ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಹಾಗೂ ಸ್ನಾತಕೋತ್ತರ ವಿವಿಧ ಕೋರ್ಸ್ ಗಳ ಪದವಿಗಳಿಗೆ ಪ್ರವೇಶ ಪ್ರಾರಂಭ ಪ್ರಾಚಾರ್ಯ ಮಂಜುನಾಥ್.

by | 13/05/24 | ಶಿಕ್ಷಣ


ಚಳ್ಳಕೆರೆ ಜನಧ್ವನಿ ವಾರ್ತೆ ಮೇ 13. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2024- 25ನೇ ಸಾಲಿನ ಪದವಿ ಹಾಗೂ ಸ್ನಾತಕೋತರ ಪದವಿಗಳಿಗೆ ಪ್ರವೇಶಗಳು ಪ್ರಾರಂಭವಾಗಿದ್ದು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳುವಂತೆ ಕೂಡಲೇ ಅರ್ಜಿ ಸಲ್ಲಿಸುವಂತೆ ಪ್ರಚಾರ್ಯ ಪ್ರೊ. ಬಿ ಎಸ್ ಮಂಜುನಾಥ್ ತಿಳಿಸಿದ್ದಾರೆ.
ಹೆಚ್ ಪಿ ಪಿ ಸಿ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಗ್ರಾಮೀಣ ಹಾಗೂ ವಿವಿಧ ತಾಲೂಕು ಕೇಂದ್ರಗಳಿಂದ ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಗೆ ವಸತಿ ನಿಯಲದ ವ್ಯವಸ್ಥೆ , ಗುಣ ಮಟ್ಟದ ನುರಿತ ಉಪನ್ಯಾಸಕರಿಂದ ಪಠ್ಯಭೋದನೆ, ಗ್ರಂಥಾಲಯ, ಪ್ರಯೋಗಾಲಯ, ಕ್ರೀಡೆ, ಎನ್ ಎನ್ಎಸ್ ಎಸ್ , ಸೇರಿದಂತೆ ವಿವಿಧ ಕೋರ್ಸ್ ಗಳಿದ್ದ್ಉ ಕಳೆದ ಸಾಲಿನಿಂದ ಬಿಸಿಎ ಕೋರ್ಸ್ ಆರಂಭಿಸಿದ್ದು ಉತ್ತಮ ಬೇಡಿಕೆ ಇದೆ ಈ ವಿಷಯದಲ್ಲಿ ವ್ಯಾಸಂಗ ಮಾಡಲು ಬೆಂಗಳೂರು ಸೇರಿದಂತೆ ವಿವಿಧನಗರದ ಖಾಸಗಿ ಕಾಲೇನಿನಲ್ಲಿ ದುಬಾರಿ ಶುಲ್ಕ ನೀಡಿ ವ್ಯಾಸಂಗ ಮಾಡ ಬೇಕಿತ್ತು ಈಗ ಚಳ್ಳಕೆರೆಯ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲೇ ಪ್ರಾರಂಭವಾಗಿದ್ದು ಯಾವುದೇ ಡೊನೇಷನ್ ಇಲ್ಲದೆ ಸಾರಕಾರಿ ಶುಲ್ಕ ಕಟ್ಟಿ ವ್ಯಾಸಂಗ ಮಾಡಬಹುತಾಗಿದೆ.
ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ದಾವಣಗೆರೆ ವಿಶ್ವವಿದ್ಯಾನಿಲಯದ ಅಡಿಯಲ್ಲಿ ಹೆಚ್ ಪಿ ಪಿ ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾರ್ಯ ನಿರ್ವಹಿಸುತ್ತಿದ್ದು ಕಾಲೇಜಿನಲ್ಲಿ ಉತ್ತಮ ಗುಣಮಟ್ಟದ ಬೋಧಕ ವರ್ಗವಿದ್ದು ವಿದ್ಯಾರ್ಥಿಗಳಿಗೆ ಕಲಿಯಲು ಉತ್ತಮ ಅನುಕೂಲಕರ ವಾತಾವರಣವಿದೆ ಕಾಲೇಜಿನಲ್ಲಿ ಬಿಎ ಪದವಿ ಬಿಎಸ್ಸಿ ಪದವಿ ಬಿ ಸಿ ಎ ಪದವಿ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ಪದವಿ ಸ್ನಾತಕೋತ್ತರ ಪದವಿಗಳಾದ ಎಂಎ ಕನ್ನಡ ಎಂ ಎ ಸಮಾಜಶಾಸ್ತ್ರ ಎಂಕಾಂ ಪದವಿಗಳು ಕಾರ್ಯ ಆರಂಭಿಸಿದ್ದು ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳು ಅರ್ಜಿಗಳನ್ನು ಕಾಲೇಜಿನ ಸಮಯದಲ್ಲಿ ಪಡೆದು ದಾಖಲಾತಿ ಪಡೆಯಬೇಕು ಎಂದು ತಿಳಿಸಿದರು.

