ಸರಕಾರಿ ಸಿಮ್ ಬಳಕೆ ಮಾಡದೆ ಪಿಡಿಒಗಳು-ಸಾರ್ವಜನಿಕರ ಆರೋಪ.

by | 25/05/24 | ಜನಧ್ವನಿ


ಚಳ್ಳಕೆರೆ ಮೇ 25 ಸಾರ್ವಜನಿಕರಿಗೆ ಸೇವೆ ನೀಡಲು ಅನುಕೂಲವಾಗಲಿ ಎಂಬ ಉದ್ದೇಶಕ್ಕಾಗಿ ಸರಕಾರ ನೀಡಿದ ಸಿಮ್ ಗಳನ್ನು ಪಿಡಿಒಗಳು ಬಳಸುತ್ತಿಲ್ಲ. ಇದರಿಂದ ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಹೌದು ಇದು ಚಳ್ಳಕೆರೆ ತಾಲೂಕಿನ 40 ಗ್ರಾ.ಪಂ. ಪಿಡಿಒ ಗಳಿಗೆ ಉಚಿತವಾಗಿ ನೀಡಿದ ಮೊಬೈಲ್‌ ಸಿಮ್ ಬದಲಿಗೆ ಖಾಸಗಿ ಮೊಬೈಲ್ ಸಿಮ್ ಬಳಸುತ್ತಿರುವುದರಿಂದ ಯಾರನ್ನು ಸಂಪರ್ಕಿಸಬೇಕೆಂಬುದು ತಿಳಿಯದಂತಾಗಿದೆ.

2010-11 ನೇ ಸಾಲಿನಲ್ಲಿ ಪಂಚಾಯತ್‌ ರಾಜ್‌ ಇಲಾಖೆಯು ಪ್ರತಿ ಪಿಡಿಒಗಳಿಗೆ ಬಿಎಸ್ಸೆನ್ನೆಲ್‌ ನಂಬರನ್ನು ನೀಡಲಾಗಿತ್ತು. ಸಾರ್ವಜನಿಕರ ಹಾಗೂ ಮೇಲಧಿಕಾರಿಗಳ ಸಂಪರ್ಕಕ್ಕೆ ಅನುಕೂಲವಾಗಲಿ ಎಂಬುದು ಇದರ ಉದ್ದೇಶವಾಗಿತ್ತು. ಮೊಬೈಲ್‌ ಸಿಮ್ ನೀಡಿದಾಗಲೇ ಯಾರೂ ಸ್ವಿಚ್ಡ್‌ ಆಫ್‌ ಮಾಡಬಾರದು, 24 ಗಂಟೆಗಳ ಕಾಲ ಫೋನ್‌ ಚಾಲನೆಯಲ್ಲಿಡಬೇಕು ಎಂದು ತಿಳಿಸಿತ್ತು. ಆದರೆ ಕೆಲವು ಪಿಡಿಒಗಳು ಸರಕಾರ ನೀಡಿದ ಬಿಎಸ್ಸೆನ್ನೆಲ್‌ ನಂಬರ್‌ನ್ನು ಬಳಸದೇ ರದ್ದಾಗಿದ್ದು ಆ ನಂಬರ್ ಬೇರೆಯವರಿಗೆ ಹೋಗಿದೆ ಖಾಸಗಿ ನಂಬರ್‌ಗಳನ್ನು ಬಳಸುತ್ತಿದ್ದಾರೆ. ಹೀಗಾಗಿ, ಪಿಡಿಒಗಳನ್ನು ಅಗತ್ಯವಿದ್ದಾಗ ಸಂಪರ್ಕಿಸುವುದು ಸಾರ್ವಜನಿಕರಿಗೆ ತಲೆನೋವಾಗಿದೆ.

ಸಿಮ್ ಬಳಕೆ ಮಾಡಿದ ಗ್ರಾಪಂ.

ಮೈಲನಹಳ್ಳಿ, ಘಟಪರ್ತಿ, ದೇವರೆಡ್ಡಹಳ್ಳಿ, ತಿಮ್ಮಪ್ಪಯನಹಳ್ಳಿ, ಮಲ್ಲೂರಹಳ್ಳಿ, ಗೌಡಗೆರೆ, ನನ್ನಿವಾಳ, ಅಬ್ಬೇನಹಳ್ಳಿ, ಮನ್ನೇಕೋಟೆ, ಓಬಳಾಪುರ, ರೇಣುಕಾಪುರ, ಗೋಪನಹಳ್ಳಿ ಒಟ್ಟು 14 ಗ್ರಾಪಂ ಪಿಡಿಒಗಳು ಸರಕಾರಿ ಸಿಮ್ ಬಳಕೆ ಮಾಡದೆ ದೂರ ಉಳಿದಿರುವ ಬಗ್ಗೆ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಸಂದೇಶ ಕೇಳಿ ಸುಸ್ತು: ಯಾವಾಗ ಕರೆ ಮಾಡಿದರೂ ಚಂದಾದಾರರು ವ್ಯಾಪ್ತಿ ಪ್ರದೇಶದಿಂದ ಹೊರಗಿದ್ದಾರೆ. ನೀವು ಕೆರೆ ಮಾಡಿದ ಸಂಖ್ಯೆ ಇನ್ ವ್ಯಾಲಿಡ್ ಆಗಿದೆ ಸ್ವಲ್ಪ ಸಮಯದ ನಂತರ ಕರೆ ಮಾಡಿ ಎಂಬ ಸಂದೇಶ ಬರುತ್ತಿದೆ. ಇನ್ನು ಕೆಲವು ಸಿಮ್ ಬೇರೆಯವರಿಗೆ ಹೋಗಿವೆ ಇದನ್ನು ಕೇಳಿ ಕೇಳಿ ಸಾರ್ವಜನಿಕರು ಸುಸ್ತಾಗುತ್ತಿದ್ದಾರೆ. ದಿನಪೂರ್ತಿ ಕರೆ ಮಾಡಿದಾಗಲೂ ಇದೇ ಸಂದೇಶ ಕೇಳಿದ ಕೆಲವರು ಪಿಡಿಒಗಳ ಮೇಲೆ ಅಸಮದಾನಕ್ಕೆ ಕಾರಣವಾಗಿದೆ.

.ಇನ್ನಾದರೂ ಮೇಲಧಿಕಾರಿಗಳು ಇತ್ತಕಡೆ ಗಮನಹರಿಸಬೇಕು. ಪಿಡಿಒಗಳು ಸಕರಿ ಸಿಮ್ ದೂರವಾಣಿ ಮೂಲಕ ಸಾರ್ವಜನಿಕ ಸಂಪರ್ಕಕ್ಕೆ ಸಿಗಲು ಅವಕಾಶ ಮಾಡಿಕೊಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page