ಸಮಾಜದಲ್ಲಿ ಅವಕಾಶ ವಂಚಿತ ಜನರಿಗೆ, ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿರುವವರು, ಸಾಮಾಜಿಕ ನ್ಯಾಯದಿಂದ ವಂಚಿತರಾದ ಜನರ ಪರವಾಗಿ ನಾವು ಇರುತ್ತೇವೆ ಸಿ.ಎಂ‌ಸಿದ್ದರಾಮಯ್ಯ ಅಭಯ.

by | 02/12/23 | ಸುದ್ದಿ


ಬೆಂಗಳೂರು ಡಿ 2 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಖಿಲ ಕರ್ನಾಟಕ ಗಾಣಿಗರ ಸಂಘ ಆಯೋಜಿಸಿದ್ದ ಸುವರ್ಣ ಮಹೋತ್ಸವ ಸಮಾರಂಭ ಮತ್ತು ಗಾಣಿಗ ಜನಾಂಗದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ಅವಕಾಶ ವಂಚಿತ ಜನರಿಗೆ, ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿರುವವರು, ಸಾಮಾಜಿಕ ನ್ಯಾಯದಿಂದ ಇಂದಿಗೂ ವಂಚಿತರಾದ ಜನರ ಪರವಾಗಿ ನಾವು ಇರುತ್ತೇವೆ. ಯಾರೂ ಏನೇ ಹೇಳಿದರೂ ಸಾಮಾಜಿಕ ನ್ಯಾಯದಲ್ಲಿ ರಾಜಿ ಇಲ್ಲದೆ ಕೆಲಸ ಮಾಡುತ್ತೇವೆ.

ಗಾಣಿಗ ಸಮಾಜದವರು ಎಣ್ಣೆ ಉತ್ಪಾದನೆಯ ವೃತ್ತಿ ಮಾಡುತ್ತಿದ್ದವರು. ಇತ್ತೀಚಿನ ವರ್ಷಗಳಲ್ಲಿ ಕೈಗಾರೀಕರಣವಾದ ನಂತರ, ಎಣ್ಣೆ ತಯಾರಿಸುವ ವೃತ್ತಿಯನ್ನು ಬಿಡಬೇಕಾದ ಪರಿಸ್ಥಿತಿ ಬಂದಿದೆ. ಅನೇಕರು ಇದರಿಂದ ನಿರುದ್ಯೋಗಿಗಳಾಗಿದ್ದಾರೆ. ಈ ಸಮಾಜದಲ್ಲಿ ಜಮೀನು ಹೊಂದಿದವರು ಬಹಳ ಕಡಿಮೆ, ಸಣ್ಣ ರೈತರು ಬಹಳ ಕಡಿಮೆ ಇದ್ದಾರೆ.

ಗಾಣಿಗರ ನಿಗಮ ಸ್ಥಾಪನೆ, ವಿಶ್ವಕರ್ಮ ಯೋಜನೆಯಡಿ ಗಾಣಿಗರನ್ನು ಬಿಟ್ಟಿದ್ದರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸಮುದಾಯದ ಮುಖಂಡರು ಈಗ ನನ್ನಲ್ಲಿ ಮನವಿ ಮಾಡಿದ್ದಾರೆ. ನಿಮ್ಮ ಸಮಾಜಕ್ಕೆ ಸೇರಿದ ಪ್ರಧಾನಿಗಳಿಗೆ ನಿಮ್ಮ ಸಮಸ್ಯೆ ಗೊತ್ತಿದೆಯೋ? ಇಲ್ಲವೋ? ನನಗೆ ತಿಳಿದಿಲ್ಲ ಆದರೆ ನಾನು ಕೂಡಲೇ ಪತ್ರ ಬರೆಯುತ್ತೇನೆ.

ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಜಾತಿ ಗಣತಿ ವರದಿಯನ್ನು ವೈಜ್ಞಾನಿಕವಾಗಿ ಸಿದ್ಧ ಮಾಡಿದ್ದು, ವರದಿಯನ್ನು ಇನ್ನೂ ನಾವು ಸ್ವೀಕಾರ ಮಾಡಿಲ್ಲ. ವರದಿಯನ್ನು ಸ್ವೀಕರಿಸಲೆಂದೇ ಆಯೋಗದ ಅವಧಿಯನ್ನು 2 ತಿಂಗಳು ಮುಂದುವರೆಸಲಾಗಿದೆ. ವರದಿ ಬಂದ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು.

ರಾಜಶೇಖರ್ ಅವರಿಗೆ ಸಹಕಾರ ರತ್ನ ಎಂಬ ಬಿರುದು, ಲಕ್ಷ್ಮೀ ಪತಿ ಎನ್ನುವವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ರಾಧಾಕೃಷ್ಣ ಏಂಬುವವರಿಗೆ ರಾಜ್ಯ ರೈತ ಪ್ರಶಸ್ತಿ ನೀಡಿದೆ. ಸಮಾಜಿಕ ಕೆಲಸ ಮಾಡಿದವರನ್ನು ಗುರುತಿಸುವ ಕೆಲಸ ನಮ್ಮ ಸರ್ಕಾರ ಮಾಡಿದೆ. ಹೀಗೆಯೇ ಅದನ್ನು ನಾವು ಮುಂದುವರೆಸುತ್ತೇವೆ.

ವಿ.ಆರ್.ಸುದರ್ಶನ್ ಮತ್ತು ನಾನು ರಾಜಕೀಯ, ಹೋರಾಟ, ಸಾಮಾಜಿಕವಾಗಿ ಒಟ್ಟಿಗೆ ಇದ್ದವರು. ಅವರ ಹಾಗೂ ನಮ್ಮ ಮನಸ್ಥಿತಿ ಒಂದೇ ಇದೆ. ರೂಢಾನಂದಪುರಿ ಅವರು ಸ್ವಾಮೀಜಿಗಳಾದ ಮೇಲೆ ಇದೇ ಮೊದಲ ಬಾರಿಗೆ ವೇದಿಕೆ ಹಂಚಿಕೊಳ್ಳುತ್ತಿದ್ದೇನೆ. ನಾವು ಒಟ್ಟಿಗೆ ಹಿಂದುಳಿದ ಜಾತಿಗಳ ಸಮಸ್ಯೆ ಕುರಿತು ಚರ್ಚೆ ಮಾಡಿ, ಇತ್ಯರ್ಥ ಮಾಡಲು ಪ್ರಯತ್ನಿಸಿದವರು. ಅವರಲ್ಲಿ ಈ ಸಮಾಜವನ್ನು ಮುನ್ನಡೆಸುವ ಶಕ್ತಿ ಹೆಚ್ಚಾಗಲಿ ಎಂದು ಹಾರೈಸುತ್ತೇನೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page