ಸರ್ಕಾರದ ಸವಲತ್ತುಗಳು ಪಡೆಯಬೇಕೆಂದರೆ ಫಲಾನುಭವಿಗಳು ಎನ್‌.ಪಿ.ಸಿ.ಐ. ಬ್ಯಾಂಕಿನಲ್ಲಿ ಕಡ್ಡಾಯವಾಗಿ ಮಾಡಿಸಬೇಕು ಇಲ್ಲವಾದಲ್ಲಿ ನಿಮಗೆ ಪಿಂಚಣಿ ಸೌಲಭ್ಯ ಸಿಗುವುದಿಲ್ಲ. ಎಂದು ಚಿತ್ರದುರ್ಗ ಜಿಲ್ಲೆಯ ಉಪ ವಿಭಾಗದ ಅಧಿಕಾರಿಯಾದ ಕಾರ್ತಿಕ್

by | 31/08/23 | ಆರ್ಥಿಕ


ನಾಯಕನಹಟ್ಟಿ ಆ.31: ಯಾವುದೇ ಸರ್ಕಾರದ ಸವಲತ್ತುಗಳು ಪಡೆಯಬೇಕೆಂದರೆ ಫಲಾನುಭವಿಗಳು ಎನ್‌.ಪಿ.ಸಿ.ಐ. ಬ್ಯಾಂಕಿನಲ್ಲಿ ಕಡ್ಡಾಯವಾಗಿ ಮಾಡಿಸಬೇಕು ಇಲ್ಲವಾದಲ್ಲಿ ನಿಮಗೆ ಪಿಂಚಣಿ ಸೌಲಭ್ಯ ಸಿಗುವುದಿಲ್ಲ. ಎಂದು ಚಿತ್ರದುರ್ಗ ಜಿಲ್ಲೆಯ ಉಪ ವಿಭಾಗದ ಅಧಿಕಾರಿಯಾದ ಕಾರ್ತಿಕ್ ಹೇಳಿದರು.

ಪಟ್ಟಣದ ನಾಡಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಪಿಂಚಣಿ ಅದಲತ್ ಫಲಾನುಭವಿಗಳಿಗೆ ಆದೇಶ ಪತ್ರವನ್ನು ವಿತರಿಸಿ ನಂತರ ಮಾತನಾಡಿದ ಅವರು. ನಿಮ್ಮ ಕುಟುಂಬದ ತಂದೆ ತಾಯಿ ಇಬ್ಬರೂ ಮರಣ ಹೊಂದಿದ ಪಕ್ಷದಲ್ಲಿ ಅವರ ವಾರಸುದಾರರಾದ ಸಂದರ್ಭದಲ್ಲಿ ಮಕ್ಕಳಿಗೆ ಪೌತಿ ಖಾತೆ ಮಾಡಿಸಲಾಗುತ್ತದೆ ಎಂದು ಅವರು ತಿಳಿಸಿದರು .

ಪಿಂಚಣಿ ಪಡೆಯುವಂತ ಫಲಾನುಭವಿಗಳು ನಿಮ್ಮ ಸಮಸ್ಯೆಗಳು ಏನಾದರೂ ಇದ್ದರೆ ತಿಳಿಸಿ ಸ್ಥಳದಲ್ಲಿ ಕೆಲಸ ಮಾಡಲಾಗುತ್ತದೆ. ಎಂದು ಅವರು ಮಾತನಾಡಿದರು.
ಚಳ್ಳಕೆರೆ ತಹಸಿಲ್ದಾರ್ ರೇಹಾನ್ ಪಾಷ ಮಾತನಾಡಿ ನಿಮ್ಮ ಊರಿನ ಅಕ್ಕಪಕ್ಕದ ತೃತೀಯ ಲಿಂಗಗಳು ಇದ್ದರೆ ತಿಳಿಸಿ ಸ್ಥಳದಲ್ಲೇ ಆದೇಶ ಪತ್ರವನ್ನು ಕೊಡಲಾಗುತ್ತದೆ ಎಂದು ಅವರು ತಿಳಿಸಿದರು.

ನಾಯಕನಹಟ್ಟಿ ಹೋಬಳಿಯಲ್ಲಿ 9413 ಪಿಂಚಣಿಯನ್ನು ಫಲಾನುಭವಿಗಳು ಪಡೆಯುತ್ತಿದ್ದಾರೆ. ಸರ್ಕಾರದ ಆದೇಶದಂತೆ ಪ್ರತಿ ತಿಂಗಳಿಗೊಮ್ಮೆ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಿಂಚಣಿ ಅದಾ ಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.

ಸಾಮಾಜಿಕ ಭದ್ರತೆ ಯೋಜನೆಗಳ ಫಲಾನುಭವಿಗಳು ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ಕೆಎಮ್ ಶಿವ ಸ್ವಾಮಿ ಉಪ ತಹಸೀಲ್ದಾರ್ ಶಕುಂತಲಾ ಬಿ ಕಂದಾಯ ಇಲಾಖೆಯ ಉಪನಿರೀಕ್ಷಕರಾದ ಚೇತನ್ ಕುಮಾರ್, ಗ್ರಾಮದ ಆಡಳಿತ ಅಧಿಕಾರಿಯಾದಂತ ಹರೀಶ್, ರವಿ, ಜೈರಾಮ್, ಜಗದೀಶ್, ಶಂಕರ್, ಪುಷ್ಪಲತ, ಗ್ರಾಮ ಸಹಾಯಕರಾದ ತಿಮ್ಮಪ್ಪಯ್ಯನಳ್ಳಿ ಹರೀಶ್, ಕುಮಾರ್, ಓಬಣ್ಣ, ಚನ್ನಬಸವ, ಹೇಮಂತ್ ನಾಯಕ್, ನಾಗರಾಜ್, ತಿಮ್ಮಣ್ಣ, ಓಬಣ್ಣ. ತಿಪ್ಪೇಸ್ವಾಮಿ, ಆಧಾರ್ ಕಾರ್ಡ್ ಕಂಪ್ಯೂಟರ್ ಆಪರೇಟರ್ ವೀರೇಶ್ ಹಾಗೂ ನಾಡಕಚೇರಿಯ ಸಿಬ್ಬಂದಿಗಳು ಇನ್ನಿತರರು ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page