ಸರ್ಕಾರದ ಕೆಲಸವನ್ನು ದೇವರ ಕೆಲಸವೆಂದು ಕಾರ್ಯ ನಿರ್ವಹಿಸುವ ಅಧಿಕಾರಿಗಳು ಅಪರೂಪವಾಗಿದ್ದಾರೆ: ಶಿಕ್ಷಕ ಎನ್ ಮಲ್ಲೇಶ್ ಅಭಿಮತ 

by | 14/05/24 | ಸುದ್ದಿ

ಚಳ್ಳಕೆರೆ: ಸರ್ಕಾರದ ಕೆಲಸವನ್ನು ದೇವರ ಕೆಲಸವೆಂದು ಕಾರ್ಯ ನಿರ್ವಹಿಸುವ ಅಧಿಕಾರಿಗಳು ಇತ್ತೀಚಿನ ದಿನಗಳಲ್ಲಿ ಸಿಗುವುದು ಅಪರೂಪವಾಗಿದೆ ಆದರೆ ಚಿತ್ರದುರ್ಗ ಜಿಲ್ಲಾ ಉಪ ನಿರ್ದೇಶಕರ ಕಚೇರಿಯಲ್ಲಿ ಪತ್ರಾಂಕಿತ ಸಹಾಯಕರಾಗಿ ಜನಾನುರಾಗಿಯಾಗಿ ಧನಂಜಯ ಟಿ ಎನ್ ರವರು ಉತ್ತಮ ಕೆಲಸ ನಿರ್ವಹಿಸಿದ್ದರು ಎಂದು ಶಿಕ್ಷಕ ಎನ್ ಮಲ್ಲೇಶ್ ಅಭಿಪ್ರಾಯ ಪಟ್ಟರು. 

ಟಿ ಎನ್ ಧನುಜಯರವರ ನಿವೃತ್ತಿಯ ಹಿನ್ನೆಲೆಯಲ್ಲಿ ನಗರದ ವಿಠಲ ನಗರದಲ್ಲಿರುವ ಅವರ ನಿವಾಸಕ್ಕೆ ಸ್ನೇಹ ಬಳಗದ ವತಿಯಿಂದ ತೆರಳಿ ಶುಭಾಶಯ ಕೋರಿ ಮಾತನಾಡಿದ ಅವರು ಧನಂಜಯ ರವರು ಉತ್ತಮ ಕೆಲಸಗಾರರಾಗಿದ್ದರು ಶಿಕ್ಷಕರಿಗೆ ಜಿಲ್ಲಾ ಮಟ್ಟದಲ್ಲಿ ಯಾವುದೇ ಕೆಲಸ ಕಾರ್ಯಗಳಾಗಬೇಕಾದರೆ ಅವರು ತಮ್ಮ ಕೆಲಸಗಳ ಒತ್ತಡದ ನಡುವೆಯೂ ದೂರದ ಊರುಗಳಿಂದ ಬಂದಿದ್ದಾರೆ ಎಂಬ ಸದುದ್ದೇಶವನ್ನು ಇಟ್ಟುಕೊಂಡು ತ್ವರಿತಗತಿಯಲ್ಲಿ ತಮ್ಮದಲ್ಲದ ಕೆಲಸವಾಗಿದ್ದರು ಸಹ ಸ್ವತಹ ತಾವೇ ಮುಂದೆ ನಿಂತು ಶಿಕ್ಷಕರ ಕೆಲಸ ಕಾರ್ಯಗಳನ್ನು ಸಮಸ್ಯೆಗಳನ್ನು ಬಗೆಹರಿಸಿ ಉತ್ತಮ ಸ್ನೇಹಜೀವಿಯಾಗಿ ಶಿಕ್ಷಕ ವರ್ಗದಲ್ಲಿ ಗುರುತಿಸಿಕೊಂಡಿದ್ದರು. ಇವರ ನಿವೃತ್ತಿಯ ಜೀವನ ಸುಖಮಯವಾಗಿ ಸಂತೋಷದಿಂದ ಕೂಡಿರಲಿ ಕುಟುಂಬದೊಂದಿಗೆ ಸದಾ ಹಸನ್ಮುಖಿಯಾಗಿ ಜೀವನ ನಡೆಸುವಂತಾಗಲಿ ಎಂದು ಶುಭ ಹಾರೈಸಿದರು. 

