ಚಳ್ಳಕೆರೆ ಸೆ.5. ಸಮಾಜದ ಸರ್ವತೋಮುಖ ಪ್ರಗತಿಗೆ ಶಿಕ್ಷಣ ಅನಿವಾರ್ಯವಾಗಿದ್ದು ಶಿಕ್ಷಕ ಸಮುದಾಯ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮೌಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ಆದರ್ಶ ವಿದ್ಯಾರ್ಥಿಗಳನ್ನು ರೂಪಿಸುವತ್ತ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಶಾಸಕ ಟಿ.ರಘುಮೂರ್ತಿ ಕಿವಿಮಾತು ಹೇಳಿದರು.
ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಭಾವಚಿತ್ರಕ್ಕೆ ಪುಷ್ಪ ನಮನ ಹಾಗೂ ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು. ರಾಜಕಾರಣಿಯಿಂದ ಹಿಡಿದು ಕೂಲಿ ಮಾಡುವವರರಿಗೂ ಅವರ ಭವಿಷ್ಯದಲ್ಲಿ ಶಿಕ್ಷಕರ ಪ್ರಮುಖ ಪಾತ್ರ ನಿರ್ವಹಿಸಿರುತ್ತಾರೆ ಶಿಕ್ಷಕರಿಲ್ಲದಿದ್ದರೆ ಯಾರ ಜೀವನವೂ ಊಹಿಸಿಕೊಳ್ಳಲು ಸಾಧ್ಯವಿಲ್ಲ ಒಬ್ಬ ವಿದ್ಯಾರ್ಥಿ ದುಷ್ಟನಾದರೆ ಕೇವಲ ಅವನ ಜೀವನ ಹಾಳಾಗುತ್ತದೆ ಆದರೆ ಒಬ್ಬ ಶಿಕ್ಷಕ ದುಷ್ಟನಾದರೆ ಇಡೀ ವಿದ್ಯಾರ್ಥಿ ಸಮೂಹವೆ ಹಾಳಾಗುತ್ತದೆ ಹಾಗಾಗಿ ಶಿಕ್ಷಕರು ತಮ್ಮ ವೃತ್ತಿಯನ್ನು ಗೌರವಿಸಿ ಕಾರ್ಯನಿರ್ವಹಿಸಬೇಕಾಗಿದೆ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಅವರನ್ನು ಉತ್ತಮ ಫಲಿತಾಂಶ ಬರುವಂತೆ ಓದಿನಲ್ಲಿ ಪ್ರೇರೇಪಿಸಿದಾಗ ಉತ್ತಮ ಶಿಕ್ಷಕರಾಗಲು ಸಾಧ್ಯವಾಗುತ್ತದೆ ವಿದ್ಯಾರ್ಥಿಯ ಭವಿಷ್ಯ ರೂಪಿಸಿದಂತಾಗುತ್ತದೆ.
ಚಳ್ಳಕೆರೆ ಕ್ಷೇತ್ರ ಅತ್ಯಂತ ಕಡಿಮೆ ಮಳೆ ಬೀಳುವ ಪ್ರದೇಶ ಬರದ ನಾಡು ಎಂದು ಹೆಸರು ಪಡೆದಿದ್ದರು ಶಿಕ್ಷಣ ಕ್ಷೇತ್ರದಲ್ಲಿ ಉತ್ತುಂಗ ಸ್ಥಾನದಲ್ಲಿದೆ ಇದಕ್ಕೆ ಸಾಕ್ಷಿ ಎಂಬಂತೆ 2022 -23ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಜಿಲ್ಲೆ ಮೊದಲ ಸ್ಥಾನ ಪಡೆದು ತಾಲೂಕು ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ ಶಿಕ್ಷಕರ ಬೇಡಿಕೆಗಳನ್ನು ಸರ್ಕಾರ ಈಡೇರಿಸಲು ಬದ್ಧವಾಗಿದೆ ಎಂದು ತಿಳಿಸಿದರು.
ನಿವೃತ್ತ ಉಪನ್ಯಾಸಕ ರಾಮಚಂದ್ರಪ್ಪ ಮಾತನಾಡಿ ಚಳ್ಳಕೆರೆ ತಾಲೂಕು ಬುಡಕಟ್ಟು ಸಮುದಾಯದ ಜನರು ವಾಸಿಸುವ ಪ್ರದೇಶವಾಗಿದ್ದು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದೆ ದೇಶದಲ್ಲಿ ಇಂದು ಪ್ರಜಾಪ್ರಭುತ್ವ ಸಂವಿಧಾನ ರಾಷ್ಟ್ರೀಯ ಭ್ರಾತೃತ್ವ ಉಳಿದಿದೆ ಎಂದರೆ ಅದಕ್ಕೆ ಶಿಕ್ಷಕರ ಕೊಡುಗೆಯಿಂದ ಆಗಿದೆ ದೇಶದಲ್ಲಿ ಗುರುಕುಲ ಶಿಕ್ಷಣ ಪದ್ಧತಿಯನ್ನು ತರಲು ಹೊರಟಿದ್ದು ಶಿಕ್ಷಣದಲ್ಲಿ ಹಿಂದೆ ಉಳಿಯಲು ಪ್ರಮುಖ ಕಾರಣವಾಗುತ್ತಿದೆ ಎಲ್ಲಾ ದೇಶಗಳು ಶಿಕ್ಷಣದಲ್ಲಿ ಮುಂದುವರೆದರೆ ನಮ್ಮ ದೇಶ ಹಿಂದಿನ ಪದ್ದತಿಗೆ ಮರಳುತ್ತಿರುವುದು ವಿಷಾದನೀಯವಾಗಿದೆ ವಿದ್ಯಾರ್ಥಿಗಳಲ್ಲಿ ಪ್ರಶ್ನೆ ಮಾಡುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬೆಳೆಸುವ ಜವಾಬ್ದಾರಿ ಶಿಕ್ಷಕರದ್ದಾಗಿದೆ ಶಿಕ್ಷಕರು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಆದರ್ಶಗಳನ್ನು ಮೈಗೂಡಿಸಿಕೊಂಡು ದೇಶಕ್ಕೆ ಉತ್ತಮ ಪ್ರಜೆಗಳನ್ನು ರೂಪಿಸುವ ಜವಾಬ್ದಾರಿಯನ್ನು ಹೊರಬೇಕಾಗಿದೆ ಎಂದು ಕರೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಸುರೇಶ್ ಮಾತನಾಡಿ ಚಳ್ಳಕೆರೆ ತಾಲೂಕು ಅತ್ಯಂತ ಹಿಂದುಳಿದ ತಾಲೂಕುಗಳಲ್ಲಿ ಒಂದಾಗಿದ್ದು ಶಿಕ್ಷಕರ ಪರಿಶ್ರಮದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಳೆದ ವರ್ಷ ಶೇಕಡ 98.20 ಉತ್ತಮ ಫಲಿತಾಂಶ ಪಡೆಯಲು ಸಹಕಾರಿಯಾಯಿತು ಈ ಫಲಿತಾಂಶ ಮುಂದುವರಿಯಲು ಈಗಿಂದಲೇ ಶಿಕ್ಷಕರು ಸನ್ನದ್ಧರಾಗಿ ಕಾರ್ಯಪ್ರವೃತ್ತರಾಗಬೇಕು ಶಿಕ್ಷಕರಾದವರಿಗೆ ಸವಾಲುಗಳನ್ನು ಎದುರಿಸುವ ಧೈರ್ಯವಿರಬೇಕುತಾಳ್ಮೆ ಸಂಯಮವನ್ನು ಮೈಗೂಡಿಸಿಕೊಂಡಾಗ ಮಾತ್ರ ಉತ್ತಮ ಶಿಕ್ಷಕರಾಗಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ತಾ ಪಂ ಇಓ ಹಾಗೂ ಶಿಕ್ಷರ ದಿನಾಚರಣೆ ಸಮಿತಿಅಧ್ಯಕ್ಷ ಹೊನ್ನಯ್ಯ ಮಾತನಾಡಿದರು.
ಈ ವೇಳೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಜೆ ರಾಘವೇಂದ್ರ ಸದಸ್ಯರಾದ ರಮೇಶ್ ಗೌಡ .ಸುಮಕ್ಕ .ಸಾವಿತ್ರಮ್ಮ .ಕವಿತಾ . ಪ್ರಾಂಶುಪಾಲ ಎಂ ರವೀಶ್ ಕುಮಾರ್ .ನೌಕರರ ಸಂಘದ ಅಧ್ಯಕ್ಷ ಲಿಂಗೇಗೌಡ ಜಿ ಟಿ .ಕಾಸಪಾ ಅಧ್ಯಕ್ಷ ವೀರಭದ್ರ ಸ್ವಾಮಿ. ಎಸ್ ತಿಪ್ಪೇಸ್ವಾಮಿ ಪಾಲಯ್ಯ .ಶ್ರೀನಿವಾಸ್ .ಸಿಟಿ ವೀರೇಶ್. ರಾಜ್ ಕುಮಾರ್. ಸೇರಿದಂತೆ ಶಿಕ್ಷಕ ವರ್ಗ ಉಪಸ್ಥಿತರಿದ್ದರು. ಕಾರ್ಯಕ್ರಮ ಮುನ್ನ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಹಾಲು.ಬ್ರೆಡ್ ವಿತರಣೆ ಮಾಡಿದರು. ಪ್ರವಾಸಿ ಮಂದಿರದಿಂದ ತೆರೆದ ವಾಹನದಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಭಾವಚಿತ್ರದೊಂದಿ ವಿವಿಧ ಕಲಾ ತಂಡ .ವಾಧ್ಯಮೇಳದೊಂದಿಗೆ ಪ್ರಮುಖ ರಸ್ತೆಯಲ್ಲಿ ಕಾರ್ಯಕ್ರಮದ ವೇಧಿಯತ್ತ ಹೊರಟರು ಮೆರವಣಿಗೆಯಲ್ಲಿ ಶಿಕ್ಷಕರು ಕುಣಿದು ಕುಪ್ಪಳಿಸಿದರು.
0 Comments