ಬಿ ಸಿ ಎ ಪದವಿ ಕಡೆ ವಿದ್ಯಾರ್ಥಿಗಳ ಒಲವು: ಇತ್ತೀಚಿನ ದಿನಗಳಲ್ಲಿ ಇಂಜಿನಿಯರಿಂಗ್ ಪದವಿ ಪಡೆಯಬೇಕು ಎಂಬ ಮಹತ್ವಾಕಾಂಕ್ಷೆ ಹೊಂದುವ ವಿದ್ಯಾರ್ಥಿಗಳು ಪ್ರವೇಶಾತಿ ಸಿಗದಿದ್ದ ಸಂದರ್ಭದಲ್ಲಿ ಬಿಸಿಎ ಪದವಿಯನ್ನು ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಇದರಿಂದಾಗಿ ಇಂಜಿನಿಯರಿಂಗ್ ಪದವಿ ಸಮಾನವಾಗಿ ಬಿ ಸಿ ಎ ಪದವಿಗೆ ಹೆಚ್ಚಿನ ಒತ್ತನ್ನು ವಿದ್ಯಾರ್ಥಿಗಳು ನೀಡುತ್ತಿದ್ದಾರೆ ಹೆಚ್ಚಿನ ದಾಖಲಾತಿಗಳು ಬಿಸಿಎ ಪದವಿಗೆ ನಡೆಯುತ್ತಿವೆ ಎಂದು ಮಾಹಿತಿ ನೀಡಿದರು.

