ಹಿರಿಯೂರು :
ಸಮಾಜದಲ್ಲಿ ಶಿಕ್ಷಕರ ಹೊಣೆಗಾರಿಕೆ ಮಹತ್ತರವಾಗಿದ್ದು, ಈ ಹೊಣೆಗಾರಿಕೆಯನ್ನು ಸಮರ್ಥವಾಗಿ ಶಿಕ್ಷಕರು ನಿರ್ವಹಿಸುವಲ್ಲಿ ಮುಖ್ಯಶಿಕ್ಷಕರ ಪಾತ್ರ ಬಹಳಮುಖ್ಯ, ಸಂಸ್ಕಾರಯುತವಾದ ಶಿಕ್ಷಣವನ್ನು ಮಕ್ಕಳಿಗೆ ಕೊಡುವುದು ಅವಶ್ಯಕ ಮತ್ತು ಅನಿವಾರ್ಯವಾಗಿದೆ ಎಂಬುದಾಗಿ ಕೆಪಿಎಸ್ ಶಾಲೆಯ ಮಹಾಪೋಷಕ ನಾ.ತಿಪ್ಪೇಸ್ವಾಮಿ ಸಭೆಗೆ ಹೇಳಿದರು.
ತಾಲ್ಲೂಕಿನ ಹೊಸ ಎಳೆನಾಡು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ತಾಲ್ಲೂಕಿನ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢ ಶಾಲೆಗಳ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಎಂ.ತಿಪ್ಪೇಸ್ವಾಮಿ ಮಾತನಾಡಿ, ಮುಖ್ಯ ಶಿಕ್ಷಕರು ಮಾಹಿತಿಯನ್ನು ವಿಳಂಬ ಮಾಡದೆ ಬೇಗನೆ ನೀಡಬೇಕು ಮತ್ತು ಶಿಕ್ಷಣ ಇಲಾಖೆಯ ನಿಯಮಗಳು ಮತ್ತು ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಶಿಕ್ಷಣ ಇಲಾಖೆಗೆ ಮುಖ್ಯ ಶಿಕ್ಷಕರ ಸಹಕಾರ ಅತ್ಯಗತ್ಯವಾಗಿದೆ ಎಂಬುದಾಗಿ ಹೇಳಿದರು.
ಈ ಸಭೆಯಲ್ಲಿ ಕ್ಷೇತ್ರ ಸಂಪನ್ಮೂಲ ಅಧಿಕಾರಿ ತಿಪ್ಪೇ ರುದ್ರಪ್ಪ, ಎಸ್.ಡಿ.ಎಂ.ಸಿ ಅಧ್ಯಕ್ಷ ತಿಮ್ಮಾಶೆಟ್ಟಿ, ಪ್ರಾಂಶುಪಾಲ ತಿಪ್ಪೇಸ್ವಾಮಿ, ನಾಗರಾಜ ಆಚಾರ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ನಾಗ್ಯನಾಯ್ಕ, ಜಿಲ್ಲಾ ಅನುದಾನಿತ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಕಾರ್ಯದರ್ಶಿ ಮಂಜುನಾಥ್, ಸೇರಿದಂತೆ ಶಿಕ್ಷಣ ಇಲಾಖೆಯ ಇಸಿಓಗಳು ಮತ್ತು ಬಿಆರ್.ಪಿಗಳು ಉಪಸ್ಥಿತರಿದ್ದರು.
ಸಮಾಜದಲ್ಲಿ ಶಿಕ್ಷಕರ ಹೊಣೆಗಾರಿಕೆ ಮಹತ್ತರವಾಗಿದೆ ಕೆಪಿಎಸ್ ಶಾಲೆಯ ಮಹಾಪೋಷಕ ನಾ.ತಿಪ್ಪೇಸ್ವಾಮಿ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments