ಸರಕಾರಿ ಭೂಮಿಯಲ್ಲಿ ಅಕ್ರಮ ಖಾತೆ, ತೆರಿಗೆ ಹಣ ಬ್ಯಾಂಕ್ ಖಾತೆಗೆ ಜಮ ಮಾಡದೆ ದುರುಪಯೋಗ ತನಿಖೆ ನಡೆಸಿವಂತೆ ಗ್ರಾಮಸ್ಥರ ದೂರು.

by | 20/02/23 | ತನಿಖೆ ವರದಿ

ಚಳ್ಳಕೆರೆ ಜನಧ್ವನಿ ವಾರ್ತೆ ಫೆ.20.
ತೆರಿಗೆ ಸಂಗ್ರಹ ಹಣ ಹಾಗೂ ನರೇಗಾ ಕಾಮಗಾರಿಗಳ ಬೋರ್ಡ್ ಹಣ ದುರುಪ, ಅಕ್ರಮ ಖಾತೆ ಮಾಡಿರುವ ಪಿಡಿಒ ವಿರುದ್ದ ಕ್ರಮ ಕೈಗೊಳ್ಳುವಂತೆ ಗ್ರಾಪಂ ಸದ್ಯರು ದೂರು ನೀಡಿದ್ದಾರೆ.
ತಾಲೂಕಿನ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಗೌರಸಮುದ್ರ ಗ್ರಾಪಂ ಕಚೇರಿ ವ್ಯಾಪ್ತಿಯಲ್ಲಿ ಸಾರ್ವಜನಿಕರಿಂದ ಮೇ ೨೦೨೨ ರಿಂದ ಇಲ್ಲಿಯವರೆಗೆ ವಸೂಲಿ ಮಾಡಿದ ತೆರಿಗೆ ಹಣವನ್ನು ಬ್ಯಾಂಕ್ ಖಾತೆಗೆ ಜಮ ಮಾಡದೆ ಹಣ ದುರುಪಯೋಗ ಹಾಗೂ ನರೇಗಾ ಯೋಜನೆಯಡಿಲ್ಲಿ ಕೃಷಿಹೊಂಡ, ಜಾನುವಾರು ಶೆಡ್, ಚೆಕ್ ಡ್ಯಾಂ ಸೇರಿದಂತೆ ವಿವಿಧ ಕಾಮಗಾರಿಗಳ ಫಲಾನುಭವಿಗಳಿಗೆ ಹಣ ನೀಡಿದೆ ಬಿಡಿಸಿಕೊಂಡು ದುರುಪಯೋಗ ಮಾಡಿಕೊಂಡಿದ್ದಾರೆ.
ಗೌರಸಮುದ್ರ ಗ್ರಾಪಂ ವ್ಯಾಪ್ತಿಗೆ ಸೇರಿದ ಓಬಣ್ಣನಹಳ್ಳಿ ಬೆಲ್ದಾರಹಟ್ಟಿ ಗ್ರಾಮದಲ್ಲಿ ಸರಕಾರಿ ರಿ.ಸ.ನಂ ನಲ್ಲಿ ಬರುವ ಸರಕಾರಿ ಜಮೀನಿನಲ್ಲಿ ಕಾನೂನುಬಾಹಿರವಾಗಿ ಅಕ್ರಮವಾ ಸುಮಾರು ೪೦ ರಿಂದ ೫೦ ಖಾತೆಗಳನ್ನು ಹಂಗಾಮಿ ಖಾತೆಗಳೆಂದು ಮಾಡಿ ಅಕ್ರಮ ಖಾತೆಯಿಂದ ವಸೂಲಿಯಾದ ಕಂದಾಯ ಹಣವನ್ನು ಸಹ ದುರುಪಯೋಗ ಮಾಡಿಕೊಂಡಿದ್ದಾರೆ.
ನರೇಗಾ ಬೋರ್ಡ್ ಹಣ ಬಿಡಿಸಿಕೊಂಡು ಫಲಾನುಭವಿಗಳಿಗೆ ನೀಡದೆ ದುರುಪಯೋಗ ಹಾಗೂ ಗ್ರಾಮಗಳ ಅಭಿವೃದ್ಧಿಗೆಂದು ಸಾರ್ವಜನಿಕರಿಂದ ವಸೂಲಿಯಾದ ಹಣವನ್ನು ಬ್ಯಾಂಕ್ ಖಾತೆಗೆ ಜಮ ಮಾಡದೆ ಹಣ ಖರ್ಚು ಮಾಡಿರುವುದರಿಂದ ಕೂಡಲೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಬಂಜಣ್ಣ, ಸಿದ್ದಪ್ಪ, ಮಾರಣ್ಣ, ಮಂಜುನಾಥ, ಕುಮಾರ್, ತಿಪ್ಪೇಸ್ವಾಮಿ , ಪ್ರಕಾಶ್, ಜೆ.ಬಿ. ಮಾರಣ್ಣ, ಈರಣ್ಣ, ಇತರರ ತಾಲೂಕು ಪಂಚಾಯತ್ ಕಾರ್ಯಾಲಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಪಿಡಿಒ ಕರ‍್ಲಯ್ಯ ಮಾತನಾಡಿ ನಾನು ತೆರಿಗೆ ಹಣವವನ್ನು ವೈಯುಕ್ತಿಕ ಹಾಗೂ ಸ್ವಂತ ಉದ್ದೇಶಕ್ಕೆ ಬಳಕೆ ಮಾಡಿಕೊಂಡಿಲ್ಲ ಗ್ರಾಮದ ಅಭಿವೃದ್ಧಿಗೆ ಬಳಕೆ ಮಾಡಿಕೊಳ್ಳಲಾಗಿದೆ ಆದ್ದರಿಂದ ಬ್ಯಾಂಕ್ ಖಾತೆಗೆ ಜಮ ಮಾಡಲು ಸಾಧ್ಯವಾಗಿಲ್ಲ ನರೇಗಾ ಕಾಮಗಾರಿ ನಾಫಲಕ ಬೋರ್ಡ್ ಹಣವನ್ನು ವೆಂಡರ್ ಮೂಲಕ ಫಲಾನುಭವಿಗಳಿಗೆ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page