ಪತ್ರಿಕೋದ್ಯಮ ಪದವಿಗೆ ಆಸಕ್ತಿ ತೋರದ ವಿದ್ಯಾರ್ಥಿಗಳು: ಕಾಲೇಜಿನಲ್ಲಿ ಕಳೆದ ಸುಮಾರು ವರ್ಷಗಳಿಂದ ಪತ್ರಿಕೋದ್ಯಮ ಪದವಿ ಪ್ರಾರಂಭವಾಗಿದ್ದರೂ ಸಹ ವಿದ್ಯಾರ್ಥಿಗಳನ್ನು ಪತ್ರಿಕೋದ್ಯಮ ಪದವಿ ಆಕರ್ಷಿಸುವಲ್ಲಿ ಹಿಂದೆ ಬಿದ್ದಿದೆ ಇದಕ್ಕೆ ಮುಖ್ಯ ಕಾರಣ ವಿದ್ಯಾರ್ಥಿಗಳಿಗೆ ಮಾಹಿತಿ ಕೊರತೆ ಹಾಗೂ ಪೋಷಕರ ಅಸಡ್ಡೆ ಕಾರಣವಾಗಿದೆ ಪತ್ರಿಕೋದ್ಯಮ ಪದವಿ ಪಡೆದರೆ ಉದ್ಯೋಗ ದೊರೆಯುವುದಿಲ್ಲ ಎಂಬ ಕೀಳರುಮೆಯಿಂದ ಹೊರ ಬಂದಾಗ ಮಾತ್ರ ವಿಷಯಕ್ಕೆ ಮನ್ನಣೆ ದೊರೆತಂತಾಗುತ್ತದೆ
ಡಿಜಿಟಲ್ ಗ್ರಂಥಾಲಯವಿದ್ದು ವಿದ್ಯಾರ್ಥಿಗಳ ಅಧ್ಯಯನದ ಸಲುವಾಗಿ ಹೆಚ್ಚಿನ ಪುಸ್ತಕಗಳು ದೊರೆಯುತ್ತವೆ ಪಿ ಹೆಚ್ ಡಿ ಪಡೆದಿರುವ ಉತ್ತಮ ಬೋಧಕ ವರ್ಗ ವಿಜ್ಞಾನ ಪ್ರಯೋಗಾಲಯಗಳು ಡಿಜಿಟಲ್ ಲೈಬ್ರರಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಸ್ಟೆಲ್ ಸೌಲಭ್ಯ ಸುಸಜ್ಜಿತ ಗಣಕಯಂತ್ರ ಕೊಠಡಿ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕೌಶಲ್ಯ ಆಧಾರಿತ ತರಬೇತಿ ನೀಡಿ ಪ್ರಮಾಣ ಪತ್ರ ನೀಡುವುದು ಸೇರಿದಂತೆ ಹಲವು ಸೌಲಭ್ಯಗಳನ್ನು ಕಾಲೇಜು ವತಿಯಿಂದ ನೀಡಲಾಗುವುದು ತಾಲೂಕಿನಾದ್ಯಾಂತ ಆರು ವಲಯಗಳನ್ನಾಗಿ ರೂಪಿಸಿ ಐದು ಜನ ಒಳಗೊಂಡ 6 ತಂಡಗಳನ್ನಾಗಿ ರಚಿಸಲಾಗಿದ್ದು ಆ ತಂಡಗಳು ವಿವಿಧ ಪಿಯುಸಿ ಕಾಲೇಜುಗಳಿಗೆ ತೆರಳಿ ನಮ್ಮ ಕಾಲೇಜಿನಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಪ್ರಾಂಶುಪಾಲರಿಗೆ ಮಾಹಿತಿ ನೀಡಲಿದ್ದು ಹೆಚ್ಚಿನ ದಾಖಲಾತಿಗಳನ್ನು ಹೊಂದಲು ದಾಖಲಾತಿ ಆಂದೋಲನ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಹೆಚ್ಚಿನ ಮಾಹಿತಿಗಾಗಿ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರ ಕಛೇರಿಯಲ್ಲಿ ಸಂಪರ್ಕಿಸುವುದು ಪ್ರೊ. ಬಿ.ಎಸ್.ಮಂಜುನಾಥ್-ಪ್ರಾಂಶುಪಾಲರು: 8105683452 ಪ್ರೊ. ತಿಪ್ಪೇಸ್ವಾಮಿ ಹೆಚ್ – ಐ.ಕ್ಯೂ.ಎ.ಸಿ :9845590885 ತಾ.ಜಯಮ್ಮ.ಬಿ- ಕಲಾವಿಭಾಗ :9448960866 ಪ್ರೊ.ಎನ್.ಹೆಚ್.ಹನುಮಂತರಾಯಪ್ಪ- ವಿಜ್ಞಾನ ವಿಭಾಗ: 9448728426 ಪ್ರೊ. ಹೆಚ್.ರಂಗಸ್ವಾಮಿ – ವಾಣಿಜ್ಯ ವಿಭಾಗ: 8197320544 ಪ್ರೊ.ಆರ್.ಎನ್.ಚನ್ನಕೇಶವ – ಬಿ.ಸಿ.ಎ ವಿಭಾಗ: 9448133034 ಡಾ.ಚಿತ್ತಯ್ಯ,ಕೆ -ಸಹ ಪ್ರಧ್ಯಾಪಕರು : 9448567118 ಡಾ.ಪಾಪಣ್ಣ.ಎಸ್-ಗ್ರಂಥಪಾಲಕರು : 7619164271 ಶ್ರೀ.ಕೆ.ಎನ್.ಬಸಣ್ಣಗೌಡ-ವ್ಯವಸ್ಥಾಪಕರು:7996531224

ಈ ಸಂದರ್ಭದಲ್ಲಿ ಉಪನ್ಯಾಸಕರುಗಳಾದ ಹೆಚ್.ಟಿ.ತಿಪ್ಪೇಸ್ವಾಮಿ ಗಂಗಾಧರ್ ಕೆ ಚಿತ್ತಯ್ಯ ಇದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page