ಸಂಜೀವಿನಿ ಲ್ಯಾಬ್ ನ ಎಂ ಎನ್ ಮೃತ್ಯುಂಜಯ ಮಾತನಾಡಿ ಶಿಕ್ಷಣ ಇಲಾಖೆಯಲ್ಲಿ ಕೆಲಸ ನಿರ್ವಹಿಸುವುದು ಸುಲಭದ ಕೆಲಸವಲ್ಲ ಸದಾ ಒಂದಿಲ್ಲೊಂದು ಒತ್ತಡದಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ ಧನಂಜಯ ರವರು ಪತ್ರಾಂಕಿತ ಅಧಿಕಾರಿಯಾಗಿ ಶಿಸ್ತುಬದ್ದವಾದ ಹಾಗೂ ಸ್ನೇಹ ಪರವಾದ ಕೆಲಸ ನಿರ್ವಹಿಸಿರುವುದು ಶಿಕ್ಷಕರುಗಳ ಮಾತಿನಿಂದಲೇ ತಿಳಿಯುತ್ತದೆ ಅಧಿಕಾರಿ ವರ್ಗದವರು ಕೆಳಹಂತದ ಸಿಬ್ಬಂದಿಗಳನ್ನು ತಮ್ಮ ಮನೆಯವರಂತೆ ನೋಡಿಕೊಂಡು ಉತ್ತಮ ಕೆಲಸಗಳನ್ನು ಮಾಡಿದಾಗ ಮಾತ್ರ ಇಂತಹ ಗೌರವ ಪಡೆಯಲು ಸಾಧ್ಯವಾಗುತ್ತದೆ ಅವರ ಜೀವನ ಕುಟುಂಬದೊಂದಿಗೆ ಸದಾ ಸಂತಸದಾಯಕವಾಗಿರಲಿ ಎಂದು ಹಾರೈಸಿದರು. 

ಈ ವೇಳೆ ಮಾತನಾಡಿದ ಶಿಕ್ಷಣ ಇಲಾಖೆ ನಿವೃತ್ತ ಪತ್ರಾಂಕಿತ ಅಧಿಕಾರಿ ಧನಂಜಯ ಶಿಕ್ಷಣ ಇಲಾಖೆಯಲ್ಲಿ ನನ್ನ ಸೇವೆಯನ್ನು ಪ್ರಾಮಾಣಿಕತೆಯಿಂದ ಮಾಡಿಕೊಂಡು ಬಂದಿದ್ದೇನೆ ಶಿಕ್ಷಣ ಇಲಾಖೆಯ ಹಿರಿಯ ಹಾಗೂ ಕಿರಿಯ ಅಧಿಕಾರಿ ವರ್ಗದವರು ಹಾಗೂ ಶಿಕ್ಷಕ ವರ್ಗದ ಸಹಕಾರದಿಂದಾಗಿ ನಾನು ಉತ್ತಮವಾಗಿ ಕೆಲಸ ನಿರ್ವಹಿಸಲು ಸಾಧ್ಯವಾಯಿತು ನನ್ನನ್ನು ಸನ್ಮಾನಿಸಿದ ಸ್ನೇಹ ಬಳಗಕ್ಕೆ ಹೃದಯಪೂರ್ವಕವಾಗಿ ಅಭಿನಂದನೆ ತಿಳಿಸುತ್ತೇನೆ ಎಂದರು. 

ಈ ಸಂದರ್ಭದಲ್ಲಿ ಶಿಕ್ಷಕ ಎನ್ ಮಲ್ಲೇಶ್ ಸಂಜೀವಿನಿ ಲ್ಯಾಬ್ ಎಂಎಂ ಮೃತ್ಯುಂಜಯ ಶಿಕ್ಷಕ ಹೆಚ್ ರವಿಕುಮಾರ್ ಜಿ ಚಂದ್ರಣ್ಣ, ಚಂದ್ರು ಕುಂದಾಪುರ ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page