆ, ಗೌರವ ಸಿಗಲಿ ಎಂಬುದಾಗಿ ಹೇಳಿದರು.
ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಚಿತ್ರಲಿಂಗಪ್ಪ ಮಾತನಾಡಿ, ಬಾಲಕಾರ್ಮಿಕ ಪದ್ಧತಿ ವಿಶ್ವದ ಜ್ವಲಂತ ಸಮಸ್ಯೆಗಳಲ್ಲಿ ಒಂದಾಗಿದೆ, ಪೋಷಕರು ತಮ್ಮ ಮಕ್ಕಳನ್ನು ಕೆಲಸಕ್ಕೆ ಕಳುಹಿಸುವ ಬದಲು ಶಾಲೆಗೆ ಕಳುಹಿಸಿ ವಿದ್ಯಾವಂತರನ್ನಾಗಿ ಮಾಡಿ ಸಮಾಜದ ಮುಖ್ಯ ವಾಹಿನಿಗೆ ತರಬೇಕು ಮಕ್ಕಳ ಕೈಯಲ್ಲಿ ಅಪಾಯಕಾರಿ ಕೆಲಸ ಮಾಡಿಸುವವರನ್ನು ಉಗ್ರವಾದ ಶಿಕ್ಷೆಗೆ ಒಳಪಡಿಸಿ ದಂಡ ವಿಧಿಸಲಾಗುತ್ತದೆ ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆ ನಿರೀಕ್ಷಕ ಅಲ್ಲಾಭಕ್ಷಿ, ನಗರಸಭೆ ರೆಹಮತ್ ಉನ್ನೀಸಾ, ವಕೀಲರ ಸಂಘದ ಉಪಾಧ್ಯಕ್ಷೆ ಭೀನಾರಾಣಿ, ಖಜಾಂಚಿ ಸೈಯದ್ ನವಾಜ್, ಪೌರಕಾರ್ಮಿಕರ ಸಂಘದ ಅಧ್ಯಕ್ಷ ದುರ್ಗಪ್ಪ ಹಾಗೂ ಪೌರಕಾರ್ಮಿಕರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments