ಚಳ್ಳಕೆರೆ ಜನಧ್ವನಿವಾರ್ತೆ ಫೆ.27
ಸರ್ವಜ್ಞರ ತ್ರಿಪದಿಗಳು ಸರಳತೆ ಹಾಗೂ ಪ್ರಾಸಬದ್ಧತೆಯಿಂದ ಜನಮಾನಸದಲ್ಲಿ ಇಂದಿಗೂ-ಎAದೆAದಿಗೂ ಜನಪ್ರಿಯವಾಗಿವೆ. ಸಮಾಜದಲ್ಲಿನ ಮೌಡ್ಯತೆ, ಅಂಕು-ಡೊAಕುಗಳನ್ನು ತಮ್ಮ ತ್ರಿಪದಿಗಳ ಮೂಲಕ ತಿದ್ದುವ ಕಾರ್ಯ ಮಾಡಿದ್ದಾರೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟಿçÃಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಕುಂಬಾರ ಸಮುದಾಯದವತಿಯಿಂದ ಆಯೋಜಿಸಿದ್ದ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕುಂಬಾರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯಿಸಿ ಧರಣಿ ನಡೆಸಿ ಬೇಡಿಕೆ ಸಲ್ಲಿಸಿ ನಿರ್ಭೀತ, ಸತ್ಯನಿಷ್ಠುರವಾದ ವ್ಯಕ್ತಿತ್ವ, ಅಗಾಧ ಪಾಂಡಿತ್ಯ, ಅಪಾರ ಜೀವನಾನುಭವವುಳ್ಳ ಸಂತ ಕವಿ ಸರ್ವಜ್ಞ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾಜದ ಏಳಿಗೆಗಾಗಿ ಸರ್ವಜ್ಞರ ವಚನಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಉತ್ತಮ ಮನುಷ್ಯರಾಗಲು ಸಾಧ್ಯ ಎಂದು ತಿಳಿಸಿದರು.
ತಹಶೀಲ್ದಾರ್ ರೇಹಾನ್ ಪಾಷಾ ಮಾತನಾಡಿ ಸರಳ ಭಾಷೆಯಲ್ಲಿ ವಚನಗಳ ಸತ್ವದ ಮೂಲಕ ಸಮಾಜದ ಮೂಢನಂಬಿಕೆ ತೊಡೆದು ಹಾಕುವ ನಿಟ್ಟಿನಲ್ಲಿ ಸರ್ವಜ್ಞರ ತ್ರಿಪದಿಗಳು ಕನ್ನಡದ ಅತ್ಯಂತ ಜನಪ್ರೀಯ ವಚನಗಳಾಗಿ ಇಂದಿಗೂ ಪ್ರಸ್ತುತ. ಕನ್ನಡ ಸಾಹಿತ್ಯ ಸಿರಿಗೆ ಅಮೂಲ್ಯ ಕೊಡುಗೆ. ಅನ್ಯರಿಗೆ ಟೀಕೆ, ಟಿಪ್ಪಣಿ, ನಿಂದನೆ ಅನುಸರಿಸದೇ ಸಾಹಿತ್ಯದ ಮೂಲಕ ಅಂದಿನ ವಚನಕಾರರು ತಮ್ಮ ಕಾಯಕದೊಂದಿಗೆ ವಚನಗಳ ಮೂಲಕ ತಮ್ಮ ಜೀವನವನ್ನು ಸಮಾಜದ ಉದ್ಧಾರಕ್ಕಾಗಿ ಮೀಸಲಿಟ್ಟು ಹಗಲಿರುಳು ಶ್ರಮಿಸಿದರೆ ಎಂದು ತಿಳಿಸಿದರು.
ಶ್ರೀ ಬಸವ ಕುಂಬಾರ ಮೂರ್ತಿ ಸ್ವಾಮೀಜಿ ಮಾತನಾಡಿ ಶೈಕ್ಷಣಿಕ, ಸಾಮಾಜಿಕ, ರಾಜಕೀಯವಾಗಿ ಕುಂಬಾರ ಸಮುದಾಯ ಹಿಂದುಳಿದಿದ್ದು ಕುಂಬಾರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯಿಸಿ ಧರಣಿ ನಡೆಸಿ ಬೇಡಿಕೆ ಸಲ್ಲಿಸಿದ್ದರೂ ಸಹ ಸರಕಾರ ನಿಗಮ ಸ್ಥಾಪನೆಗೆ ಮುಂದಾಗುತ್ತಿಲ್ಲ ಕೂಡಲೆ ರಾಜ್ಯದ ಶಾಸಕರು ಸರಕಾರಕ್ಕೆ ಒತ್ತಡ ಹಾಕುವ ಮೂಲಕ ಕುಂಬಾರ ಅಭಿವೃದ್ಧಿನಿಗಮ ಸ್ಥಾಪನೆಗೆ ಮುಂದಾಗ ಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯೆ ಕವಿತಾ. ಮುಷ್ಟೂರಲಿಂಗಪ್ಪ, ತಿಪ್ಪೇಸ್ವಾಮಿ, ಗೋವಿಂದರಾಜ್ ಮಾತನಾಡಿದರು.
ನಗರಸಭೆ ಅಧ್ಯಕ್ಷೆ ಸುಮಕ್ಕ , ಉಪಾಧ್ಯಕ್ಷೆ ಮಂಜುಳ, ಸದಸ್ಯರಾದ ಸಮುಭರಮಣ್ಣ, ರಮೇಶ್ಗೌಡ, ಚಳ್ಳಕೆರೆಪ್ಪ, ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕುಂಬಾರ ಸಮುದಾಯದ ವಿವಿಧ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
0 Comments